ಆಧಾರ್‌ಗೆ ಟೋಕನ್‌ ಪಡೆಯಲು ಪರದಾಟ


Team Udayavani, Jan 18, 2020, 5:54 PM IST

tk-tdy-1

ಕೊರಟಗೆರೆ: ಎರಡು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಕೊರಟಗೆರೆ ಕ್ಷೇತ್ರದ ಕೇವಲ ಎರಡು ಕಡೆಯಷ್ಟೇ ಆಧಾರ್‌ ಕಾರ್ಡ್‌ ಕೇಂದ್ರ ವಿರುವುದರಿಂದ ಟೋಕನ್‌ ಪಡೆಯಲು ವಿದ್ಯಾರ್ಥಿಗಳ ಜೊತೆ ರೈತಾಪಿವರ್ಗ ರಾತ್ರಿಯಿಡಿ ಕಾವಲು ಕಾಯುವಪರಿಸ್ಥಿತಿ ಎದುರಾಗಿದೆ.

ಪ್ರತಿನಿತ್ಯ ನೀಡುತ್ತಿದ್ದ ಟೋಕನ್‌ ನಿಲ್ಲಿಸಿ ವಾರಕ್ಕೊಮ್ಮೆ ಸೋಮವಾರ ನಿಗದಿತ ಸಮಯದಲ್ಲಿ ವಿತರಿಸುವುದರಿಂದ ಸಮಸ್ಯೆ ಬಿಗಡಾಯಿಸಿದೆ. ಪಟ್ಟಣದ ಕಂದಾಯ ಇಲಾಖೆ ಬ್ಯಾಂಕಿನ ಎರಡು ಕಡೆಯಲ್ಲಷ್ಟೇ ಆಧಾರ್‌ ಕೇಂದ್ರ ತೆರೆಯಲಾಗಿದೆ. ಆಧಾರ್‌ ಕಾರ್ಡ್‌ನ ಬೇಡಿಕೆ ಸೃಷ್ಟಿಸುವ ಉದ್ದೇಶದಿಂದ ಪ್ರತಿದಿನ 30 ನೀಡುತ್ತಿದ್ದ ಟೋಕನ್‌ ದಿಢೀರ್‌ ನಿಲ್ಲಿಸಿವಾರಕ್ಕೊಮ್ಮೆ ಪ್ರತಿ ಸೋಮವಾರ 180 ಟೋಕನ್‌ ನೀಡಲು ಏಕಾಏಕಿ ತೀರ್ಮಾನ ತೆಗೆದುಕೊಂಡಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದರೂ ಕಂದಾಯ ಇಲಾಖೆ ಮೌನಕ್ಕೆ ಶರಣಾಗಿದೆ.

ಎರಡೇ ಆಧಾರ್‌ ಕೇಂದ್ರ!: ಕೊರಟಗೆರೆಯ 4 ಹೋಬಳಿಯ 24 ಗ್ರಾಮ ಪಂಚಾಯಿತಿಯ 356 ಗ್ರಾಮಗಳಲ್ಲಿ 2ಲಕ್ಷ 50 ಸಾವಿರಕ್ಕೂ ಹೆಚ್ಚು ಜನರಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಾಲೆ, ಕಾಲೇಜಿನಲ್ಲಿ 20,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪಟ್ಟಣದಲ್ಲಿ ಎರಡು ಆಧಾರ್‌ ಕೇಂದ್ರವಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಹತ್ತಾರು ಕಿ.ಮೀದೂರದಿಂದ ಬರುವ ರೈತರು ಮತ್ತು ಶಾಲೆ-ಕಾಲೇಜಿಗೆರಜೆ ಹಾಕಿ ಆಧಾರ್‌ ತಿದ್ದುಪಡಿಗೆ ಹಾಜರಾಗುವ ವಿದ್ಯಾರ್ಥಿಗಳು ಟೋಕನ್‌ಗೆ ಭಾನುವಾರ ರಾತ್ರಿಯೇ ಬರಬೇಕು. ವಾರಕ್ಕೆ ನೀಡುವ 180 ಟೋಕನ್‌ನಲ್ಲಿ 120 ಮಾತ್ರ ವಿತರಿಸಲಾಗುತ್ತದೆ. ಉಳಿದ 60 ಟೋಕನ್‌ಗಳಿಗೆ ಬೇಡಿಕೆ ಸೃಷ್ಟಿಸಿ ಸಿಬ್ಬಂದಿ ಕೇಳಿದಷ್ಟು ಹಣವನ್ನು ರೈತರು ನೀಡಬೇಕಾಗಿದೆ. ವಿದ್ಯಾರ್ಥಿವೇತನ, ಪಡಿತರ ಚೀಟಿ, ವೃದ್ಧಾಪ್ಯ ವೇತನ, ಬ್ಯಾಂಕ್‌ ಖಾತೆ, ಜಾತಿ ಮತ್ತು ಆಧಾಯ ದೃಢೀಕರಣ ಪತ್ರದ ಜೋಡಣೆಗೆ ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿಗೆ ನೀಡಬೇಕಾದ ದರದ ನಾಮಫ‌ಲಕ ಹಾಕದೇ ಸಿಬ್ಬಂದಿಗಳು ರೈತರಿಂದ ವಸೂಲಿಗೆ ಮುಂದಾಗಿದ್ದಾರೆ. ಏಜೆಂಟರು ಮಾಡಿದ್ದೇ ನಿಯಮ ವಾಗಿದ್ದು, ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರವ ಅನುಮಾನ ವ್ಯಕ್ತವಾಗಿದೆ.

ಜೋಡಣೆ ಸಮಸ್ಯೆ: ಪಟ್ಟಣ ಮತ್ತು ಗ್ರಾಮೀಣ ಸೇರಿ ಒಟ್ಟು 84 ಆಹಾರ ವಿತರಣಾ ಕೇಂದ್ರದಲ್ಲಿ 43,559 ಪಡಿತರ ಕಾರ್ಡ್‌ಗಳಿವೆ. ಪ್ರತಿ ತಿಂಗಳು ಉಚಿತ ಅಕ್ಕಿ ಪಡೆಯಲು ಪಡಿತರ ಚೀಟಿಗೆ 1,35,812 ಜನರು ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕಾಗಿದೆ. ಐದು ವರ್ಷ ಒಳಗಿನ ಮಕ್ಕಳಿಗೆ ಆಧಾರ ಕಾರ್ಡ್‌ನ ಜೋಡಣೆ ಮಾಡಿಸಿದರಷ್ಟೇ ಅಕ್ಕಿ ಸಿಗುತ್ತದೆ. ಸರ್ಕಾರದಆದೇಶದಂತೆ ಕೊರಟಗೆರೆಯ 24 ಗ್ರಾಪಂ, 4ನಾಡಕಚೇರಿ, ಅಂಚೆ ಇಲಾಖೆ ಮತ್ತು ಬ್ಯಾಂಕಿನಲ್ಲಿ ಆಧಾರ್‌ ಕಾರ್ಡ್‌ ಸೇರ್ಪಡೆ ಮತ್ತು ತಿದ್ದುಪಡಿ ಮಾಡಬೇಕಾಗಿದೆ. ಕೊರಟಗೆರೆ ತಾಲೂಕು ಆಡಳಿತದ ವೈಫ‌ಲ್ಯ ಹಾಗೂ ನಿರ್ಲಕ್ಷ್ಯದಿಂದ ರೈತರು, ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿನಿತ್ಯ ರಾತ್ರಿ ಜಾಗರಣೆ ಮಾಡಿ ಆಧಾರ್‌ ಕಾರ್ಡ್‌ ಪಡೆಯಲು ಹಾಗೂ ತಿದ್ದುಪಡಿಗೆ ಪರದಾಟ ತಪ್ಪಿಸಲು ಶಾಸಕರು ಕ್ರಮ ಕೈಗೊಳ್ಳಬೇಕಿದೆ.

ಪಡಿತರ ಚೀಟಿಗೆ ಆಧಾರ ಕಾರ್ಡ್‌ನ ಜೋಡಣೆಯಿಂದ ಸಮಸ್ಯೆ ಹೆಚ್ಚಾಗಿದೆ. ಆಧಾರ್‌ ಕಾರ್ಡ್‌ ನೋಂದಣಿ ಉಚಿತ ಮತ್ತು ತಿದ್ದುಪಡಿಗೆ 50 ರೂ. ಪಡೆಯಬೇಕು. ಅಧಿಕ ಹಣ ಕೇಳಿದರೆ ನನ್ನ ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇನೆ. ಹೊಳವನಹಳ್ಳಿ, ಕೋಳಾಲ ಮತ್ತು ಅಂಚೆ ಕಚೇರಿಯಲ್ಲಿ ತಕ್ಷಣ ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಲು ಸೂಚಿಸುತ್ತೇನೆ. ಗೋವಿಂದರಾಜು, ತಹಶೀಲ್ದಾರ್‌

 

-ಎನ್‌.ಪದ್ಮನಾಭ್‌

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.