ಸಾರ್ವಜನಿಕ ಶೌಚಾಲಯ ನಗರದ ಆದ್ಯತೆಯಾಗಲಿ


Team Udayavani, Jan 19, 2020, 5:37 AM IST

meg-12

ನಗರದ ಬಹುತೇಕವಾಗಿ ಹೆಚ್ಚಿನ ಕಡೆಗಳಲ್ಲಿ ಬಯಲು ಮಲಮೂತ್ರ ವಿಸರ್ಜನೆ ಕಂಡುಬರುವುದಿಲ್ಲ. ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ವಹಿಸುವುದರಿಂದ ಮನೆಗಳಲ್ಲಿ ಸಾಮಾನ್ಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ ನಗರಕ್ಕೆ ಹೊರಗಿನಿಂದ ಭೇಟಿ ನೀಡುವವರಿಗೆ ಮತ್ತು ನಿರ್ಗತಿಕರಿಗೆ ಮಲಮೂತ್ರ ವಿಸರ್ಜನೆಗೆ ತೀರಾ ತೊಂದರೆಯಾಗುತ್ತದೆ. ಏಕೆಂದರೆ ನಮ್ಮ ನಗರಗಳಲ್ಲಿ ಇಂದು ಸಮರ್ಪಕವಾದ ಸಾರ್ವಜನಿಕ ಶೌಚಗೃಹಗಳು ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ.

ಹೌದು ಇಂದು ದೇಶದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಶೌಚಗೃಹಗಳ ಕೊರತೆ ಎದ್ದು ಕಾಣುವುದರಿಂದ ಮತ್ತು ಅಗತ್ಯ ಸಮಯದಲ್ಲಿ ದೊರಕದೇ ಇರುವುದರಿಂದ ನಗರಕ್ಕೆ ಬೇರೆ ಊರಿನಿಂದ ತಾತ್ಕಾಲಿಕ ಅಥವಾ ಇತರ ಕೆಲಸಕ್ಕಾಗಿ ಬರುವ ಗ್ರಾಮೀಣ ಪ್ರದೇಶದ ಜನರು ಮತ್ತು ಯಾತ್ರಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತದೆ. ನಗರದಲ್ಲಿ ಸುತ್ತಾಡುವಾಗ ಅಚಾನಕ್ಕಾಗಿ ಮಲಮೂತ್ರ ಅಥವಾ ಮೂತ್ರ ವಿಸರ್ಜನೆ ಮಾಡಬೇಕಾದರೆ ಸಾರ್ವಜನಿಕ ಶೌಚಗೃಹಗಳನ್ನು ಹುಡುಕಲು ಅಲೆಯಬೇಕಾಗುತ್ತದೆ. ಇದಕ್ಕೆ ಮುಖ್ಯ ಕಾರಣ ನಮ್ಮ ನಗರಗಳಲ್ಲಿ ಸರಕಾರ ಅಥವಾ ಅಲ್ಲಿನ ಸ್ಥಳೀಯಾಡಳಿತದಿಂದ ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಗೃಹಗಳನ್ನು ನಿರ್ಮಿಸದೆ ಇರುವುದರಿಂದ ನಗರದ ನೈರ್ಮಲ್ಯಕ್ಕೆ ತೊಂದರೆಯಾಗುತ್ತದೆ.

ಈ ಪರಿಸ್ಥಿತಿಯಿಂದ ಮಂಗಳೂರು ಮಹಾನಗರವೂ ಹೊರತಾಗಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗುವಂತೆ ಸಾರ್ವಜನಿಕ ಶೌಚಾಲಯಗಳನ್ನು ನಗರದ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸುವುದು ಕೂಡ ಅಗತ್ಯ. ಇದರಿಂದ ನಗರದ ನೈರ್ಮಲ್ಯ ಕಾಪಾಡಬಹುದು.

ಈ ವಿಚಾರವಾಗಿ ಕೆಲವೊಂದು ದೇಶಗಳು ಅಳವಡಿಸಿಕೊಂಡೊರುವ ಯೋಜನೆಗಳು ದೇಶಕ್ಕೆ ಮಾದರಿಯಾಗಬಲ್ಲವು. ಈ ನಿಟ್ಟಿನಲ್ಲಿ ಪೋರ್ಟ್‌ ಲ್ಯಾಂಡ್‌ ಮತ್ತು ಅಮೆರಿಕ ವಾಷಿಂಗ್ಟನ್‌ ಡಿ.ಸಿ. ಹಾಗೂ ಇತರ ನಗರಗಳಲ್ಲಿ ಸಾರ್ವಜನಿಕ ಶೌಚಗೃಹವನ್ನು ಅತ್ಯಾಧುನಿಕವಾಗಿ ನಿರ್ಮಿಸಲಾಗಿದೆ. ಇದು ಅಲ್ಲಿ ಕಡ್ಡಾಯವಾಗಿದೆ. ಅಲ್ಲದೆ ಇದು ಸ್ವತ್ಛತೆಯನ್ನು ಕಾಪಾಡುವಲ್ಲಿಯೂ ಸಹಕಾರಿಯಾಗಿದೆ.

ಹೀಗಿರಲಿ ಶೌಚಗೃಹ
ಅಮೆರಿಕದಲ್ಲಿ ಈಗಾಗಲೇ ನಿರ್ಮಿಸಿರುವ ಹಾಗೆ ಸ್ಟೀಲ್‌ನಿಂದ ತಯಾರಿಸಿದ ಶೌಚಗೃಹಗಳು ನಿರ್ಮಿಸುವುದು ಸೂಕ್ತ. ಇವು ಕಡಿಮೆ ತೂಕ ಹೊಂದಿರುವುದರಿಂದ ತಯಾರಿಸಿ ನಗರದ ವಿವಿಧ ಸ್ಥಳಗಳಿಗೆ ತಲುಪಿಸಬಹದು.
ಸ್ಟೀಲ್‌ನಿಂದ ತಯಾರಿಸುವುದರಿಂದ ಇದು ಸುದೀರ್ಘ‌ ಬಾಳಿಕೆ ಬರುತ್ತವೆ. ಅಲ್ಲದೆ ಇದು ಸರಕಾರದ ವೆಚ್ಚವನ್ನೂ ಕಡಿಮೆಮಾಡುತ್ತದೆ ಮತ್ತು ಬೇಗನೆ ನಿರ್ಮಿಸಲು ಸಾಧ್ಯವಾಗುತ್ತದೆ.

ಸುಲಭವಾಗಿ ಸಿಗುವಂತಿರಲಿ
ನಗರದಲ್ಲಿ ಹೆಚ್ಚು ಜನರ ಓಡಾಟ ಇರುವಂತಹ ಸ್ಥಳಗಳಲ್ಲಿ ಸಾರ್ವಜನಿಕ ಶೌಚಗೃಹಗಳನ್ನು ಸ್ಥಾಪಿಸಬೇಕು. ಅವು ಜನರನ್ನು ಹೆಚ್ಚು ಹುಡುಕಾಡಿಸದೆ ಬೇಗನೆ ಸಿಗುವಂತ ಸ್ಥಳಗಳಲ್ಲಿ ಇರಬೇಕು ಮತ್ತು ಅವುಗಳ ಸರಿಯಾದ ನಿರ್ವಹಣೆ ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವು ಸ್ಮಾರ್ಟ್‌ ಸಿಟಿಯ ಆದ್ಯತೆಯಾಗಲಿ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರವೂ ಕೂಡ ಅಮೆರಿಕದಲ್ಲಿ ಆರಂಭಿಸಲಾಗಿರುವ ಸಾರ್ವಜನಿಕ ಶೌಚಾಲಯದ ಮಾದರಿಯಲ್ಲಿ ಅಳವಡಿಸಿಕೊಳ್ಳುವುದು ಕೂಡ ಉತ್ತಮ ವಾದುದು. ಇದಕ್ಕೆ ಆಡಳಿತ ವ್ಯವಸ್ಥೆ ಮನಸ್ಸು ಮಾಡಲಿ.

ಸ್ವಚ್ಛತೆಗೆ ಆದ್ಯತೆ
ಈಗಾಗಲೇ ಕೇಂದ್ರ ಸರಕಾರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸುವಲ್ಲಿ ಹಲವಾರು ಪ್ರಯತ್ನ ಮಾಡುತ್ತಿದೆ. ಇದು ಕೂಡ ಅದಕ್ಕೆ ಸಹಕಾರಿಯಾಗಿದೆ. ಇಂದು ದೊಡ್ಡ ನಗರಗಳು ನೀರಿನ ಅಭಾವವನ್ನು ಎದುರಿಸುತ್ತಿವೆ. ಆದರೆ ಈ ಆಧುನಿಕ ಮಾದರಿಯ ಶೌಚಗೃಹಗಳು ನೀರನ್ನು ಉಳಿಸುವಲ್ಲಿ ಹೆಚ್ಚು ಉಪಯುಕ್ತವಾಗಿವೆ. ಸ್ಟೀಲ್‌ನಿಂದ ಮಾಡಿದ ಕಾರಣ ಇತರ ಶೌಚಾಗೃಹಗಳಿಗಿಂತ ಇವುಗಳನ್ನು ಕಡಿಮೆ ನೀರಿನಿಂದ ಮತ್ತು ಬೇಗನೆ ಸ್ವಚ್ಛಗೊಳಿಸಬಹುದು. ಅಲ್ಲದೆ ಹೊರಗಿನಿಂದ ಬಂದ ಯಾತ್ರಿಕರು, ಜನರು ಶೌಚಗೃಹ ಸಿಗದೆ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡುವುದನ್ನು ತಪ್ಪಿಸಬಹುದು.

– ಶಿವಾನಂದ ಎಚ್‌.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.