ಸಹಸ್ರ ಚಂಡಿಕಾ ಯಾಗ ಸಂಪನ್ನ
Team Udayavani, Jan 22, 2020, 3:00 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಕೈಗೊಂಡಿದ್ದ ಸಹಸ್ರ ಚಂಡಿಕಾ ಯಾಗ, ಪೂರ್ಣಾಹುತಿ ಯೊಂದಿಗೆ ಮಂಗಳವಾರ ಸಂಪನ್ನಗೊಂಡಿತು.
ಶ್ರೀ ಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಜ.17ರಂದು ಎಚ್.ಡಿ.ದೇವೇಗೌಡ ಮತ್ತು ಚನ್ನಮ್ಮ ಚಂಡಿಕಾ ಯಾಗದ ಸಂಕಲ್ಪ ಕೈಗೊಂಡಿದ್ದರು. ಕುಡ್ನಲ್ಲಿ ಲಕ್ಷ್ಮೀ ನಾರಾಯಣ ಸೋಮಯಾಜಿ ನೇತೃತ್ವದ 100 ಋತ್ವಿಜರ ತಂಡ ಯಾಗ ನೆರವೇರಿಸಿತು. ಕಳೆದ 5 ದಿನಗಳಿಂದಲೂ ದೇವೇಗೌಡ ದಂಪತಿ ಶ್ರೀಮಠದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಮೊದಲ ದಿನ ಗಣಪತಿ ಹೋಮ ನಡೆಸಿದ ನಂತರ ಚಂಡಿಕಾಯಾಗ ಆರಂಭಿಸಲಾಗಿತ್ತು. ಯಾಗದ ಪ್ರಯುಕ್ತ ಪ್ರತಿ ದಿನವೂ ಪಾರಾಯಣ, ಜಪ ನಡೆಸಲಾಯಿತು.
ಮಂಗಳವಾರ ಪೂರ್ಣಾಹುತಿಯಲ್ಲಿ ಶ್ರೀ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಉಪಸ್ಥಿತರಿದ್ದರು. ದೇವೇಗೌಡ ಮತ್ತು ಚನ್ನಮ್ಮ ಅವರೊಂದಿಗೆ ಕುಟುಂಬದ ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರಮೇಶ್, ಎಚ್.ಡಿ.ಬಾಲಕೃಷ್ಣ, ಶೈಲಾ, ಅನುಸೂಯಾ, ಸೊಸೆ ಅನಿತಾ ಕುಮಾರಸ್ವಾಮಿ, ಮೊಮ್ಮಕ್ಕಳು ಭಾಗವಹಿಸಿದ್ದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಶಾಸಕ ಟಿ.ಡಿ.ರಾಜೇಗೌಡ, ಜೆಡಿಎಸ್ ಮುಖಂಡರಾದ ಎಚ್.ಜಿ.ವೆಂಕಟೇಶ್, ದಿವಾಕರ ಭಟ್, ಜಿ.ಜಿ.ಮಂಜುನಾಥ್, ಭರತ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ