ಆಧುನಿಕತೆಯ ಬೇರು ಹಳತರಲ್ಲಿದೆ : ವಿಜಯ್ ರಾಘವೇಂದ್ರ
ಕ್ಷೇಮ ಪಾಲನಾ ಸಮಿತಿಯು ಆಯೋಜಿಸಿದ್ದ "ಕಟ್ಟೆ ಪಂಚಾತಿಕೆ '
Team Udayavani, Jan 18, 2020, 5:12 AM IST
ಉಡುಪಿ: ಭಾಷೆ, ಬಟ್ಟೆ, ಅನುಕೂಲತೆಗಳನ್ನು ಹೆಚ್ಚಿಸಿಕೊಂಡ ಕೂಡಲೇ ನಾವು ಆಧುನಿಕರಾಗುವುದಿಲ್ಲ. ಹಳೆಯದನ್ನೂ ಅನುಸರಿಸುತ್ತ ಇವತ್ತಿಗೂ ಬೇಕಾಗುವಂತೆ ಬದುಕುವುದೇ ಆದರ್ಶ ಜೀವನ. ಆಧುನಿಕತೆಯ ಬೇರು ಹಳತರಲ್ಲಿದೆ ಎಂದು ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಹೇಳಿದರು.
ಎಂ.ಜಿ.ಎಂ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯು ಆಯೋಜಿಸಿದ್ದ “ಕಟ್ಟೆ ಪಂಚಾತಿಕೆ ‘ಸಾಧಕರೊಂದಿಗೆ ಮಾತುಕತೆ ಸರಣಿಯ ಎರಡನೇ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ದುಡ್ಡು ಮತ್ತು ಅಭಿರುಚಿಯ ಕುರಿತು ಅನೇಕರಲ್ಲಿ ಗೊಂದಲಗಳಿವೆ. ಹಣದ ಹಿಂದೆ ಹೋದಾಗ ಬುದ್ಧಿ ಕೆಲಸ ಮಾಡುತ್ತದೆಯೇ ವಿನಾ ಮನಸ್ಸು ಜತೆಗಿರುವುದಿಲ್ಲ. ನಮ್ಮ ಆಸಕ್ತಿಯ ಹಿಂದೆಯೇ ಬಿದ್ದಾಗ ಕಷ್ಟಗಳೂ ಕೇವಲವಾಗಿ ಬಿಡುತ್ತವೆ. ಎತ್ತರದ ಸಾಧನೆ ಸಾಧ್ಯ. ಸೋಲು ಬದುಕಿನ ಒಂದು ಭಾಗವಷ್ಟೇ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಜಿ. ವಿಜಯ ಅಧ್ಯಕ್ಷತೆ ವಹಿಸಿದ್ದರು. ಮಾಲ್ಗುಡಿ ಡೇಯ್ಸ… ಚಿತ್ರದ ನಿರ್ದೇಶಕ ಕಿಶೋರ್ ಮೂಡಬಿದ್ರೆ, ನಿರ್ಮಾಪಕ ರವಿಶಂಕರ್, ನಾಯಕಿ ಗ್ರೀಷ್ಮಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷ ಶ್ರೇಯಸ್ ಕೋಟ್ಯಾನ್ ನಿರೂಪಿಸಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಹಿಮಾ ಶೆಣೈ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ