ಬೆಂಗಳೂರು ದಿಂಡಿಗಲ್‌ ರಸ್ತೆ ಕಾಮಗಾರಿ ಸ್ಥಗಿತ


Team Udayavani, Jan 17, 2020, 2:40 PM IST

rn-tdy-1

ರಾಮನಗರ: ಬೆಂಗಳೂರು ದಿಂಡಿಗಲ್‌ ರಾಷ್ಟ್ರೀಯ ಹೆದ್ಧಾರಿ 209 ರಲ್ಲಿ ಅಭಿವೃದ್ಧಿ ಕಾಮಗಾರಿ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ರಸ್ತೆ ನಿರ್ಮಾಣ ಸಂಸ್ಥೆಯ ಆರ್ಥಿಕ ಸ್ಥಿತಿ ಕಾರಣ ಕಾರಣ ಎಂದು ಹೆದ್ದಾರಿ ಪ್ರಾಧಿಕಾರದ ದಾಖಲೆಗಳು ಸ್ಪಷ್ಟಪಡಿಸಿದೆ ಎಂದು ಆರ್‌.ಟಿ.ಐ ಕಾರ್ಯಕರ್ತ ರವಿಕುಮಾರ್‌ ಕಂಚನಹಳ್ಳಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ತಮಿಳುನಾಡಿನ ದಿಂಡಿಗಲ್‌ ವರೆಗೆ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಗೆ ಕೇಂದ್ರ ಸರ್ಕಾರ ಮತ್ತು ನಿರ್ಮಾಣ ಸಂಸ್ಥೆ (ಸದ್ಬವ್‌ ಬೆಂಗಳೂರು ಹೈವೆ ಪ್ರೈ.ಲಿ) ಶೇ. 40-60 ಅನುಪಾತ ದಲ್ಲಿ ಬಂಡವಾಳ ಹೂಡಿ ರಸ್ತೆ ನಿರ್ಮಿಸಬೇಕಾಗಿದೆ. ಕೇಂದ್ರ ಸರ್ಕರ ತನ್ನ ಪಾಲಿನ 403 ಕೋಟಿ ರೂ. ಪೈಕಿ 362.76 ಅಂದರೆ ಶೇ. 90 ರಷ್ಟು ಹಣವನ್ನು ನಿರ್ಮಾಣ ಸಂಸ್ಥೆಗೆ ಬಿಡುಗಡೆ ಮಾಡಿದೆ. ಕಳೆದ 4-5 ತಿಂಗಳುಗಳಿಂದ ರಸ್ತೆ ಅಭಿವೃದ್ದಿ ಕಾಮಗಾರಿ ಸ್ಥಗಿತಗೊಂಡಿದ್ದು, ಇದಕ್ಕೆ ಗುತ್ತಿಗೆದಾರ ಸಂಸ್ಥೆಯ ಆರ್ಥಿಕ ಕೊರತೆ ಕಾರಣ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕ-ರಾಮನಗರದ ಯೋಜನಾ ನಿರ್ದೆಶಕರು ನೀಡಿರುವ ದಾಖಲೆಗಳು ಸ್ಪಷ್ಟಪಿಡಿಸಿವೆ ಎಂದು ರವಿಕುಮಾರ್‌ ತಿಳಿಸಿದ್ದಾರೆ.

ಒಟ್ಟು 1,962 ರೂ. ವೆಚ್ಚದ ಈ ಹೆದ್ಧಾರಿ ರಸ್ತೆ ಕಾಮಗಾರಿಗೆ 1,008 ಕೋಟಿ ರೂ. ನಿರ್ಮಾಣಕ್ಕೆ ವೆಚ್ಚವಾಗಲಿದೆ. ಉಳಿದ ಹಣ ಭೂ ಸ್ವಾಧೀನಕ್ಕೆ ಬಳಕೆಯಾಗಿದೆ. 1008 ಕೋಟಿ ರೂ. ಪೈಕಿ ಕೇಂದ್ರ ಸರ್ಕಾರ ತನ್ನ ಪಾಲಿನ ಶೇ.90ರಷ್ಟು ಹಣವನ್ನು ಕೊಟ್ಟಿದೆ. ಆದರೆ ಇಲ್ಲಿಯವರೆಗೆ ಕೇವಲ ಶೇ. 20ರಷ್ಟು ಮಾತ್ರ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಹ ದಾಖಲೆಗಳು ತಿಳಿಸಿವೆ.

ನಿರ್ಮಾಣ ಸಂಸ್ಥೆಯ ಆರ್ಥಿಕ ಸ್ಥಿತಿಗತಿಯನ್ನು ಗಮನಿಸಿದೆ ಎನ್‌ಎಚ್‌ 209 ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೊಣೆ ಹೊರೆಸಿದ್ದು ಹೇಗೆ, ಶೇ 20ರಷ್ಟು ಕಾಮಗಾರಿಗೆ 362 ಕೋಟಿ ರೂ ವೆಚ್ಚವಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಸದರಿ ಸದ್ಬವ್‌ ಸಂಸ್ಥೆ ಗುಜರಾತ್‌ ಮೂಲದ ಸಂಸ್ಥೆಯಾಗಿದೆ. ಎಲ್ಲಾ ನಿರ್ದೇಶಕರು ಗುಜರಾತ್‌ ನವರೇ ಆಗಿದ್ದು, ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರ ಕೃಪಾ ಕಟಾಕ್ಷವಿದೆ ಎಂದು ಹೇಳಲಾಗಿದೆ.

ರಸ್ತೆ ನಿರ್ಮಾಣ ಸಂಸ್ಥೆಗೆ ಆರ್ಥಿಕ ಕೊರತೆ ಹೇಗೆ ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ ಎಂದಿದ್ದಾರೆ. ರಸ್ತೆ ನಿರ್ಮಾಣ ಸಂಬಂಧ ರಸ್ತೆ ಅಗೆದು ಹಾಕಲಾಗಿದೆ. ಇದು ವಾಹನ ಸವಾರರಿಗೆ ಅತೀವ ತೊಂದರೆಯಾಗಿದೆ. ರಾಜ್ಯ ಸರ್ಕಾರ ಕೂಡಲೆ ಈ ವಿಚಾರದತ್ತ ಗಮನ ಹರಿಸಬೇಕು ಎಂದು ಅವರ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.