ಪೌರತ್ವ ತಿದ್ದುಪಡಿ ಕಾನೂನು ಬಗ್ಗೆ ಜನ ಜಾಗೃತಿ
Team Udayavani, Jan 19, 2020, 3:23 PM IST
ಟೇಕಲ್: ಕೆಲ ರಾಜಕೀಯ ಪಕ್ಷದವರು ಪೌರತ್ವ ತಿದ್ದುಪಡಿ ಕಾನೂನು ಬಗ್ಗೆ ತಪ್ಪು ಮಾಹಿತಿಗಳನ್ನು ನೀಡಿ ಜನರ ಹಾದಿ ತಪ್ಪಿಸಿ ಅವರ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಟೇಕಲ್ನಲ್ಲಿ ಪೌರತ್ವ ತಿದ್ದುಪಡಿ ಕಾನೂನು ಬಗ್ಗೆ ಜನಜಾಗೃತಿಮೂಡಿಸುವ ನಿಟ್ಟಿನಿಂದ ಪ್ರತಿ ಹಳ್ಳಿಗೂ ಭೇಟಿ ನೀಡಿ ಅರಿವು ಮೂಡಿಸಿ ಮಾತನಾಡಿದರು. ಅದರಂತೆ ತಾವೆಲ್ಲರೂ ಆ ಸುಳ್ಳುಗಳಿಗೆ ಕಿವಿ ಕೊಡದೆ ಪೌರತ್ವ ತಿದ್ದುಪಡಿ ಕಾನೂನು ಬಗ್ಗೆ ಎಲ್ಲರಿಗೂ ತಿಳಿಸಿ ಜಾಗೃತರಾಗೋಣ ಎಂದು ಹೇಳಿದರು.
ಕೆ.ಜಿ.ಹಳ್ಳಿಯಲ್ಲಿ ವಾಸವಾಗಿರುವ ಕೆಲವು ನಿವೇಶನ ರಹಿತರು ಮನೆಕಟ್ಟಿಕೊಳ್ಳಲು ನಿವೇಶನ ಕೂಡಿಸುವಂತೆ ಮನವಿ ಮಾಡಿದರು. ಈ ವೇಳೆ ಸಂಸದ ಮುನಿಸ್ವಾಮಿ ಮಾತನಾಡಿ, ಗ್ರಾಪಂನಲ್ಲಿ ಅರ್ಜಿ ಸಲ್ಲಿಸಿದರೆ ಅವರು ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನ ನೀಡಲು ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಅವರು ಫಲಾನುಭವಿಗಳನ್ನು ಆಯ್ಕೆ ಮಾಡಿಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಅದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭಯ್ಯ, ಜಿಲ್ಲಾ ರೈತ ಮೊರ್ಚಾ ಉಪಾಧ್ಯಕ್ಷ ನಾರಾಯಣ ಸ್ವಾಮಿ, ಸುರೇಶ್, ಅಂಬರೀಶ್, ಗ್ರಾಪಂ ಸದಸ್ಯ ವೆಂಕಟೇಶ್, ಕೆ.ಆರ್. ನಾರಾ ಯಣ ಸ್ವಾಮಿ, ಕೆಇಬಿ ನಾರಾಯಣಪ್ಪ, ಕರವೇ ಅಧ್ಯಕ್ಷ ಚಂದ್ರಶೇಖರ್,ವೆಂಕಟೇಶಪ್ಪ, ಬೆಟ್ಟಹಳ್ಳಿ ವೆಂಕಟರಾಮ್, ರಾಜೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ