ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರೈತರ ಭೂ ಸ್ವಾಧೀನ


Team Udayavani, Jan 18, 2020, 3:00 AM IST

bypass

ಕೊಳ್ಳೇಗಾಲ: ಕಳೆದ 7 ವರ್ಷಗಳಿಂದ ತಾಲೂಕಿನ ಹರಳೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 209 ನಾಲ್ಕು ಪಥದ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರೈತರು ಜಮೀನು ನೀಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಪೊಲೀಸ್‌ ಭದ್ರತೆಯಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡು, ರಸ್ತೆಯ ಎರಡು ಬದಿಯಲ್ಲಿ ಗುಂಡಿ ತೆಗೆದು ಜಮೀನುಗಳನ್ನು ವಶಪಡಿಸಿಕೊಂಡಿದೆ.

ಬೆಳಂಬೆಳಗ್ಗೆ ಸುಮಾರು 4.30ರ ಸಮಯದಲ್ಲಿ ಜಿಲ್ಲಾಡಳಿತದಿಂದ ಅಧಿಕಾರಿಗಳು ಬಾರಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಬೈಪಾಸ್‌ ರಸ್ತೆಗೆ ಭೂಮಿ ನೀಡದೆ ಸತಾಯಿಸುತ್ತಿದ್ದ ರೈತರ ಜಮೀನನ್ನು ವಶಪಡಿಸಿಕೊಳ್ಳಲು, ಜೆಸಿಬಿ ಯಂತ್ರಗಳ ಮೂಲಕ ಸದ್ದು ಮಾಡಿ ರಸ್ತೆ ನಿರ್ಮಾಣಕ್ಕೆ ಅಡಚಣೆ ಉಂಟು ಮಾಡುವ ರೈತರನ್ನು ತಡೆಗಟ್ಟಲು ಪೊಲೀಸ್‌ ಬಿಗಿ ಕಾವಲು ಏರ್ಪಟ್ಟಿತ್ತು.

ರೈತರ ಹೊಟ್ಟೆ ಮೇಲೆ ಹೊಡೆಯಬೇಡಿ: ಈ ಸಂದರ್ಭದಲ್ಲಿ ಜಮೀನಿನ ಮಾಲೀಕರಾದ ಸಿದ್ದಯ್ಯ ಅವರು, ನಾನು ಜಮೀನಿನಲ್ಲಿ ಭತ್ತ ಹಾಕಿದ್ದು, ಇನ್ನು 15 ದಿನಗಳ ಒಳಗಾಗಿ ಫ‌ಸಲು ಕೈ ಸೇರಲಿದೆ. ಅಲ್ಲಿಯವರೆಗೆ ಅವಕಾಶ ಕೊಡಬೇಕು. ಈಗಾಗಲೇ ಜಮೀನಿನಲ್ಲಿ ಭತ್ತ ಬೆಳೆಯಲು ಸಾಕಷ್ಟು ಲಕ್ಷಾಂತರ ರೂ. ಹಣ ಖರ್ಚು ಮಾಡಿದ್ದು, ರೈತರ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದು ಕಣ್ಣೀರಿಟ್ಟು ಮನವಿ ಮಾಡಿದರು.

ಬೆಳೆ ನಷ್ಟಕ್ಕೆ ಪರಿಹಾರ ನೀಡಿ: ಸಂಪೂರ್ಣ ಭತ್ತವಾಗಲು 15 ದಿನಗಳ ಕಾಲಾವಕಾಶ ಬೇಕು. ಈಗ ಭತ್ತ ಹಾಲಿನಿಂದ ಕೂಡಿದ್ದು, ಈ ಭತ್ತ ಯಾವುದಕ್ಕೂ ಪ್ರಯೋಜನಕ್ಕೆ ಬರುವುದಿಲ್ಲ. ಕಟಾವು ಮಾಡುವುದರಿಂದ ನನಗೆ ಅನ್ಯಾಯವೇ ಹೊರತು, ಬೇರೆ ಯಾರಿಗೂ ಅನ್ಯಾಯವಾಗುವುದಿಲ್ಲ. ನನಗೂ ರಸ್ತೆ ನಿರ್ಮಾಣ ಮಾಡಲು ಒಪ್ಪಿಗೆ ಇದೆ. ಆದರೆ, ಕಾಲಾವಕಾಶ ನೀಡದೆ ಈ ರೀತಿ ತರಾತುರಿಯಲ್ಲಿ ಬೆಳೆ ನಷ್ಟ ಉಂಟು ಮಾಡುತ್ತಿರುವುದರಿಂದ ಬೆಳೆ ನಷ್ಟಕ್ಕೆ ಪರಿಹಾರ ಮಂಜೂರು ಮಾಡಿಕೊಡಬೇಕು ಎಂದು ಅಧಿಕಾರಿಗಳ ಮುಂದೆ ದಂಬಾಲು ಬಿದ್ದರು.

ರೈತನ ಕಣ್ಣೀರಿಗೆ ಬೆಲೆ ನೀಡಲಿಲ್ಲ: ರೈತನ ಕಣ್ಣೀರಿಗೆ ಬೆಲೆ ನೀಡದ ಅಧಿಕಾರಿಗಳು, ಜೊತೆಯಲ್ಲಿಯೇ ಕರೆದುತಂದಿದ್ದ ಕೂಲಿ ಕಾರ್ಮಿಕರು ಹಾಗೂ ಭತ್ತದ ಕಟಾವು ಯಂತ್ರದಿಂದ ಎರಡು ಎಕರೆ ಜಮೀನಿನಲ್ಲಿ ಹಾಕಲಾಗಿದ್ದ ಭತ್ತದ ಬೆಳೆಯನ್ನು ಕತ್ತರಿಸುವ ಮೂಲಕ ಸುಮಾರು 8 ಕಿ.ಮೀ ವರೆಗೆ ರಸ್ತೆ ನಿರ್ಮಾಣ ಮಾಡಲು ಜಮೀನುಗಳನ್ನು ವಶಪಡಿಸಿಕೊಂಡರು.

2013ರಲ್ಲಿ ರೈತರ ಜಮೀನು ಖರೀದಿ: ಈ ವೇಳೆ ಸುದ್ದಿಗಾರರೊಂದಿಗೆ ಮೈಸೂರಿನ ಭೂಸ್ವಾಧೀನ ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್‌ ಮಾತನಾಡಿ, ಬೈಪಾಸ್‌ ರಸ್ತೆ ನಿರ್ಮಾಣ ಮಾಡಲು ಕಳೆದ 2013ರಲ್ಲಿ ಜಮೀನು ಖರೀದಿ ವೇಳೆ ಎಲ್ಲಾ ರೈತರು ಜಮೀನು ನೀಡಿದ್ದಾರೆ. ಈ ರೈತರ ಪೈಕಿ ಶಿವಮ್ಮ, ಸಣ್ಣಮ್ಮ, ಮಹದೇವ, ಸವಿತಾ, ಸುಂದ್ರಮ್ಮ, ಚಿಕ್ಕಮಾದಯ್ಯ ಅವರು ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಏಳು ವರ್ಷಗಳ ಬಳಿಕ ನ್ಯಾಯಾಲಯ ರಸ್ತೆ ನಿರ್ಮಾಣಕ್ಕೆ ತೀರ್ಪು ನೀಡಿತು ಎಂದರು.

ನ್ಯಾಯಾಲಯದಲ್ಲೇ ಅನುದಾನ ಪಡೆಯಿರಿ: ಬೈಪಾಸ್‌ ರಸ್ತೆ ನಿರ್ಮಾಣಕ್ಕೆ 181 ರೈತರಿಂದ ಜಮೀನು ಖರೀದಿ ಮಾಡಲಾಗಿದೆ. ಇದರ ಪೈಕಿ 6 ಜನರು ಜಮೀನು ನೀಡದೆ ನ್ಯಾಯಾಲಯದ ಮೊರೆ ಹೋಗಿದ್ದರು. ಆರು ಜನರ ಜಮೀನಿನ ಅನುದಾನವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಈಗ ನ್ಯಾಯಾಲಯವು ರಸ್ತೆ ನಿರ್ಮಾಣಕ್ಕೆ ಆದೇಶ ನೀಡಿದೆ. ಅನುದಾನವನ್ನು ನ್ಯಾಯಾಲಯದಲ್ಲೇ ರೈತರು ಪಡೆದುಕೊಳ್ಳುವ ಅವಕಾಶವಿದೆ ಎಂದು ಹೇಳಿದರು.

ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಹೈಕೋರ್ಟ್‌ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯ ರಸ್ತೆ ನಿರ್ಮಾಣಕ್ಕೆ ತೀರ್ಪು ನೀಡಿದ್ದರ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸುಮಾರು 8 ಕಿ.ಮೀ ರಾಷ್ಟ್ರೀಯ ಹೆದ್ದಾರಿ 209 ಬೈಪಾಸ್‌ ರಸ್ತೆ ಶೀಘ್ರದಲ್ಲೇ ರಸ್ತೆ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

ಜಮೀನುಗಳ ಮಧ್ಯ ರಸ್ತೆ ನಿರ್ಮಾಣ: ಬೈಪಾಸ್‌ ರಸ್ತೆ ಜಮೀನುಗಳ ಮಧ್ಯ ಭಾಗದಲ್ಲಿ ನಿರ್ಮಾಣವಾಗುವುದರಿಂದ ಅಕ್ಕಪಕ್ಕಗಳಲ್ಲಿರುವ ರೈತರ ಜಮೀನುಗಳಿಗೆ ಸಾಕಷ್ಟು ಬೇಡಿಕೆ ಬರಲಿದೆ. ಎರಡು ರಸ್ತೆ ಬದಿಯಲ್ಲಿ ಅನೇಕ ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಬಹುದು. ಇದರಿಂದ ಪಟ್ಟಣ ಅಭಿವೃದ್ಧಿಯಾಗಲಿದೆ. ಬೈಪಾಸ್‌ ರಸ್ತೆ ನಿರ್ಮಾಣದಿಂದ ಪಟ್ಟಣದಲ್ಲಿ ವಾಹನಗಳ ಸಂಚಾರ ಸುಗಮವಾಗುವುದರಿಂದ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕಿದಂತೆ ಆಗುತ್ತದೆ. ಮತ್ತೆ ಪಟ್ಟಣ ಅಭಿವೃದ್ಧಿ ಆಗಲಿದೆ, ಇದಕ್ಕೆ ಪ್ರಯೊಬ್ಬ ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಾಮರಾಜನಗರ ಡಿವೈಎಸ್‌ಪಿ ಮೋಹನ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌, ಇನ್ಸ್‌ಪೆಕ್ಟರ್‌ ರವಿ ನಾಯ್ಕ, ಎಸ್‌ಐಗಳಾದ ರಾಜೇಂದ್ರ, ಅಶೋಕ್‌, ವಿಶೇಷ ಭೂ ಸ್ವಾಧೀನಾಧಿಕಾರಿ ಕೆಂಪೇಗೌಡ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಭೂ ಸ್ವಾಧೀನ ಅಧಿಕಾರಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರು ಹಾಜರಿದ್ದರು.

ರೈತರಿಗೆ ಸೂಕ್ತ ಪರಿಹಾರ: ರಸ್ತೆ ನಿರ್ಮಾಣಕ್ಕೆ ಜಮೀನು ಬಿಟ್ಟು ಕೊಡುವಂತೆ ಜಿಲ್ಲಾಡಳಿತ ಮತ್ತು ತಹಶೀಲ್ದಾರ್‌, ಉಪ ವಿಭಾಗ ಅಧಿಕಾರಿಗಳು ಹಲವು ಬಾರಿ ನೋಟಿಸ್‌ ಜಾರಿ ಮಾಡಿದ್ದರು. ಅಲ್ಲದೆ, ಮೌಖಿಕವಾಗಿ ಮನವಿ ಮಾಡಲಾಗಿತ್ತು. ರಸ್ತೆ ಬರುವ ಜಮೀನುಗಳಲ್ಲಿ ಯಾವುದೇ ತರಹದ ಬೆಳೆ ಹಾಕಬಾರದು ಎಂದು ಹಲವು ಬಾರಿ ಸೂಚನೆ ನೀಡಲಾಗಿದೆ. ಅಧಿಕಾರಿಗಳ ಸೂಚನೆಯನ್ನು ನಿರ್ಲಕ್ಷ್ಯ ಮಾಡಿ, ಕೆಲವು ರೈತರು ಬೆಳೆಗಳನ್ನು ಬೆಳೆದಿದ್ದು, ಅವರಿಗೆ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದು ಮೈಸೂರಿನ ಭೂ ಸ್ವಾಧೀನ ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್‌ ತಿಳಿಸಿದರು.

ಹೈಕೋರ್ಟ್‌ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದ ತೀರ್ಪಿನ ಅನ್ವಯ ಎಲ್ಲಾ ರೈತರಿಗೂ ಸೂಚನೆ ನೀಡಿ, ಭೂಮಿ ವಶಪಡಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಯಾವ ರೈತರಿಗೂ ಅನ್ಯಾಯವಾಗದಂತೆ ಭೂಮಿ ವಶ ಕಾರ್ಯ ನಡೆಯಲಿದೆ.
-ನಿಖಿತ ಎಂ.ಚಿನ್ನಸ್ವಾಮಿ, ಉಪ ವಿಭಾಗಾಧಿಕಾರಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.