ಶವ ಸಂಸ್ಕಾರಕ್ಕೆ ಕಾಡು-ಮೇಡು ಅಲೆದಾಟ


Team Udayavani, Jan 20, 2020, 3:21 PM IST

gadaga-tdy-1

ಗದಗ: ಇದೊಂದು ಪುಟ್ಟ ತಾಂಡಾಯಾಗಿದ್ದರೂ, ಸ್ಥಿತಿವಂತರೇ ಹೆಚ್ಚು. ಸರಕಾರದ ನೆರವು ಸಾಕಾಗಲಿಲ್ಲವೆಂದರೆ, ಸ್ಥಳೀಯರೇ ಆರ್ಥಿಕವಾಗಿ ನೆರವಾಗುವ ಸಹೃದಯಿಗಳು. ಆದರೆ, ಈ ತಾಂಡೆಯಲ್ಲಿ ಯಾರಾದರೂ ನಿಧನರಾದರೆ, ಕುಟುಂಬಸ್ಥರ ಪಾಡು ಹೇಳತೀರದು. ಈ ಊರಿನಲ್ಲಿ ರುದ್ರಭೂಮಿ ಇಲ್ಲದೇ, ಶವ ಸಂಸ್ಕಾರಕ್ಕಾಗಿ ಕಾಡು-ಮೇಡು ಅಲೆಯುವುದು ಇಲ್ಲಿನ ದುಸ್ಥಿತಿ.

ಇದು, ಜಿಲ್ಲಾ ಕೇಂದ್ರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಅಡವಿಸೋಮಾಪುರ ದೊಡ್ಡ ತಾಂಡಾ ಜನರ ವ್ಯಥೆಯಿದು. ಅಡವಿಸೋಮಾಪುರ ಗ್ರಾ.ಪಂ ವ್ಯಾಪ್ತಿಯ ಈ ಗ್ರಾಮದಲ್ಲಿ 2011ರ ಜನ ಗಣತಿ ಪ್ರಕಾರ ಸುಮಾರು 1300 ಜನ ಸಂಖ್ಯೆಯಿದೆ. ಈ ಪೈಕಿ ಲಮಾಣಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಬಹುತೇಕರು ಗೋವಾ, ಪುಣೆ ಹಾಗೂ ಬೆಂಗಳೂರಿನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಹೆತ್ತವರು, ಮಕ್ಕಳು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ತಿಂಗಳಿಗೊಮ್ಮೆ ಅಥವಾ ಹಬ್ಬ, ಹರಿದಿನಗಳ ಸಂದರ್ಭದಲ್ಲಿ ಗ್ರಾಮಕ್ಕೆ ಮರಳುತ್ತಾರೆ. ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಆಗೊಮ್ಮೆ, ಈಗೊಮ್ಮೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ, ಬಳಿಕ ಅದನ್ನು ಫಾಲೋಅಪ್‌ ಮಾಡಲು ಸಾಧ್ಯವಾಗುತ್ತಿಲ್ಲ. ಮನವಿ ಸ್ವೀಕರಿಸಿದವರೂ, ಬಳಿಕ ಇತ್ತ ಗಮನ ಹರಿಸುವುದಿಲ್ಲ. ಹೀಗಾಗಿ ವರ್ಷಗಳಿಂದ ರುದ್ರ ಭೂಮಿಯ ಬೇಡಿಕೆ ಈಡೇರುತ್ತಿಲ್ಲ ಎಂಬುದು ಗ್ರಾಮಸ್ಥರ ಅಸಹಾಯಕ ನುಡಿಗಳು.

ಸರಕಾರಿ ಜಮೀನಿಗೆ ಅಡ್ಡಿ: ಒಂದೆರಡು ವರ್ಷಗಳ ಹಿಂದೆ ಗ್ರಾಮದಲ್ಲಿ ಸರಕಾರಕ್ಕೆ ಸಂಬಂಧಿಸಿದ 20 ಗುಂಟೆಯಲ್ಲಿ ಜಾಗೆಯಲ್ಲಿ ಸ್ಮಶಾನ ಅಭಿವೃದ್ಧಿಪಡಿಸಲು ಗ್ರಾಮದ ಹಿರಿಯರು ಬೇಡಿಕೆ ಇಟ್ಟಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಗ್ರಾ.ಪಂ. ಆಡಳಿತ, ಎನ್‌ಆರ್‌ ಇಜಿ ಯೋಜನೆಯಡಿ ಸುಮಾರು 10 ಲಕ್ಷ ರೂ. ಮೊತ್ತದಲ್ಲಿ ಕ್ರಿಯಾ ಯೋಜನೆಯನ್ನೂ ಸಿದ್ಧಗೊಳಿಸಿತ್ತು. ಆದರೆ, ರುದ್ರಭೂಮಿಗಾಗಿ ಗುರುತಿಸಿದ ಜಾಗೆಯ ಸುತ್ತಮುತ್ತಲಿನ ಜಮೀನು ಮಾಲೀಕರು ತಕರಾರರು ಮಾಡಿದ್ದರಿಂದ ಆ ಪ್ರಕ್ರಿಯೆ ಅಲ್ಲಿಗೆ ಸ್ಥಗಿತಗೊಂಡಿದೆ ಎನ್ನುತ್ತಿವೆ ಗ್ರಾ.ಪಂ ಮೂಲಗಳು.

ತಪ್ಪದ ಕಾಡು-ಮೇಡು ಅಲೆದಾಟ: ಈ ತಾಂಡಾ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಇಲಾಖೆ ಖಾಲಿ ಜಾಗೆಯಲ್ಲಿ ಈ ವರೆಗೆ ಶವ ಸಂಸ್ಕಾರ ಮಾಡಲಾಗುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆ ಹಸರೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಸಸಿಗಳನ್ನು ನೆಟ್ಟು, ಪೋಷಿಸುತ್ತಿದ್ದಾರೆ. ಬೇಸಿಗೆಯಲ್ಲಿ ಶವ ದಹನದಿಂದ ಅರಣ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಂಭವವಿದ್ದರಿಂದ ಕೆಲವೊಮ್ಮೆ ಅರಣ್ಯ ಅಧಿಕಾರಿಗಳ ಕಿರಿಕಿರಿ ಎದುರಿಸುವಂತಾಗುತ್ತದೆ. ಸದ್ಯಕ್ಕೆ ಗುಡ್ಡದ ಮೂಲೆಯೊಂದನ್ನು ಶವಗಳ ದಹನಕ್ಕೆ ಸ್ಥಳ ಗೊತ್ತುಪಡಿಸಲಾಗಿದೆ. ಆದರೆ, ಸರಕಾರದಿಂದ ಜಮೀನು ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಆಗ್ರಹ.

ಅಡವಿಸೋಮಾಪುರ ದೊಡ್ಡ ತಾಂಡೆಯನ್ನು ಅರಣ್ಯ ಪ್ರದೇಶ ಸುತ್ತುವರಿದಿದ್ದರಿಂದ ಶವ ಸಂಸ್ಕಾರ ಮಾಡುವುದೇ ದೊಡ್ಡ ಸವಾಲಾಗಿ ಪ ರಿಣಮಿಸುತ್ತದೆ. ತಾಂಡೆಯಲ್ಲಿ ಯಾರಾದರೂ, ಸತ್ತರೆ ಖಾಲಿ ಜಾಗೆಯನ್ನು ಹುಡುಕುತ್ತಾ ಶವಹೊತ್ತು ಸಾಗಬೇಕು. ಇಲ್ಲವೇ ಶವ ದಹನದ ವೇಳೆ ಅರಣ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಆತಂಕ ಕಾಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಸ್ಮಶಾನ ಭೂಮಿ ಒದಗಿಸಿಕೊಡಬೇಕು. -ಕಷ್ಣಪ್ಪ ಬೀರಪ್ಪ ರಾಥೋಡ, ಗ್ರಾಮಸ್ಥ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.