ಸಾಲಿಗ್ರಾಮ ಗುರುನರಸಿಂಹ ದೇಗುಲ:ಅದ್ದೂರಿ ಜಾತ್ರೆ
ಸಾವಿರಾರು ಮಂದಿ ಭಕ್ತರು ಭಾಗಿ; ದೇಗುಲಕ್ಕೆ ವಿಶೇಷ ಪುಷ್ಪಾಲಂಕಾರ; ಕಾರಂತ ಬೀದಿಗೆ ವಿದ್ಯುತ್ ಅಲಂಕಾರ
Team Udayavani, Jan 18, 2020, 5:10 AM IST
ಕೋಟ: ಪುರಾಣ ಪ್ರಸಿದ್ಧ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಜಾತ್ರೆ ಜ.17ರಂದು ಜರಗಿತು. ಈ ಸಂದರ್ಭ ಬ್ರಹ್ಮರಥಕ್ಕೆ ಪೂರ್ವಭಾವಿಯಾಗಿ ಬೆಳಗ್ಗೆ ಸಾವಿರಾರು ಭಕಾದಿಗಳ ಸಮ್ಮುಖದಲ್ಲಿ ರಥಾರೋಹಣ ಕಾರ್ಯಕ್ರಮ ನೆರವೇರಿತು.
ಈ ಪ್ರಯುಕ್ತ ಜ.15ರಿಂದ ನರಸಿಂಹ ಹೋಮ, ಗಣಹೋಮ, ರಜತ ರಥೋತ್ಸವ, ಧ್ವಜಾರೋಹಣ, ವೇದ ಪಾರಾಯಣ, ಸುತ್ತು ಸೇವೆ, ರಜತಪಲ್ಲಕಿ ಉತ್ಸವ, ಕಟ್ಟೆ ಓಲಗ, ಹಿರಿರಂಗಪೂಜೆ, ಪುಷ್ಪರಥೋತ್ಸವ ಮುಂತಾದ ಕಾರ್ಯಕ್ರಮಗಳು ನಡೆದಿದ್ದು, ಜ.17ರಂದು ಬೆಳಗ್ಗೆ ಹೋಮ, ರಥಶುದ್ಧಿ ಕಲಶಾಭಿಶೇಕ ಮುಂತಾದ ಉತ್ಸವಾದಿ ಕಾರ್ಯಕ್ರಮಗಳ ಅನಂತರ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ರಥದಲ್ಲಿರಿಸಿ ವೇದಘೋಷದೊಂದಿಗೆ ಆಂಜನೇಯ ದೇವಸ್ಥಾನದವರೆಗೆ ರಥಾರೋಹಣಗೈಯಲಾಯಿತು.
ಭಕ್ತಾದಿಗಳು ಆಂಜನೇಯ ಹಾಗೂ ಗುರುನರಸಿಂಹನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅನ್ನಸಂತರ್ಪಣೆ ಮತ್ತು ಪಾನಕ, ಪನಿವಾರ ಸೇವೆ ನಡೆಯಿತು.
ಗುರುನರಸಿಂಹ ದೇವಸ್ಥಾನವನ್ನು ದೇಗುಲದ ವತಿಯಿಂದ ಹಾಗೂ ಆಂಜನೇಯ ದೇವಸ್ಥಾನವನ್ನು ಆಂಜನೇಯ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಹೂವಿನ ಅಲಂಕಾರದಿಂದ ಶೃಂಗರಿಸಲಾಯಿತು.
ಕಾರಂತ ಬೀದಿಯ ದಕ್ಷಿಣಭಾಗವನ್ನು ಬನಶ್ರೀ ಫ್ರೆಂಡ್ಸ್ ವತಿಯಿಂದ ಹಾಗೂ ಉತ್ತರ ಭಾಗವನ್ನು ಸ್ಥಳೀಯ ಭಕ್ತಾದಿಗಳ ವತಿಯಿಂದ ವಿದ್ಯುತ್ ದೀಪದಿಂದ ಶೃಂಗರಿಸಲಾಗಿತ್ತು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು, ತಂತ್ರಿಗಳು, ಜೋಯಿಸರು, ಅರ್ಚಕರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಉತ್ಸವಾದಿ ಕಾರ್ಯಕ್ರಮಗಳ ಅನಂತರ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ರಥದಲ್ಲಿರಿಸಿ ಭಕ್ತಾದಿಗಳ ಹರ್ಷಘೋಷದೊಂದಿಗೆ ಆಂಜನೇಯ ದೇವಸ್ಥಾನದ ವರೆಗೆ ರಥಾರೋಹಣಗೈಯಲಾಯಿತು. ಭಕ್ತಾದಿಗಳು ಆಂಜನೇಯ,ಗುರುನರಸಿಂಹನ ದರ್ಶನ ಪಡೆದು ಪೂಜೆ ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ
ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ