ಇಂದು ‘ಸುಪ್ರೀಂ’ನಲ್ಲಿ ಸಿಎಎ ಪ್ರಶ್ನಿಸಿ ಸಲ್ಲಿಸಲಾಗಿರುವ 140ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ


Team Udayavani, Jan 22, 2020, 7:56 AM IST

supreme

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಸಲ್ಲಿಸಲಾಗಿರುವ 144 ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕಾಂಗ್ರೆಸ್ ನಾಯಕ ಜೈರಾಮ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ 142 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಆಲಿಸಲಿದೆ.

ಅರ್ಜಿದಾರರ ಪಟ್ಟಿಯಲ್ಲಿ ಹಲವಾರು ರಾಜಕೀಯ ಪಕ್ಷಗಳು ಕೂಡ ಇದ್ದು – ಕಾಂಗ್ರೆಸ್, ಡಿಎಂಕೆ, ಸಿಪಿಐ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಥವಾ ಐಯುಎಂಎಲ್, ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂ ಮತ್ತು ಕಮಲ್ ಹಾಸನ್ ಅವರ ಮಕ್ಕಲ್ ನೀಧಿ ಮಯ್ಯಮ್  ಮುಂತಾದವು ಸೇರಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014 ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ದೇಶಕ್ಕೆ ಬಂದ ಹಿಂದೂ, ಸಿಖ್, ಬೌದ್ಧ, ಕ್ರಿಶ್ಚಿಯನ್, ಜೈನ್ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲು ಸಿಎಎ ಅನುಕೂಲ ಕಲ್ಪಿಸಿದೆ ಆದರೆ ಈ ಕಾಯ್ದೆ ಜಾರಿಗೆ ಸಂಬಂಧಿಸಿ ಭಿನ್ನಾಭಿಪ್ರಾಯಗಳಿದ್ದು ಜನವರಿ 10 ರಿಂದ ಜಾರಿಗೆ ಬಂದ ಶಾಸನದ ಅನುಷ್ಠಾನ ತಡೆಯಲು ಅರ್ಜಿಗಳು ಮನವಿ ಮಾಡಿವೆ.

ಸಿಎಎಯನ್ನು ಸಾಂವಿಧಾನಿಕವೆಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಜನವರಿ 9 ರಂದು ನಿರಾಕರಿಸಿತು, ದೇಶವು ಕಷ್ಟದ ಸಮಯಗಳನ್ನು ಎದುರಿಸುತ್ತಿದೆ ಮತ್ತು ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿವೆ ಮತ್ತು ಶಾಂತಿಯ ಪ್ರಯತ್ನ ನಡೆಯಬೇಕೆಂದು ಅದು ಅಭಿಪ್ರಾಯಪಟ್ಟಿದೆ. ಸಿಎಎ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಧರ್ಮದ ಆಧಾರದ ಮೇಲೆ ಬೇಧ ಮಾಡುವ ಮೂಲಕ  ಅಕ್ರಮ ವಲಸಿಗರ ಒಂದು ಭಾಗಕ್ಕೆ ಪೌರತ್ವವನ್ನು ನೀಡಲು ಉದ್ದೇಶಿಸಿದೆ ಎಂದು ಐಯುಎಂಎಲ್ ತನ್ನ ಮನವಿಯಲ್ಲಿ ಹೇಳಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಿಸೆಂಬರ್ 12 ರಂದು 2019ರ ಪೌರತ್ವ (ತಿದ್ದುಪಡಿ) ಮಸೂದೆಗೆಅಂಕಿತ ಹಾಕಿದ್ದರು.

ಸರ್ಕಾರದ ಸಿಎಎ ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಮತ್ತು ಮುಸ್ಲಿಮರ ವಿರುದ್ಧ ಸ್ಪಷ್ಟವಾಗಿ ತಾರತಮ್ಯ ಮಾಡುವ ಉದ್ದೇಶವನ್ನು ಹೊಂದಿದೆ.ಈ ಕಾಯಿದೆಯು ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಮಾತ್ರ ಹೆಚ್ಚಿನ ಮಹತ್ವ ನೀಡಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.