ಕುರಿ ಸಂತೆಗೆ ಬೇಕಿದೆ ಕಾಯಕಲ್ಪ

ಚಳ್ಳಕೆರೆ ನಗರದಲ್ಲಿ ಕುರಿಗಳ ಮಾರಾಟಕ್ಕಿಲ್ಲ ವ್ಯವಸ್ಥೆ 2013ರಲ್ಲೇ ಜಾಗ ನೀಡಿದ್ದರೂ ಬಳಕೆ ಮಾತ್ರ ಆಗ್ತಿಲ್ಲ

Team Udayavani, Jan 18, 2020, 3:36 PM IST

18-January-15

ಚಳ್ಳಕೆರೆ: ಜಿಲ್ಲೆಯಲ್ಲಿ ಅತಿ ಹೆಚ್ಚು ಕುರಿಗಳು ನಗರದಲ್ಲಿ ವ್ಯಾಪಾರವಾಗುತ್ತದೆ. ಇಲ್ಲಿನ ಮಾರುಕಟ್ಟೆಗೆ ನೆರೆಯ ಆಂಧ್ರ ಪ್ರದೇಶದಿಂದಲೂ ಹೆಚ್ಚಿನ ವರ್ತಕರು ಆಗಮಿಸುತ್ತಾರೆ. ಆದರೆ ಕಂಬಳಿ ಮಾರುಕಟ್ಟೆಗೆ ಹೆಚ್ಚು ಒತ್ತು ನೀಡಿರುವ ರಾಜ್ಯ ಸರ್ಕಾರ, ಕುರಿ ಸಂತೆ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಚಳ್ಳಕೆರೆ ನಗರದಲ್ಲಿ ಪ್ರತಿನಿತ್ಯ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಹೆಚ್ಚು ಕುರಿಗಳು ಮಾರಾಟವಾಗುತ್ತಿವೆ. ಅಲ್ಲದೆ ಕೊಂಡುಕೊಳ್ಳುವವರು ಸಂಖ್ಯೆಯೂ ಹೆಚ್ಚು. ವಿಶೇಷವಾಗಿ ಸಂತೆಯ ದಿನವಾದ ಭಾನುವಾರ ಮಾರಾಟವಾಗುವ ಕುರಿಗಳ ಸಂಖ್ಯೆ ಹಾಗೂ ಕುರಿಗಳನ್ನು ಖರೀದಿಸುವವರ ಸಂಖ್ಯೆ ಸುಮಾರು ಒಂದು ಸಾವಿರಕ್ಕಿಂತ ಜಾಸ್ತಿ.

ಇಲ್ಲಿನ ಎಪಿಎಂಸಿ ಮಾರುಕಟ್ಟೆ ಆವರಣಕ್ಕೆ ಹೊಂದಿಕೊಂಡಂತಿರುವ ಜಾಗದಲ್ಲಿ ಕುರಿ ಮಾರಾಟಕ್ಕೆ ಉತ್ತೇಜನ ನೀಡಲು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಮತ್ತು ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ, ಲಕ್ಷಾಂತರ ರೂ. ವೆಚ್ಚದಲ್ಲಿ ಕುರಿ ಸಂತೆ ಕೇಂದ್ರವನ್ನು 2013ರ ಸೆ. 22ರಂದು ಪ್ರಾರಂಭಿಸಿದರು. ಅಲ್ಲಿ ಕುರಿಗಳನ್ನು ಇಳಿಸಲು, ನೀರು, ಬೇಲಿ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇಷ್ಟು ವರ್ಷ ಕಳೆದರೂ ಇದುವರೆಗೂ ಅಲ್ಲಿ ಒಂದೇ ಒಂದು ಕುರಿಯೂ ಕುರಿ ಸಂತೆ ಒಳಗೆ ಪ್ರವೇಶ ಪಡೆದಿಲ್ಲ. ನಿರ್ವಹಣೆ ಕೊರತೆಯಿಂದಾಗಿ ಕುರಿ ಸಂತೆ ಪ್ರದೇಶ ಜಾಲಿ ಗಿಡ, ತಗ್ಗುಗುಂಡಿಯಿಂದ ಹಾಳಾಗಿದೆ. ಅನೇಕ ಬಾರಿ ಈ ಪ್ರದೇಶದಲ್ಲಿ
ಅನೈತಿಕ ಚಟುವಟಿಕೆಗಳೂ ನಡೆಯುತ್ತವೆ ಎಂಬ ಆರೋಪ ಇದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳಾಗಲೀ, ಉಣ್ಣೆ ಕಂಬಳಿ ನೇಕಾರರ ಸಂಘದ ಚುನಾಯಿತ ಜನಪ್ರತಿನಿಧಿಗಳಾಗಲೀ ಈ ಬಗ್ಗೆ ಇದುವರೆಗೂ ಗಮನಹರಿಸಿಲ್ಲ. ಪ್ರಸ್ತುತ ನಗರದ ಬಳ್ಳಾರಿ ರಸ್ತೆಯಲ್ಲಿ ರಸ್ತೆಯ ಮೇಲೆಯೇ ಕುರಿಗಳ ವ್ಯಾಪಾರ ನಡೆಯುತ್ತಿದೆ. ಇದರಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತಿದೆ. ಕೂಡಲೇ ಕ್ಷೇತ್ರದ ಶಾಸಕರು ಎಪಿಎಂಸಿ ಕುರಿ ಸಂತೆ ಅಭಿವೃದ್ಧಿಗೆ ಮುಂದಾಗಬೇಕಿದೆ.

ನಗರದಲ್ಲಿ ಕುರಿ ವ್ಯಾಪಾರ ಮಾರುಕಟ್ಟೆ ಇಲ್ಲದ ಕಾರಣ
ಪ್ರತಿ ಗುರುವಾರ ಚಿತ್ರದುರ್ಗದಲ್ಲಿ ನಡೆಯುವ ಕುರಿ ಮಾರುಕಟ್ಟೆಗೆ
ಈ ಪ್ರದೇಶದ ಸಾವಿರಾರು ಕುರಿಗಳನ್ನು ಕರೆದೊಯ್ಯಲಾಗುತ್ತದೆ. ಆಂಧ್ರಪ್ರದೇಶದಿಂದಲೂ ಸಹ ಕುರಿಗಳನ್ನು ಮಾರಾಟಕ್ಕೆ ತರಲಾಗುತ್ತಿದೆ. ಚಳ್ಳಕೆರೆಯಲ್ಲಿ ಸುಸಜ್ಜಿತ ಕುರಿ ಮಾರುಕಟ್ಟೆ ಕಾರ್ಯ ನಿರ್ವಹಿಸಿದಲ್ಲಿ ಎಲ್ಲರಿಗೂ ಅನುಕೂಲವಾಗಲಿದೆ.
ಮಹೇಶ್‌ಕುಮಾರ್‌,
ಕುರಿ ವ್ಯಾಪಾರಿ

ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಕುರಿ ಸಂತೆ ನಗರದಿಂದ ಬಹಳಷ್ಟು ದೂರವಿದೆ. ಅಲ್ಲಿಗೆ ಕುರಿ ಮಾರುವವರು ಕುರಿಗಳೊಂದಿಗೆ ಹೋಗಲು ಸಾಧ್ಯವಾಗುವುದಿಲ್ಲ. ಕುರಿಗಳ ಮಾರಾಟಕ್ಕೆ ಯಾವುದೇ ವ್ಯವಸ್ಥೆ ಇಲ್ಲ. ಹೆಚ್ಚಿನ ದರ ಸಿಗುವ ಸಂಭವವೂ ಇಲ್ಲ. ಆದ್ದರಿಂದ ಚಿತ್ರದುರ್ಗಕ್ಕೆ ಕುರಿಗಳನ್ನು ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿದೆ. ಇಲ್ಲಿಯೇ ವ್ಯವಸ್ಥೆ ಕಲ್ಪಿಸಿದಲ್ಲಿ ಉತ್ತಮ.
ಈ. ಬಾಲರಾಜು ಕುರಿಗಾಹಿ,
ಚನ್ನಮ್ಮನಾಗತಿಹಳ್ಳಿ

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.