ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Jan 18, 2020, 12:43 PM IST
ರಾಯಬಾಗ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಾಯಬಾಗ ಸಾರಿಗೆ ಘಟಕದಲ್ಲಿ ಪ್ರತಿಭಟನೆ ನಡೆಸಿ ಘಟಕ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಸುಟ್ಟಟ್ಟಿ ಮಾರ್ಗವಾಗಿ ಬರುವ ಸಿದ್ದಾಪುರ-ರಾಯಬಾಗ ಬಸ್ ಸರಿಯಾದ ಸಮಯಕ್ಕೆ ಬಾರದೇ ಇರುವುದರಿಂದ ಸುಟ್ಟಟ್ಟಿಮತ್ತು ಚಿಂಚಲಿ ರೈಲ್ವೆ ಸ್ಟೇಷನ್ದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಕಾಲೇಜ್ಗೆ ಬರಲು ಸಾಧ್ಯವಾಗದೆ ಸಮಸ್ಯೆಯಾಗುತ್ತಿದೆ. ಇಲ್ಲಿರುವ ಸಮಸ್ಯೆ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಪ್ರತಿಸಲ ಪ್ರತಿಭಟನೆ ನಡೆಸಿದಾಗ ಮತ್ತು ಮನವಿ ಕೊಟ್ಟಾಗ ಇನ್ನು ಮುಂದೆ ಸರಿಯಾದ ವೇಳೆಗೆ ನಿತ್ಯ ಬಸ್ ಬಿಡುವುದಾಗಿ ಹೇಳಿ ಅಧಿಕಾರಿಗಳು ನುಣಚಿಕೊಳ್ಳುತ್ತಿದ್ದಾರೆ. ಈಗ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಸರಿಯಾದ ವೇಳೆಗೆ ಬಸ್ ಬರದೇ ಇರುವುದರಿಂದ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಶೀಘ್ರವೇ ಬಸ್ ಸೌಲಭ್ಯ ಕಲ್ಪಿಸದಿದ್ದರೆ ರಾಯಬಾಗ ಸಾರಿಗೆ ಘಟಕದ ವ್ಯವಸ್ಥಾಪಕರ ವಿರುದ್ಧ ಸ್ಥಳೀಯ ಶಾಸಕರ ಮತ್ತು ಸಾರಿಗೆ ಸಚಿವರ ಗಮನಕ್ಕೆ ತರಲಾಗುವುದು.ಅಷ್ಟೇ ಅಲ್ಲದೇ ಸುಟ್ಟಟ್ಟಿ ಮತ್ತು ಚಿಂಚಲಿ ರೈಲ್ವೆ ಸ್ಟೇಷನ್ ಹತ್ತಿರ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಿದ್ದು ಒಡೆಯರ, ಅಕ್ಷಯ ಚಿಂಚಲಿ, ಪರಶುರಾಮ ಹೆಗಡೆ, ದೀಪಕ ನಾಯಿಕ, ಮಾಲಾ ಒಡೆಯರ, ಕೋಮಲ ಪಾಟೀಲ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ