ಇಸ್ರೋ ಮಾನವ ರಹಿತ ಗಗನಯಾನಕ್ಕೆ ಮಹಿಳಾ ರೋಬೋಟ್ ಸಿದ್ಧ ; ಯಾರೀಕೆ ‘ವ್ಯೋಮ ಮಿತ್ರ’

2022ರ ಮಾನವ ಸಹಿತ ಗಗನ ಯಾನಕ್ಕೆ ಪೂರ್ವಭಾವಿಯಾಗಿ ನಡೆಯಲಿದೆ ಈ ಯಾನ

Team Udayavani, Jan 22, 2020, 7:19 PM IST

Vyommithra-ISRO-730

ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವಾರು ಮೈಲುಗಲ್ಲುಗಳನ್ನು ಸ್ಥಾಪಿಸುತ್ತಿರುವ ಭಾರತೀಯರ ಹೆಮ್ಮೆಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಇದೀಗ ಇನ್ನೊಂದು ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಮಂಗಳನ ಅಂಗಳಕ್ಕೆ ನೌಕೆಯನ್ನು ಯಶಸ್ವಿಯಾಗಿ ಹಾರಿಬಿಟ್ಟಿರುವ ಮತ್ತು ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯೊಂದನ್ನು ಇಳಿಸುವ ಪ್ರಯತ್ನದಲ್ಲಿ ಭಾಗಶಃ ಯಶಸ್ವಿಯಾಗಿರುವ ಇಸ್ರೋ ಸಂಸ್ಥೆಯ ಮುಂದಿನ ಗುರಿ ಮಾನವ ರಹಿತ ಗಗನಯಾನ.

2022ರಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾನವ ಸಹಿತ ಗಗನಯಾನ ಕೈಗೊಳ್ಳುವುದು ಇಸ್ರೋ ಗುರಿಯಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಾನವ ರಹಿತ ಗಗನ ಯಾನದಲ್ಲಿ ಮಹಿಳಾ ರೋಬೋಟನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಲಿದೆ.

ತನ್ನ ಮಹತ್ವಾಕಾಂಕ್ಷೆಯ ಈ ಯೋಜನೆಯ ಪೂರ್ವತಯಾರಿಯಲ್ಲಿ ಇಸ್ರೋ ವಿಜ್ಞಾನಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು ಇದರ ಒಂದು ಭಾಗವಾಗಿ ಮಾನವ ರಹಿತ ಗಗನಯಾನ ನೌಕೆಯಲ್ಲಿ ಪ್ರಯಾಣಿಸಲಿರುವ ಮಾನವ ಪ್ರತಿರೂಪದ ರೋಬೋಟ್ ಚಿತ್ರವನ್ನು ಇಸ್ರೋ ಇಂದು ಬಿಡುಗಡೆಗೊಳಿಸಿದೆ. ಈ ರೀತಿ ಮಾನವ ರಹಿತ ಗಗನ ಯಾನ ಕೈಗೊಳ್ಳಲಿರುವ ಅದೃಷ್ಟ ಮಹಿಳಾ ರೋಬೋಟ್ ಗೆ ಸಿಕ್ಕಿರುವುದು ಇನ್ನೊಂದು ವಿಶೇಷ. ಮಾನವ ರೂಪವನ್ನು ಹೋಲುವ ಈ ರೋಬೋಟ್ ಗೆ ಇಸ್ರೋ ವಿಜ್ಞಾನಿಗಳು ಇಟ್ಟಿರುವ ಹೆಸರು ‘ವ್ಯೋಮ್ ಮಿತ್ರ’.

ಇಸ್ರೋದ ಮಾನವ ಸಹಿತ ಗಗನಯಾನ ಯೋಜನೆಗೂ ಮೊದಲು ಈ ಮಹಿಳಾ ರೋಬೋಟ್ ಪ್ರಾಯೋಗಿಕವಾಗಿ ಗಗನಕ್ಕೆ ಹಾರಲಿದೆ. ಮನುಷ್ಯರ ದೇಹದ ಹಲವಾರು ಕಾರ್ಯಗಳನ್ನು ಈ ರೋಬೋಟ್ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು ತನ್ನ ವ್ಯೋಮಯಾನದ ವೇಳೆಯಲ್ಲಿ ಅವುಗಳನ್ನೆಲ್ಲಾ ಇಸ್ರೋಗೆ ವರದಿ ಮಾಡುತ್ತಲೇ ಇರಲಿದೆ.


ತನ್ನ ಐತಿಹಾಸಿಕ ಮಾನವ ಸಹಿತ ಗಗನಯಾನಕ್ಕೆ ಈಗಾಗಲೇ ನಾಲ್ಕು ಜನರನ್ನು ಆಯ್ಕೆ ಮಾಡಿರುವುದಾಗಿ ಇಸ್ರೋ ಈ ಮೊದಲೇ ಘೋಷಣೆ ಮಾಡಿತ್ತು. ಮತ್ತು ಈ ನಾಲ್ಕೂ ಜನರು ಪುರುಷರಾಗಿದ್ದು ಅವರ ಗುರುತನ್ನು ಬಹಿರಂಗಪಡಿಸಲು ಇಸ್ರೋ ನಿರಾಕರಿಸಿದೆ.

ಈ ವ್ಯೋಮಯಾನಕ್ಕೆ ಆಯ್ಕೆಯಾಗಿರುವ ನಾಲ್ಕು ಜನರು ರಷ್ಯಾದಲ್ಲಿ 11 ತಿಂಗಳ ತರಬೇತಿಗೆ ಒಳಪಡಲಿದ್ದಾರೆ. ಬಳಿಕ ಅವರೆಲ್ಲರೂ ಭಾರತದಲ್ಲಿ ಗಗನ ನೌಕೆಯ ಚಾಲನೆ ಮತ್ತು ಅದರಲ್ಲಿರುವ ವ್ಯವಸ್ಥೆಗಳ ಕುರಿತಾದ ಮಾಹಿತಿಯನ್ನು ಪಡೆದುಕೊಳ್ಳುವ ತರಬೇತಿಯನ್ನು ಹೊಂದಲಿದ್ದಾರೆ.

ಭಾರತದ ತೂಕಭರಿತ ಉಡ್ಡಯನ ನೌಕೆ ‘ಬಾಹುಬಲಿ’ ಈ ಗಗನಯಾನಿಗಳನ್ನು ಹೊತ್ತು ಆಕಾಶಕ್ಕೆ ಜಿಗಿಯಲಿದೆ. ಮಾನವ ಸಹಿತ ಗಗನಯಾನ ಇಸ್ರೋದ ಮೊದಲ ಆದ್ಯತೆಯ ಪಟ್ಟಿಯಲ್ಲಿದೆ ಎಂದು ಈ ವರ್ಷದ ಪ್ರಾರಂಭದಲ್ಲಿ ಇಸ್ರೋ ಅಧ್ಯಕ್ಷರು ಹೇಳಿಕೆ ನೀಡಿದ್ದರು. ಈ ಯೋಜನೆಗಾಗಿ ಕೇಂದ್ರ ಸರಕಾರ 10 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದೆ.

1984ರಲ್ಲಿ ಬಾಹ್ಯಾಕಾಶ ಯಾನ ಮಾಡಿದ ಪ್ರಪ್ರಥಮ ಭಾರತೀಯ ರಾಕೇಶ್ ಶರ್ಮಾ ಅವರಾಗಿದ್ದರೂ ಅಂದು ಅವರು ಯಾನ ಮಾಡಿದ್ದ ವ್ಯೋಮ ನೌಕೆ ಭಾರತದ್ದಾಗಿರಲಿಲ್ಲ. ಹಾಗಾಗಿ ಇದು ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿಯಲ್ಲಿ ಇಸ್ರೋ ಖುದ್ದು ಕೈಗೆತ್ತಿಕೊಂಡಿರುವ ಯೋಜನೆಯಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.