ಹಳೇ ಗ್ರಾಪಂ ಕಟ್ಟಡದಲ್ಲಿಯೇ ಗ್ರಂಥಾಲಯ


Team Udayavani, Jan 21, 2020, 2:53 PM IST

ballary-tdy-1

ಸಿರುಗುಪ್ಪ: ತಾಲೂಕಿನ ಉಪ್ಪಾರಹೊಸಳ್ಳಿ ಗ್ರಾಮದಲ್ಲಿ 5 ವರ್ಷದ ಹಿಂದೆ ಅಗಸಿ ಹತ್ತಿರ ಗ್ರಂಥಾಲಯ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿ ಒಂದೂವರೆ ವರ್ಷದಲ್ಲಿ ಕಟ್ಟಡ ಕಾಮಗಾರಿಯನ್ನು ಅರ್ಧಂಬರ್ಧ ನಿರ್ಮಾಣ ಮಾಡಲಾಗಿದ್ದು ಇಲ್ಲಿಯವರೆಗೆ ಗ್ರಂಥಾಲಯ ಕಟ್ಟಡದ ಕಾಮಗಾರಿ ಮುಗಿಯದ ಕಾರಣ ಹಳೇ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿಯೇ ಗ್ರಂಥಾಲಯ ನಡೆಯುತ್ತಿದೆ!

ಹಳೇ ಗ್ರಾಪಂ ಕಟ್ಟಡವು ಹಳೆಯದಾಗಿದ್ದು, ಮಳೆ ಬಂದರೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕುತ್ತದೆ. ಇದರಿಂದ ಗ್ರಂಥಾಲಯಕ್ಕೆ ಬರುವ ಓದುಗರಿಗೆ ಅನಾನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಸುವರ್ಣಗ್ರಾಮ ಯೋಜನೆಯಡಿ ರೂ.2.75ಲಕ್ಷ ವೆಚ್ಚದಲ್ಲಿ ಹೊಸ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಮುಂದಾಗಿತ್ತು. ಈ ಕಟ್ಟಡದ ನಿರ್ಮಾಣ ಕಾರ್ಯವನ್ನು ಲ್ಯಾಂಡ್‌ ಆರ್ಮಿಇಲಾಖೆಗೆ ವಹಿಸಲಾಗಿತ್ತು. ಈ ಇಲಾಖೆಯು ಕಟ್ಟಡವನ್ನು ನಿರ್ಮಾಣ ಮಾಡಿದ್ದು ನೆಲಕ್ಕೆ ಬಂಡೆ ಹಾಸುವ ಮತ್ತು ವಿದ್ಯುತ್‌ ಸಂಪರ್ಕ ಕಲ್ಪಿಸದೇ ಇರುವುದರಿಂದ ಗ್ರಾಮಪಂಚಾಯಿತಿಯು ಈ ಕಟ್ಟಡವನ್ನು ತಮ್ಮ ವಶಕ್ಕೆ ಪಡೆಯಲು ಹಿಂದೇಟು ಹಾಕಿದ್ದು, ಅಪೂರ್ಣಗೊಂಡಿರುವ ಕಾಮಗಾರಿಯನ್ನು ಮುಗಿಸಿಕೊಡುವಂತೆ ಗ್ರಾಪಂ ಅಧಿಕಾರಿಗಳು ಲ್ಯಾಂಡ್‌ ಆರ್ಮಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಲ್ಯಾಂಡ್‌ ಆರ್ಮಿ ಇಲಾಖೆ ಅಧಿಕಾರಿಗಳು ಈ ಕಟ್ಟಡದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸದೇ ಗ್ರಾಪಂಗೆ ವಹಿಸಲು ಮುಂದಾಗಿದ್ದು ಈ ಬಗ್ಗೆ ಗ್ರಾಪಂ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ ಲ್ಯಾಂಡ್‌ ಆರ್ಮಿ ಇಲಾಖೆ ತಲೆಕೆಡಿಸಿಕೊಂಡಿಲ್ಲ. ಇದರಿಂದಾಗಿ ಹಳೇ ಕಟ್ಟಡದಲ್ಲಿಯೇ ಗ್ರಂಥಾಲಯ ನಡೆಯುತ್ತಿದೆ.

ರೂ. 2.75ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡ ಕಾಮಗಾರಿಯನ್ನು ಮುಗಿಸಬೇಕು. ಕಟ್ಟಡವನ್ನು ಗ್ರಂಥಾಲಯಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಪಂ ಅಧಿಕಾರಿಗಳನ್ನು ಅನೇಕ ಬಾರಿ ಒತ್ತಾಯಿಸಲಾಗಿದೆ. ಆದರೆ ಲ್ಯಾಂಡ್‌ ಆರ್ಮಿಯವರು ಕಟ್ಟಡದ ಕಾಮಗಾರಿಯನ್ನು ಮಾಡಿದ್ದಾರೆ. ಅವರೇ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಪಂ ಅಧಿಕಾರಿಗಳು ಹೇಳುತ್ತಿದ್ದಾರೆ. ಅಧಿಕಾರಿಗಳು ಒಬ್ಬರ ಮೇಲೊಬ್ಬರು ನೆಪ ಹೇಳುತ್ತ ಕಾಲಕಳೆಯುತ್ತಿದ್ದಾರೆ. ಕೋರಿ ಪಿಡ್ಡಯ್ಯ, ತಾ.ಪಂ. ಸದಸ್ಯ

 

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.