ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ
Team Udayavani, Jan 20, 2020, 3:04 AM IST
ಬೆಂಗಳೂರು: ಮಕ್ಕಳಿಗಾಗಿ ಆಸ್ತಿ ಸಂಪಾದಿ ಸುವುದಕ್ಕಿಂತ ಮುಖ್ಯವಾಗಿ ಉತ್ತಮ ಶಿಕ್ಷಣ ನೀಡಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬೆಂಗಳೂರು ದೈವಜ್ಞ ಯುವಕ ಸಂಘ ಭಾನುವಾರ ಬಸವನಗುಡಿಯ ಶ್ರೀಧರ್ಮ ಸ್ಥಳ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಘದ 27ನೇ ವಾರ್ಷಿ ಕೋತ್ಸವದಲ್ಲಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡಲು ಮುಂದಾಗುತ್ತಾರೆ. ಆದರೆ ಮಗುವಿಗೆ ಸಂಸ್ಕಾರ, ಸಂಸ್ಕೃತಿ, ಉತ್ತಮ ಶಿಕ್ಷಣ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಹೊನ್ನಾವರದ ಜ್ಞಾನೇಶ್ವರಿ ಪೀಠದ ದೈವಜ್ಞ ಬ್ರಾಹ್ಮಣ ಮಠಾಧೀಶ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಮಾತನಾಡಿ, ಭಕ್ತಿ ಮಾರ್ಗ ಎಲ್ಲದಕ್ಕಿಂತ ಶೇಷ್ಠ. ಇತ್ತೀಚಿನ ದಿನದಲ್ಲಿ ಮೊಬೈಲ್ ವ್ಯಾಮೋಹ ಹೆಚ್ಚಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗ ವಹಿಸಲು, ಪ್ರವಚನ ಕೇಳಲು ಅನೇಕರಿಗೆ ಸಮಯವಿಲ್ಲ. ಧಾರ್ಮಿಕತೆಗೆ ಸಮಯ ಮೀಸಲಿಟ್ಟರೆ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.
ಇದೇ ವೇಳೆ 32 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ವಯಂ ಉದ್ಯೋಗಿ ಗಳಿಗೆ 18 ಹೊಲಿಗೆ ಯಂತ್ರ ವಿತರಿಸ ಲಾಯಿತು. ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿಗಳಿಗೆ ಪಾದಪೂಜೆ ನಡೆಯಿತು. ಅಖೀಲ ಭಾರತ ದೈವಜ್ಞ ಸಮಾ ಜೋನ್ನತಿ ಪರಿಷತ್ ಅಧ್ಯಕ್ಷ ದಿನಕರ ಎಸ್. ಬೈಕೇರಿಕರ್, ಉದ್ಯಮಿ ನಾಗರಾಜ ಜಿ. ಶೇಟ್, ಬೆಂಗಳೂರು ದೈವಜ್ಞ ಯುವಕ ಸಂಘದ ಅಧ್ಯಕ್ಷ ಮಹೇಶ್ ಜಿ. ಶೇಟ್ ಉಪಸ್ಥಿತರಿದ್ದರು.