ತುಂಗಭದ್ರೆ ತಟದಲ್ಲಿ ಸಂಕ್ರಾಂತಿ ಸಂಭ್ರಮ-ಭೂರಿ ಭೋಜನ


Team Udayavani, Jan 17, 2020, 4:43 PM IST

17-January-19

ಹರಿಹರ: ಸಂಕ್ರಾಂತಿ ಹಬ್ಬದ ನಿಮಿತ್ತ ಬುಧವಾರ ನಗರದ ತುಂಗಭದ್ರಾ ನದಿ ದಡದಲ್ಲಿ ಸಾವಿರಾರು ಜನರು ಗಂಗಾಪೂಜೆ ನೆರವೇರಿಸಿ, ಸಂಭ್ರಮದ ಸಂಕ್ರಾಂತಿ ಆಚರಿಸಿದರು.

ಎತ್ತಿನ ಬಂಡಿ, ಟ್ರ್ಯಾಕ್ಟರ್‌, ಕಾರು, ಆಟೋ, ದ್ವಿಚಕ್ರವಾಹನಗಳಲ್ಲಿ ಜನರು ಕುಟುಂಬಸ್ಥರು, ಸ್ನೇಹಿತರೊಂದಿಗೆ ಬಂದು ನದಿ ದಡದಲ್ಲಿ ಜಮಾಯಿಸಿದ್ದರು. ನದಿಯ ಪಶ್ಚಿಮ ಭಾಗವಾದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಎಂದಿನಂತೆ ಹೆಚ್ಚಿನ ಜನಸಂದಣಿ ಇತ್ತು. ಪೂರ್ವ ಭಾಗದ ವಾಟರ್‌ವರ್ಕ್ಸ್, ರೈಲ್ವೆ ಸೇತುವೆ, ರಾಘವೇಂದ್ರ ಮಠದ ಸಮೀಪವೂ ಜನರು ಸೇರಿದ್ದರು.

ವಿಶಿಷ್ಟ ಭಕ್ಷ್ಯ ಭೋಜನ: ಬಿರು ಬಿಸಿಲಿನ ಚುರುಕಿನಲ್ಲೂ ಮರಳಿನ ಮೇಲೆ ಜನರು ಗುಂಪು-ಗುಂಪಾಗಿ ಕುಳಿತು ಜೋಳ-ಸಜ್ಜೆಯ ಖಡಕ್‌ ರೊಟ್ಟಿ, ಬಿಸಿ ಚಪಾತಿ, ಮುಳಗಾಯಿ, ಬೆಂಡೆಕಾಯಿ, ಆಲೂಗಡ್ಡೆ, ಕಡ್ಲೆ, ಹೆಸರುಕಾಳು, ಬಟಾಣಿ, ಮಡಿಕೆ ಮತ್ತಿತರೆ ಪಲ್ಯಗಳು ಜೊತೆಗೆ
ಶೇಂಗಾ, ಎಳ್ಳು, ಕೊಬ್ಬರಿ, ಹಸಿಮೆಣಸು, ಕೆಂಪುಮೆಣಸು, ಕುರುಶಿಣಿ ಚಟ್ನಿಗಳು, ಅಲ್ಲದೇ ಬಿಳಿ ಅನ್ನ, ಚಿತ್ರಾನ್ನ, ಒಗ್ಗರಣೆ ಬುತ್ತಿ ಜೊತೆಗೆ, ಈರುಳ್ಳಿ, ಸಾಂಬಾರು, ಮೊಸರು, ಮಜ್ಜಿಗೆ ಒಳಗೊಂಡ ರುಚಿ ರುಚಿ ಊಟ ಸವಿದರು.

ಸ್ನಾನದ ಮಜ: ಕಳೆದ ಮೂರ್‍ನಾಲ್ಕು ವರ್ಷ ಸಂಕ್ರಾಂತಿ ವೇಳೆ ನದಿಯ ಒಡಲು ಬತ್ತಿರುತ್ತಿತ್ತು. ಪ್ರಸಕ್ತ ವರ್ಷ ನದಿಯಲ್ಲಿ ನೀರಿರುವ ಕಾರಣ ಯುವಕ-ಯುವತಿಯರು, ಕಿರಿಯರು-ಹಿರಿಯರೆಂಬ ಭೇದವಿಲ್ಲದೇ ನದಿ ನೀರಿನಲ್ಲಿ ಈಜಾಡಿ ಸ್ನಾನದ ಮಜಾ ಅನುಭವಿಸಿದರು.

ನೆರಳಿಗೆ ಡೇರೆ: ಅಯ್ಯಪ್ಪ ಸ್ವಾಮಿ ದೇವಾಲಯ, ರಾಘವೇಂದ್ರ ಮಠ, ಚಿತ್ರಾ ಟಾಕೀಸ್‌ ಹಿಂಭಾಗ, ರೈಲ್ವೆ ಸೇತುವೆ, ಹಳೆಯ ನೀರು ಸರಬರಾಜು ಕೇಂದ್ರದ ಆವರಣದಲ್ಲಿ ಜನರು ಬಿಸಿಲಿನ ಧಗೆಯಿಂದ ರಕ್ಷಿಸಿಕೊಳ್ಳಲು ಅಲ್ಲಲ್ಲಿ ಡೇರೆಗಳನ್ನು(ಟೆಂಟ್‌) ಹಾಕಿಕೊಂಡಿದ್ದರು. ಕೆಲವರು ತಮ್ಮ ವಾಹನಗಳನ್ನೇ ಸೂರ್ಯ ರಶ್ಮಿಗೆ ಅಡ್ಡ ನಿಲ್ಲಿಸಿ ನೆರಳು ಮಾಡಿಕೊಂಡಿದ್ದರು.

ಹರಿಹರ, ದಾವಣಗೆರೆ, ರಾಣೆಬೆನ್ನೂರು, ಹಾವೇರಿ, ಬ್ಯಾಡಗಿ ಇತರೆ ಭಾಗದಿಂದ ಜನರು ಆಗಮಿಸಿದ್ದರು. ತುಂಗ, ಭದ್ರಾ, ಹರಿದ್ರಾವತಿ ಹೀಗೆ ತ್ರಿವೇಣಿ ಸಂಗಮದ ಛಾಪು ಇಲ್ಲಿ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಉಳಿದಂತೆ ನದಿ ಸಾಲಿನ ತಾಲೂಕಿನ ಗ್ರಾಮಗಳಾದ ಬಿಳಸನೂರು, ನಂದಿಗಾವಿ, ಚಿಕ್ಕಬಿದರಿ, ಸಾರಥಿ, ಗುತ್ತೂರು, ಹರ್ಲಾಪುರ, ಹಲಸಬಾಳು, ರಾಜನಹಳ್ಳಿ, ಎಳೆಹೊಳೆ, ಧೂಳೆಹೊಳೆ, ನಂದಿಗುಡಿ, ಉಕ್ಕಡಗಾತ್ರಿ, ಕೊಮಾರನಹಳ್ಳಿ ಹಾಗೂ ದೇವರಬೆಳೆಕೆರೆ, ಕೆರೆಯಂಗಳದಲ್ಲೂ ಜನ ಸಂಕ್ರಾಂತಿ ಆಚರಿಸಿದರು. ಕೊಮಾರನಹಳ್ಳಿ, ದೇವರಬೆಳೆಕೆರೆ, ಕೆರೆಯಂಗಳದಲ್ಲೂ ಜನ ಸಂಕ್ರಾಂತಿ ಸಂಭ್ರಮಿಸಿದರು. ಧೂಳೆಹೊಳೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.