ಪ್ರಜ್ಞಾಗೆ ಬೆದರಿಕೆ ಪತ್ರ ರವಾನೆ: ವೈದ್ಯನ ಬಂಧನ
Team Udayavani, Jan 18, 2020, 11:41 PM IST
ಔರಂಗಾಬಾದ್: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ಗೆ ಸಂಶಯಾಸ್ಪದ ಪುಡಿ ಹಾಗೂ ಪತ್ರಗಳ ರವಾನೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ವೈದ್ಯರೊಬ್ಬರನ್ನು ಮಧ್ಯಪ್ರದೇಶ ಉಗ್ರ ನಿಗ್ರಹ ದಳ(ಎಟಿಎಸ್) ಶನಿವಾರ ಬಂಧಿಸಿದೆ. ಬಂಧಿತನನ್ನು ಡಾ. ಸೈಯದ್ ಅಬ್ದುಲ್ ರೆಹಮಾನ್ ಖಾನ್(35) ಎಂದು ಗುರುತಿಸಲಾಗಿದೆ. ಈತ ನಾಂದೇಡ್ನ ಧಾನೇಗಾಂವ್ನಲ್ಲಿ ಕ್ಲಿನಿಕ್ ನಡೆಸುತ್ತಿದ್ದು, ಕಳೆದ 3 ತಿಂಗಳಿನಿಂದಲೂ ಈತನ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಏಕೆಂದರೆ, ಈತ ಸರಕಾರಿ ಅಧಿಕಾರಿಗಳಿಗೆ ಇದೇ ರೀತಿಯ ಪತ್ರ ಬರೆದು, ನನ್ನ ತಾಯಿ ಮತ್ತು ಸಹೋದರನಿಗೆ ಉಗ್ರರ ನಂಟಿದ್ದು, ಅವರನ್ನು ಬಂಧಿಸಬೇಕು ಎಂದು ಪತ್ರದಲ್ಲಿ ಬರೆದಿದ್ದನು. ಈತ ಮೊಬೈಲನ್ನು ಮನೆಯಲ್ಲೇ ಬಿಟ್ಟು, ಬೇರೆ ಬೇರೆ ಸ್ಥಳಗಳಿಗೆ ಪ್ರಯಾಣಿಸಿ ಅಲ್ಲಿಂದ ಪತ್ರಗಳನ್ನು ಪೋಸ್ಟ್ ಮಾಡುತ್ತಿದ್ದ ಎಂದು ಇನ್ಸ್ಪೆಕ್ಟರ್ ಪ್ರದೀಪ್ ಕಾಕಡೆ ಹೇಳಿದ್ದಾರೆ. ಉರ್ದು ಭಾಷೆಯಲ್ಲಿ ಬರೆದ ಪತ್ರಗಳು ಹಾಗೂ ವಿಷಕಾರಿ ರಾಸಾಯನಿಕಗಳುಳ್ಳ ಲಕೋಟೆಗಳು ತಮ್ಮ ನಿವಾಸಕ್ಕೆ ಬಂದಿವೆ ಎಂದು ಪ್ರಜ್ಞಾ ಅವರು ಕಳೆದ ಸೋಮವಾರ ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ