ಖುಲಾಸೆಗೊಂಡ ಕ್ರಿಮಿನಲ್‌ ಪ್ರಕರಣಗಳಿಗೆ ಮರುಜೀವ


Team Udayavani, Jan 20, 2020, 3:08 AM IST

Vidhana-Soudha

ಬೆಂಗಳೂರು: ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ಕಾಯ್ದೆಗಳಡಿ ದಾಖಲಾಗಿ ಖುಲಾಸೆಗೊಂಡ ಕ್ರಿಮಿನಲ್‌ ಪ್ರಕರಣಗಳಿಗೆ ಮತ್ತೆ ಜೀವ ಸಿಗಲಿದೆ. ಸುಪ್ರೀಂಕೋರ್ಟ್‌ ಆದೇಶಕ್ಕೆ ತದ್ವಿರುದ್ಧವಾಗಿ ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೇರಿ ವಿಶೇಷ ಕಾಯ್ದೆಗಳಡಿ ದಾಖಲಾಗಿ ಖುಲಾಸೆಗೊಂಡ ಕ್ರಿಮಿನಲ್‌ ಪ್ರಕರಣಗಳಿಗೆ “ಮರು ಪರಿಶೀಲನೆಯಿಂದ’ ವಿನಾಯ್ತಿ ನೀಡಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿದೆ.

ಅದರಂತೆ, ಎಲ್ಲಾ ಖುಲಾಸೆಗೊಂಡ ಕ್ರಿಮಿನಲ್‌ ಪ್ರಕರಣಗಳ ಜತೆಗೆ ವಿಶೇಷ ಕಾಯ್ದೆಗಳಡಿ ಸರ್ಕಾರದ ವಿವಿಧ ಇಲಾಖೆ, ಸಮಿತಿಗಳು, ನಿಗಮಗಳು, ಲೋಕಾ ಯುಕ್ತ ಸಂಸ್ಥೆಗಳಲ್ಲಿ ದಾಖಲಾಗಿ ಖುಲಾಸೆ ಗೊಂಡ ಪ್ರಕರ ಣ ಗಳು ಮರು ಪರಿಶೀಲನೆಗೊಳಪಡಲಿವೆ. ಹಾಗಾಗಿ, 2014ರ ಅ.20ರಿಂದ ಇಲ್ಲಿವರೆಗೆ ವಿಶೇಷ ಕಾಯ್ದೆಗಳಡಿ ದಾಖಲಾಗಿ ಖುಲಾಸೆಗೊಂಡಿರುವ ಕ್ರಿಮಿನಲ್‌ ಪ್ರಕರಣಗಳನ್ನು “ರಾಜ್ಯ ಮಟ್ಟದ ಕ್ರಿಮಿನಲ್‌ ಖುಲಾಸೆ ಪರಿಶೀಲನಾ ಸಮಿತಿ’ಯು ಪರಿಶೀಲನೆಗೆ ಸಜ್ಜಾಗಿದೆ.

ಕ್ರಿಮಿನಲ್‌ ಪ್ರಕರಣಗಳಿಗೆ ಮರು ಪರಿಶೀಲನೆಯಿಂದ ವಿನಾಯ್ತಿ ನೀಡಿ 2015ರ ಆ.10ರಂದು ಹೊರಡಿಸಿದ್ದ ಆದೇಶವನ್ನು ವಾಪಸ್‌ ಪಡೆದುಕೊಂಡಿರುವ ರಾಜ್ಯ ಸರ್ಕಾರ, 2014ರ ಆ.20ರ ಆದೇಶದಂತೆ ಎಲ್ಲಾ ಕ್ರಿಮಿನಲ್‌ ಪ್ರಕರಣಗಳ ಜತೆಗೆ ವಿಶೇಷ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಮರು ಪರಿಶೀಲನೆ ಗೊಳಪಡಿಸುವ ಸಂಬಂಧ 2019ರ ಡಿ.23ರಂದು ಮಾರ್ಪ ಡಿತ ಆದೇಶ ಹೊರಡಿಸಲಾಗಿದೆ. ಆ ಮಾರ್ಪ ಡಿತ ಆದೇಶದ ಪ್ರತಿಯನ್ನು ಪ್ರಮಾಣ ಪತ್ರದೊಂದಿಗೆ 2020ರ ಜ.7ರಂದು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಖುಲಾಸೆಗೊಂಡ ಪ್ರಕರಣಗಳನ್ನು ಮರು ಪರಿಶೀಲನೆಗೊಳಪಡಿಸುವ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡುತ್ತಿಲ್ಲ ಎಂದು ದೂರಿ ವಕೀಲ ಎಸ್‌. ಉಮಾಪತಿ ಎಂಬುವರು ಹೈಕೋರ್ಟ್‌ನಲ್ಲಿ ದಾಖಲಿಸಿರುವ ಸಾರ್ವಜನಿಕ ಹಿತಾ ಸಕ್ತಿ ವಿಚಾರಣೆ ವೇಳೆ “ವಿಶೇಷ ಕಾಯ್ದೆಗಳಡಿ ದಾಖಲಾಗಿ ಖುಲಾಸೆಗೊಂಡ ಪ್ರಕರಣಗಳಿಗೆ ಮರು ಪರಿಶೀಲನೆ ಯಿಂದ ವಿನಾಯ್ತಿ ನೀಡಿರುವ ಅಂಶವನ್ನು ಗಮನಿಸಿದ್ದ ಹೈಕೋರ್ಟ್‌, ಸುಪ್ರೀಂಕೋರ್ಟ್‌ ಆದೇಶಕ್ಕೆ ತದ್ವಿರುದ್ಧ ವಾಗಿ ರಾಜ್ಯ ಸರ್ಕಾರ ತೀರ್ಮಾನ ತೆಗೆದು ಕೊಂಡಿದ್ದು ಹೇಗೆ? ಎಂದು ಪ್ರಶ್ನಿಸಿತ್ತು. ಆಗ ಹಳೆಯ ಆದೇಶ ವಾಪಸ್‌ ಪಡೆದು ಹೊಸದಾಗಿ ಮಾರ್ಪಡಿತ ಆದೇಶ ಹೊರಡಿಸಲು ಸರ್ಕಾರ ಕಾಲಾವಕಾಶ ಕೇಳಿತ್ತು. ಅದ ರಂತೆ ಇದೀಗ ಹೊಸದಾಗಿ ಆದೇಶ ಹೊರಡಿಸಲಾಗಿದೆ.

ಸುಪ್ರೀಂ ಹೇಳಿದ್ದೇನು?: ದೇಶದಲ್ಲಿ ಕ್ರಿಮಿನಲ್‌ ಪ್ರಕರ ಣ ಗಳ ಖುಲಾಸೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಸ್ಟೇಟ್‌ ಆಫ್ ಗುಜರಾತ್‌ ಆ್ಯಂಡ್‌ ಕಿಶನ್‌ಭಾಯಿ ಹಾಗೂ ಇತರರ ಪ್ರಕರಣದಲ್ಲಿ 2014ರ ಜ.7ರಂದು ಸುಪ್ರೀಂಕೋರ್ಟ್‌ ಆದೇಶ ನೀಡಿತ್ತು. “ವಿಚಾರಣಾ ನ್ಯಾಯಾಲಯಗಳಲ್ಲಿ ಪ್ರಕರಣವನ್ನು ನಿರ್ವಹಿಸುವ ವೇಳೆ ಪ್ರಾಸಿಕ್ಯೂಷನ್‌ ವತಿಯಿಂದ ಆಗಿರುವ ವೈಫ‌ಲ್ಯಗಳನ್ನು ಆಧರಿಸಿ ಖುಲಾಸೆಗೊಂಡ ಎಲ್ಲ ಪ್ರಕರಣಗಳನ್ನು ಮರುಪರಿಶೀಲನೆಗೊಳಪಡಿಸಬೇಕು. ಇದಕ್ಕಾಗಿ ಪೊಲೀಸ್‌ ಹಾಗೂ ಅಭಿಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿ ಗಳನ್ನು ರಚಿಸಬೇಕು. ಸಮಿತಿಗಳು ನೀಡುವ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳ ಬೇಕೆಂದು ಎಲ್ಲ ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿತ್ತು.

ಮೂರು ಹಂತದ ಸಮಿತಿಗಳು: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಖುಲಾಸೆಗೊಂಡ ಪ್ರಕರಣಗಳ ಮರು ಪರಿಶೀಲನೆಗೆ ಸರ್ಕಾರ 3 ಹಂತದ “ಖುಲಾಸೆ ಮರು ಪರಿಶೀಲನಾ ಸಮಿತಿಗಳನ್ನು’ ರಚಿ ಸಿತ್ತು. ಅದ ರಂತೆ, ರಾಜ್ಯಮಟ್ಟದ ಕ್ರಿಮಿನಲ್‌ ಖುಲಾಸೆ ಪರಿಶೀಲನಾ ಸಮಿತಿ, ವಲಯ ಮಟ್ಟದ ಕ್ರಿಮಿನಲ್‌ ಖುಲಾಸೆ ಪರಿಶೀಲನೆ ಸಮಿತಿ, ಜಿಲ್ಲಾ ಮಟ್ಟದ ಕ್ರಿಮಿನಲ್‌ ಖುಲಾಸೆ ಪರಿಶೀಲನೆ ಸಮಿತಿಗಳನ್ನು ರಚಿಸಲಾಗಿತ್ತು. ರಾಜ್ಯ ಮಟ್ಟದ ಸಮಿತಿ ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಜಿಲ್ಲಾ ಮತ್ತು ವಲಯದ ಮಟ್ಟದ ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ಖುಲಾಸೆ ಪ್ರಕರಣಗಳ ಬಗ್ಗೆ ಮರು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿ ಪೊಲೀಸ್‌ ಇಲಾಖೆಗೆ ವರದಿ ಸಲ್ಲಿಸಬೇಕು.

ಸಮಿತಿಗಳ ಕಾರ್ಯಪ್ರಗತಿ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಮೂರು ಹಂತದ ಖುಲಾಸೆ ಪರಿಶೀಲನಾ ಸಮಿತಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ, ವಲಯ ಹಾಗೂ ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಸಮಿತಿಗಳನ್ನು ರಚಿಸಲಾಗಿದೆ. 2015ರಿಂದ ಈವರೆಗೆ ರಾಜ್ಯ ಮಟ್ಟದ 8 ವಲಯ ಮಟ್ಟದ 143 ಹಾಗೂ ಜಿಲ್ಲಾ ಮಟ್ಟದ 697 ಪರಿಶೀಲನಾ ಸಭೆ ನಡೆಸಲಾಗಿದೆ. ಈ ಅವಧಿಯಲ್ಲಿ ವಲಯ ಮಟ್ಟದ 19,574, ಜಿಲ್ಲಾ ಮಟ್ಟದ 67,605 ಸೇರಿ ರಾಜ್ಯ ಮಟ್ಟದಲ್ಲಿ ಒಟ್ಟು 86, 187 ಖುಲಾಸೆ ಪ್ರಕರಣಗಳ ಮರು ಪರಿಶೀಲನೆ ನಡೆಸಲಾಗಿದೆ’. ಈ ಅವಧಿಯಲ್ಲಿ ಕರ್ತವ್ಯ ಲೋಪವೆಸಗಿದ ವಲಯ ಮಟ್ಟದಲ್ಲಿ 1,271 ಹಾಗೂ ಜಿಲ್ಲಾ ಮಟ್ಟದಲ್ಲಿ 974 ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಯಾವುದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಸರಿ ಇದ್ದು, ನ್ಯಾಯಾಲಯಗಳಿಂದ ವ್ಯತಿರಿಕ್ತ ತೀರ್ಪುಗಳು ಬಂದಾಗ ಮೇಲ್ಮನವಿ ಸಲ್ಲಿಸಿ ನೊಂದವರಿಗೆ ನ್ಯಾಯ ಒದಗಿಸುವುದು “ಅಭಿಯೋಜನಾಲಯ’ದ (ಪ್ರಾಸಿಕ್ಯೂಷನ್‌) ಮುಖ್ಯ ಉದ್ದೇಶ. ನೊಂದವರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ಅವಶ್ಯಕ ಎಂದು ಕಂಡು ಬಂದಲ್ಲಿ ಪ್ರಕರಣಗಳ ಮರು ಪರಿಶೀಲನೆ ಉತ್ತಮವಾದದ್ದು.
-ಬಿ.ಎಸ್‌. ಪಾಟೀಲ್‌, ಸರ್ಕಾರಿ ಅಭಿಯೋಜಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.