ಸಿರುಗುಪ್ಪ ನಗರಸಭೆ ಚುನಾವಣೆಗೆ ಮುಹೂರ್ತ
ವರ್ಷದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೇ ಅಧಿ ಕಾರಿಗಳ ಹಿಡಿತದಲ್ಲಿದ್ದ ಆಡಳಿತ
Team Udayavani, Jan 17, 2020, 12:35 PM IST
ಸಿರುಗುಪ್ಪ: ಕಳೆದ ಒಂದು ವರ್ಷದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೇ ಚುನಾವಣೆ ನಡೆಯದೇ ಅಧಿಕಾರಿಗಳ ಹಿಡಿತದಲ್ಲಿದ್ದ ಸಿರಗುಪ್ಪ ನಗರಸಭೆಗೆ ಕೊನೆಗೂ ಚುನಾವಣೆ ಘೋಷಣೆಯಾಗಿದ್ದು ನೂತನ ಜನಪ್ರತಿನಿಧಿಗಳ ಆಯ್ಕೆಗೆ ಮೂಹೂìತ ನಿಗದಿಯಾಗಿದೆ.
ಸಿರುಗುಪ್ಪ ನಗರಸಭೆ ಅವ ಧಿ 2019ರ ಮಾರ್ಚ್ಗೆ ಮುಕ್ತಾಯವಾಗಿದ್ದು, ಇದೇ ವೇಳೆಗೆ ನೂತನ ಜನಪ್ರತಿನಿಧಿಗಳ ಆಯ್ಕೆ ನಡೆಯಬೇಕಿತ್ತು. ಆದರೆ ಸರ್ಕಾರ ಘೋಷಣೆ ಮಾಡಿದ ಮೀಸಲಾತಿ ಪ್ರಶ್ನಿಸಿ ನ್ಯಾಯಾಲಯದ ಮೊರೆಹೋದ ಪರಿಣಾಮ ಚುನಾವಣೆಗೆ ತಡೆಬಿದ್ದಿತ್ತು.
ಪ್ರಸ್ತುತ ನಗರಸಭೆಗೆ ಚುನಾವಣಾ ದಿನಾಂಕ ನಿಗಪಡಿಸಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜ. 21ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಜ. 28ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜ. 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜ.31ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಫೆ.9ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆವರೆಗೆ ಚುನಾವಣೆ ನಡೆಯಲಿದೆ.
ಮರು ಮತದಾನ ಅಗತ್ಯವಿದ್ದಲ್ಲಿ ಫೆ. 10ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಡೆಯಲಿದೆ. ಫೆ. 11ರಂದು ಬೆಳಗ್ಗೆ 8ಗಂಟೆಯಿಂದ ತಾಲೂಕು ಕೇಂದ್ರಸ್ಥಾನದಲ್ಲಿ ಮತಗಳ ಎಣಿಕೆ ನಡೆಯಲಿದೆ. ಫೆ. 9ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಜ. 14ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ.
ಮೀಸಲಾತಿ ವಿವರಗಳು: ಸಾಮಾನ್ಯ ಕ್ಷೇತ್ರಗಳು 8, ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರಗಳು 8, ಹಿಂದುಳಿದ ವರ್ಗಗಳ ಎ ಮಹಿಳಾ ಮೀಸಲು ಕ್ಷೇತ್ರ 3, ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರ 3,ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರ 1, ಪ.ಜಾತಿ ಮಹಿಳಾ ಮೀಸಲು ಕ್ಷೇತ್ರ 3, ಪ.ಜಾತಿ ಮೀಸಲು ಕ್ಷೇತ್ರ 3, ಪ. ಪಂಗಡ ಮಹಿಳಾ ಮೀಸಲು ಕ್ಷೇತ್ರ 1, ಪ.ಪಂಗಡ ಮೀಸಲು ಕ್ಷೇತ್ರ 1, ಒಟ್ಟು 31 ಕ್ಷೇತ್ರಗಳು.
31 ವಾರ್ಡ್ಗಳ ಮೀಸಲಾತಿ ವಿವರ: ಸಾಮಾನ್ಯ ವಾರ್ಡ್ 2, 7, 10, 11, 18, 21, 28, 31 ಸಾಮಾನ್ಯ ಮಹಿಳೆ, ವಾರ್ಡ್ ನಂ 1, 3, 13, 22, 23, 24, 29, 30 ಹಿಂದಳಿದ ವರ್ಗ ಎ ಮಹಿಳೆ, ವಾರ್ಡ್ 4, 9, 15 ಹಿಂದುಳಿದ ವರ್ಗ ಎ, ವಾರ್ಡ್ ನಂ 5, 16, 20 ಹಿಂದುಳಿದ ವರ್ಗ ಬಿ, ವಾರ್ಡ್ ನಂ. 6,ಪ. ಜಾತಿ ಮಹಿಳೆ, ವಾರ್ಡ್ ನಂ. 17, 25, 27 ಪ.ಜಾತಿ, ವಾರ್ಡ್ ನಂ 8,12,14 ಪ.ಪಂಗಡ ಮಹಿಳೆ, ವಾರ್ಡ್ ನಂ. 19 ,26 ಪ.ಪಂಗಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ