ತಾಳೆಎಣ್ಣೆ ಆಮದು ಮೇಲೆ ನಿರ್ಬಂಧ ಮಲೇಷ್ಯಾಕ್ಕೆ ಪಾಠ


Team Udayavani, Jan 18, 2020, 5:26 AM IST

bel-25

ಕಾಶ್ಮೀರ ಮತ್ತು ಪೌರತ್ವ ಕಾಯಿದೆಗೆ ಸಂಬಂಧಿಸಿದಂತೆ ಮಲೇಷ್ಯಾ ಪ್ರಧಾನಿ ಮಹತಿರ್‌ ಮೊಹಮ್ಮದ್‌ ಅನಪೇಕ್ಷಿತ ಹೇಳಿಕೆ ನೀಡಿದ್ದಾರೆ. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದಾಗಲಿ ಪೌರತ್ವ ಕಾಯಿದೆಜಾರಿಗೊಳಿಸಿರುವುದಾಗಲಿ ಮಲೇಷ್ಯಾಕ್ಕೆ ಯಾವ ರೀತಿಯಲ್ಲೂ ಸಂಬಂಧಪಡದ ವಿಚಾರ.

ನಮ್ಮ ಆಂತರಿಕ ವಿಚಾರದಲ್ಲಿ ಅನಗತ್ಯವಾಗಿ ಮೂಗುತೂರಿಸಿರುವ ಮಲೇಷ್ಯಾಕ್ಕೆ ತಾಳೆಎಣ್ಣೆ ಆಮದು ಮೇಲೆ ನಿರ್ಬಂಧ ಹೇರುವ ಮೂಲಕ ಕೇಂದ್ರ ಸರಿಯಾದ ಹೊಡೆತ ನೀಡಿದೆ. ಕಾಶ್ಮೀರ ಮತ್ತು ಪೌರತ್ವ ಕಾಯಿದೆಗೆ ಸಂಬಂಧಿಸಿದಂತೆ ಮಲೇಷ್ಯಾದ ಪ್ರಧಾನಿ ಮಹತಿರ್‌ ಮೊಹಮ್ಮದ್‌ ಅನಪೇಕ್ಷಿತ ಹೇಳಿಕೆ ನೀಡಿದ್ದಾರೆ. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದಾಗಲಿ ಪೌರತ್ವ ಕಾಯಿದೆಯನ್ನು ಜಾರಿಗೊಳಿಸಿರುವುದಾಗಲಿ ಮಲೇಷ್ಯಾಕ್ಕೆ ಯಾವ ರೀತಿಯಲ್ಲೂ ಸಂಬಂಧಪಡದ ವಿಚಾರ. ಅದಾಗ್ಯೂ ಆ ದೇಶದ ಪ್ರಧಾನಿ ನೀಡಿರುವ ಹೇಳಿಕೆ ಭಾರತದ ಸಾರ್ವಭೌಮತೆಯನ್ನು ಪ್ರಶ್ನಿಸುವಂತಿದೆ. ಕಾಶ್ಮೀರವನ್ನು ಭಾರತ ಆಕ್ರಮಿಸಿ ಹಕ್ಕು ಸ್ಥಾಪನೆ ಮಾಡಿದೆ ಎಂಬರ್ಥದಲ್ಲಿ ಟೀಕೆಗಳನ್ನು ಮಾಡಿದ್ದಾರೆ ಮಹತಿರ್‌. ಆ ಬಳಿಕ ಮಲೇಷ್ಯಾ ಜೊತೆಗಿನ ವಾಣಿಜ್ಯ ವ್ಯವಹಾರಗಳನ್ನು ಕಡಿಮೆಗೊಳಿಸುವ ಕುರಿತು ಚಿಂತನೆಗಳು ನಡೆದಿವೆ.

ಅಧಿಕೃತವಾಗಿ ಸರಕಾರ ಮಲೇಷ್ಯಾದಿಂದ ತಾಳೆಎಣ್ಣೆ ಆಮದಿಗೆ ನಿರ್ಬಂಧ ಹೇರಿಲ್ಲವಾದರೂ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವ ಕ್ರಮವಾಗಿ ಆಮದು ಸುಂಕವನ್ನು ಹೆಚ್ಚಿಸಿದೆ. ಇದೇ ವೇಳೆ ಇಂಡೋನೇಷ್ಯಾ ಮತ್ತು ಉಕ್ರೇನ್‌ನಿಂದ ಮಲೇಷ್ಯಾಕ್ಕಿಂತ ಕಡಿಮೆ ಬೆಲೆಗೆ ಸಿಗುವ ತಾಳೆಎಣ್ಣೆ ಆಮದು ಮಾಡಿಕೊಳ್ಳಲು ಮುಂದಾಗಿದೆ. ಕೆಲವು ವ್ಯಾಪಾರಿಗಳೇ ಮಲೇಷ್ಯಾ ಬದಲು ಇಂಡೋನೇಷ್ಯಾದಿಂದ ತಾಳೆಎಣ್ಣೆ ಆಮದು ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ಆಮದು ಕಡಿಮೆಯಾಗಿರುವುದರ ಬಿಸಿ ಈಗಾಗಲೇ ಮಲೇಷ್ಯಾಕ್ಕೆ ತಟ್ಟಿದೆ. ಈ ವಿಚಾರವನ್ನು ರಾಜತಾಂತ್ರಿಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಮಹತಿರ್‌ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ.

ಭಾರತ ಜಗತ್ತಿನ ಅತಿ ಹೆಚ್ಚು ತಾಳೆಎಣ್ಣೆ ಆಮದು ಮಾಡಿಕೊಳ್ಳುತ್ತಿರುವ ದೇಶ. ಅಂತೆಯೇ ಮಲೇಷ್ಯಾ ಭಾರತಕ್ಕೆ ಅತಿ ಹೆಚ್ಚು ತಾಳೆಎಣ್ಣೆ ರಫ್ತು ಮಾಡುವ ದೇಶ. ಕಳೆದ ವರ್ಷ ಮಲೇಷ್ಯಾದಿಂದ 4.40 ಲಕ್ಷ ಟನ್‌ ತಾಳೆ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗಿದೆ. 2014ರಿಂದೀಚೆಗೆ ಮಲೇಷ್ಯಾದ ತಾಳೆ ಎಣ್ಣೆಯ ಮುಖ್ಯ ಗ್ರಾಹಕ ಭಾರತ. ಮಲೇಷ್ಯಾದ ಒಟ್ಟು ತಾಳೆ ಎಣ್ಣೆ ರಫ್ತಿನಲ್ಲಿ ಶೇ. 24 ಭಾರತಕ್ಕೆ ಬರುತ್ತದೆ. ಎರಡನೇ ಅತಿ ದೊಡ್ಡ ಗ್ರಾಹಕ ದೇಶವಾಗಿರುವ ಚೀನ ಆಮದು ಮಾಡಿಕೊಂಡಿರುವುದು ಬರೀ 2.4 ದಶಲಕ್ಷ ಟನ್‌. ಈ ಅಂಕಿಅಂಶವೇ ದ್ವಿಪಕ್ಷೀಯ ವಾಣಿಜ್ಯ ದಲ್ಲಿ ಮಲೇಷ್ಯಾಕ್ಕೆ ಭಾರತ ಎಷ್ಟು ಅನಿವಾರ್ಯ ಎನ್ನುವುದು ತಿಳಿಯುತ್ತದೆ. ತಾಳೆಎಣ್ಣೆ ಮಲೇಷ್ಯಾದ ಪ್ರಮುಖ ರಫ್ತು ಉತ್ಪನ್ನ. ಅದರ ರಫ್ತು ಕಡಿಮೆಯಾದರೆ ಆ ದೇಶದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮವಾಗುತ್ತದೆ.

ವಾಣಿಜ್ಯ ಈಗ ಬರೀ ವಾಣಿಜ್ಯವಾಗಿ ಉಳಿದಿಲ್ಲ. ಅದೀಗ ರಾಜತಾಂತ್ರಿಕ ಅಸ್ತ್ರವಾಗಿಯೂ ಬಳಕೆಯಾಗುತ್ತಿದೆ. ಒಂದು ದೇಶ ಇನ್ನೊಂದು ದೇಶದ ಮೇಲೆ ಅಸಮಾಧಾನವಾಗಿದ್ದರೆ ಅದನ್ನು ತಿಳಿಸಲು ವಾಣಿಜ್ಯವನ್ನು ಅಸ್ತ್ರವಾಗಿ ಬಳಸುವುದು ಹೊಸತೇನಲ್ಲ. ಚೀನ ಮತ್ತು ಅಮೆರಿಕದ ನಡುವೆ ಆಗಾಗ ಇಂಥ ವಾಣಿಜ್ಯ ಸಮರ ನಡೆಯುತ್ತಿರುತ್ತದೆ. ಆದರೆ ಭಾರತ ಈ ಮಾರ್ಗವನ್ನು ಆಯ್ದುಕೊಂಡಿರುವುದು ಇದೇ ಮೊದಲು. ಜನರಲ್ಲೂ ಮಲೇಷ್ಯಾ ವಿರುದ್ಧ ಆಕ್ರೋಶವಿದೆ.ಅಲ್ಲಿಂದ ಒಂದೇ ಒಂದು ಬ್ಯಾರಲ್‌ ಎಣ್ಣೆಯನ್ನು ಆಮದು ಮಾಡಿಕೊಳ್ಳಬಾರದು ಎಂದು ಅನೇಕ ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಒತ್ತಾಯಿಸಿದ್ದರು.

ನಮ್ಮ ಆಂತರಿಕ ವಿಚಾರಗಳಲ್ಲಿ ಮೂಗುತೂರಿಸುವ ಅಧಿಕಾರ ಯಾವ ದೇಶಕ್ಕೂ ಇಲ್ಲ. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವದ ಬಲಾಡ್ಯ ದೇಶಗಳೇ ಇದು ದ್ವಿಪಕ್ಷೀಯ ಮಾತುಕತೆಯಿಂದ ಬಗೆಹರಿಸಿಕೊಳ್ಳಬೇಕಾದ ವಿವಾದ, ಅನ್ಯರ ಹಸ್ತಕ್ಷೇಪ ಅಗತ್ಯವಿಲ್ಲ ಎಂದು ಹೇಳಿರುವ ಹೊರತಾಗಿಯೂ ಮಲೇಷ್ಯಾ, ಟರ್ಕಿಯಂಥ ಲೆಕ್ಕಕ್ಕೇ ಇಲ್ಲದ ದೇಶಗಳು ಅಧಿಕ ಪ್ರಸಂಗ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇನ್ನೊಂದು ದೇಶವನ್ನು ಖುಷಿಪಡಿಸುವ ಉದ್ದೇಶದಿಂದ ನಮ್ಮ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ದೇಶಗಳಿಗೆ ಈ ಮೂಲಕ ನಾವು ಕಠಿಣವಾದ ಸಂದೇಶವನ್ನು ರವಾನಿಸಿದಂತಾಗಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.