ಸಾಲ ಮರುಪಾವತಿ ನೋಟಿಸ್‌-ಪ್ರತಿಭಟನೆ


Team Udayavani, Jan 21, 2020, 2:36 PM IST

yg-tdty-1

ಸುರಪುರ: ತಾಲೂಕಿನ ಸೂಗೂರು ಗ್ರಾಮದ ಕಟ ಬಾಕಿದಾರರಿಗೆ ವ್ಯವಸಾಯ ಸೇವಾ ಸಹಕಾರ ಸಂಘ ಬಡ್ಡಿ ರಹಿತ ಸಾಲ ಮರುಪಾವತಿಸಿ ಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ನಗರದಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಮಾತನಾಡಿ, ಈ ಹಿಂದಿನ ಕುಮಾರಸ್ವಾಮಿ ಸರಕಾರ ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ರೈತರು ಸರಕಾರದ ಮೇಲೆ ಭರವಸೆಯಿಟ್ಟಿದ್ದರು. ಆದರೆ, ಸಾಲ ಮನ್ನಾದ ಬಗ್ಗೆ ರೈತರು ಅನೇಕ ಬಾರಿ ವಿಚಾರಿಸಿದ್ದರು ಕೂಡ ಸಹಕಾರ ಸಂಘದ ಅಧಿಕಾರಿಗಳು ಮನ್ನಾ ಆಗಿದಿರುವ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಈಗ ಏಕಾಏಕಿ ಸೂಗೂರು ಗ್ರಾಮದ ರೈತರಿಗೆ ಮುದ್ದತ್ತು ಮೀರಿದ ಬಾಕಿದಾರರು ಎಂದು ಪರಿಗಣಿಸಿ ಸಹಕಾರಿ ಸಂಘದವರು ನೋಟಿಸ್‌ ಜಾರಿ ಮಾಡಿರುವುದು ಖಂಡನೀಯ ಎಂದು ದೂರಿದರು.

ರೈತರು ತಮ್ಮ ಸಾಲ ಮನ್ನಾ ಆಗಿದಿಯೋ ಇಲ್ಲೋ ಎಂದು ಸಹಕಾರ ಸಂಘದ ಕಾರ್ಯ ದರ್ಶಿಗೆ ದಿನ ನಿತ್ಯಕೇಳುತ್ತಿದ್ದರು ಸಹ ಯಾವುದೇ ಮಾಹಿತಿನೀಡದೆ ಈಗ ಸಂಘಕ್ಕೆ ಆರು ದಿನದೊಳಗೆ ಅಸಲು ಮತ್ತು ಬಡ್ಡಿ ಕಟ್ಟದಿದ್ದರೆ ಮುಂದೆಬರುವ ಸಹಕಾರ ಸಂಘದ ಚುನಾವಣೆಯಲ್ಲಿ ಮತದಾನ ಮಾಡುವ ಸದಸ್ಯತ್ವ ಹಕ್ಕು ಕಳೆದುಕೊಳ್ಳುತ್ತಿರಿ ಎಂದು ತಿಳಿಸಿ ಎಚ್ಚರಿಕೆ ನೋಟಿಸ್‌ ಜಾರಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಲ ಬಾಕಿ ಇರುವ ರೈತರಿಗೆ ಮುಂದೆ ಸಹಕಾರ ಸಂಘಕ್ಕೆ ಸದಸ್ಯರನ್ನಾಗಿ ನೇಮಕ ಮಾಡಿ ಕೊಳ್ಳಲು ಬರುವುದಿಲ್ಲ ಎಂದುನೋಟಿಸ್‌ ಜಾರಿ ಮಾಡಲಾಗಿದೆ. ರೈತರಿಗೆ ಈ ಕುರಿತು ಮುಂಚಿತವಾಗಿ ತಿಳಿಸಿದ್ದರೆಹೇಗಾದರೂ ಸಾಲ ಮಾಡಿ ಸಂಘಕ್ಕೆ ಸಾಲ ಕಟ್ಟಿ ಋಣ ಮುಕ್ತರಾಗುತ್ತಿದ್ದರು. ಈಗ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ನೋಟಿಸ್‌ ಹೊರಡಿಸಿದರೆ ರೈತರು ಸಾಲ ಎಲ್ಲಿಂದ ತಂದು ಕಟ್ಟಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಂದ ಬಡ್ಡಿ ರಹಿತವಾಗಿ ಸಾಲ ಕಟ್ಟಿಸಿಕೊಳ್ಳಬೇಕು. ರೈತರಿಗೆ ನೀಡಿರುವ ನೋಟಿಸ್‌ ಶೀಘ್ರ ವಾಪಸ್‌ ಪಡೆಯಬೇಕು. ಸಾಲ ಕಟ್ಟುವ ಎಲ್ಲ ರೈತರ ಅನುಕೂಲತೆಗಾಗಿ ಹೆಚ್ಚುವರಿಯಾಗಿ ಸಾಲ ನೀಡಬೇಕು. ಹೊಸ ಸಾಲಕ್ಕಾಗಿ ಕಳೆದ 2 ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಎಲ್ಲ ರೈತರಿಗೆ ತಕ್ಷಣ ಹೊಸ ಸಾಲ ನೀಡಬೇಕು ಎಂಬ ಮನವಿ ಪತ್ರವನ್ನು ಸಹಕಾರಿ ಸಂಘದವರಿಗೆ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಧರ್ಮಣ್ಣ ದೊರೆ, ಗೌರವಾಧ್ಯಕ್ಷ ನಂದಣ್ಣ ವಾರಿ, ರೈತ ಮುಖಂಡ ಬಸವರಾಜ, ರಫೀಕ್‌ ಸೇರಿ ಅನೇಕ ರೈತರು ಇದ್ದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.