ಶೃಂಗೇರಿ: ವಿದ್ಯಾರ್ಥಿನಿಯ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ
Team Udayavani, Jan 18, 2020, 3:17 PM IST
ಚಿಕ್ಕಮಗಳೂರು: ಶೃಂಗೇರಿ ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗಿಬ್ಬರಿಗೆ ಜಿಲ್ಲಾ ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿ ಆದೇಶ ಮಾಡಿದೆ.
ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು ಗಲ್ಲು ಶಿಕ್ಷೆ ಜೊತೆಗೆ ತಲಾ 25 ಸಾವಿರ ದಂಡ ವಿಧಿಸಲಾಗಿದೆ.
2016ರ ಫೆಬ್ರವರಿ 16ರಂದು ಶೃಂಗೇರಿ ತಾಲೂಕಿನ ಅಕ್ಕಸಾಲುಕೊಡಿಗೆಯ 18ರ ಹರೆಯದ ಕಾಲೇಜು ಹುಡುಗಿಯ ಮೇಲೆ ಇವರಿಬ್ಬರು ಅತ್ಯಾಚಾರ ಮಾಡಿ ಕೊಲೆಗೈದಿದ್ದರು. ಆಕೆ ಪರೀಕ್ಷೆ ಬರೆದು ಮನೆಗೆ ಕಾಲು ದಾರಿಯಲ್ಲಿ ವಾಪಾಸು ಆಗುತ್ತಿದ್ದ ಸಮಯದಲ್ಲಿ ಕಾದು ಕುಳಿತಿದ್ದ ಪ್ರದೀಪ್ ಮತ್ತು ಸಂತೋಷ್ ಆಕೆಯನ್ನು ಕಾಡಿನೊಳಗೆ ಹೊತ್ತೊಯ್ದು ಬಲತ್ಕಾರ ನಡೆಸಿ ನಂತರ ಕೊಲೆಗೈದಿದ್ದರು.
ಆಕೆಯ ಕಿವಿ ಮತ್ತು ಮೂಗಿನ ನತ್ತನ್ನು ಆಕೆಯ ಶವವನ್ನು ಅಲ್ಲೆ ಹತ್ತಿರದ ಪಾಳು ಬಾವಿಗೆ ಎಸೆದಿದ್ದರು. ನಂತರ ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದರು.
ಮೃತಪಟ್ಟ ಹುಡುಗಿಯ ತಂದೆಯ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದರು. ನಾಲ್ಕು ವರ್ಷಗಳಿಂದ ವಿಚಾರಣೆ ನಡೆದಿದ್ದು, ಇಂದು (ಶನಿವಾರ) ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ನೀಡಿ ತೀರ್ಪು ಪ್ರಕಟಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ