ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ : ಯತ್ನಾಳ

ಮಾನಸಿಕ ಸ್ಥಿಮಿತ ಕಳೆದುಕೊಂಡ ಎಚ್‌ಡಿಕೆಗೆ ಸರ್ಕಾರವೇ ಚಿಕಿತ್ಸೆ ಕೊಡಿಸಲಿ

Team Udayavani, Jan 22, 2020, 7:59 PM IST

basanagowda

ವಿಜಯಪುರ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧದ ಯತ್ನಾಳರ ಟೀಕಾಪ್ರಹಾರ ಹೀಗಿದೆ:
– ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆಯಾದ ಪ್ರಕರಣವನ್ನು ಅಣಕು ಪ್ರದರ್ಶನ ಎಂದು ಗೇಲಿ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿಯವರು, ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರಿಗೆ ಸರ್ಕಾರವೇ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು.

– ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ಉನ್ನತ ಸ್ಥಾನದಲ್ಲಿದ್ದ ವ್ಯಕ್ತಿ, ಅಧಿಕಾರ ಇಲ್ಲದ ಸಂದರ್ಭದಲ್ಲಿ ರಾಜ್ಯದ ಪೊಲೀಸರ ಕುರಿತು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಹಾಗೂ ನಾಚಿಗೇಡಿನಿಂದ ಕೂಡಿದೆ.

– ಅವರ ಜೀವನ ಹಾಗೂ ರಾಜಕೀಯ ಸ್ಥಿತಿ ಅಣಕು ಪರಿಸ್ಥಿತಿಗೆ ತಲುಪಿದೆ. ಹೀಗಾಗಿ, ಮಾನಸಿಕ ಸ್ಥಿತಿ ಕಳೆದುಕೊಂಡಿರುವ ಅವರು, ನಾಗರಿಕರಿಗೆ ರಕ್ಷಣೆ ನೀಡುವ ಪೊಲೀಸರು, ದೇಶ ಕಾಯುವ ಸೈನಿಕರ ಕುರಿತು ಹಗುರವಾಗಿ ಮಾತನಾಡುವ ಮಟ್ಟಕ್ಕೆ ತಲುಪಿದ್ದಾರೆ.

– ಪೌರತ್ವ ಕಾಯ್ದೆ ವಿರೋಧಿಸಿ ಕಲಬುರಗಿಯಲ್ಲಿ ಜರುಗಿದ ಸಮಾವೇಶದಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಪಾಕಿಸ್ತಾನ ರಾಜಕೀಯ ನಾಯಕರಂತೆ ಮಾತನಾಡಿದ್ದಾರೆ. ದಾವುದ್‌ ಇಬ್ರಾಹಿಂ ತಮ್ಮ ಇಮ್ರಾನ್‌ ಖಾನ್‌, ಇಮ್ರಾನ್‌ ಖಾನ್‌ ತಮ್ಮ ರಾಹುಲ್‌ ಗಾಂಧಿ, ಇಮ್ರಾನ್‌ ಖಾನ್‌ ಅಳಿಯ ಕುಮಾರಸ್ವಾಮಿ ಎಂಬಂತೆ ಅವರು ಮಾತನಾಡಿದ್ದಾರೆ.

– ಪ್ರಧಾನಿ ಮೋದಿ ಕುಟುಂಬದ ಕುರಿತು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಕೂಡ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ. ಮೋದಿ ಅವರ ತಂದೆಯ ಬರ್ತ್‌ ಸರ್ಟಿಫಿಕೇಟ್‌ ಮೋದಿ ಬಳಿ ಇಲ್ಲ ಎನ್ನುವ ಮೂಲಕ ಕೀಳಾಗಿ ಮಾತನಾಡಿದ್ದಾರೆ. ಮೋದಿ ತಂದೆಯ ದಾಖಲೆ ಕೇಳುವ ಇಬ್ರಾಹಿಂಗೆ ತಮ್ಮ ಮುತ್ತಜ್ಜ ಯಾರೆಂದು ಗೊತ್ತಿದ್ದರೆ ಹೇಳಲಿ.

– ಬಾಂಬ್‌ ಪತ್ತೆ ವಿಚಾರದಲ್ಲಿ ಗೃಹ ಇಲಾಖೆ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಬಾಂಬ್‌ ಇರಿಸಿದ ಆರೋಪಿ ಆದಿತ್ಯರಾವ್‌ ಶಂಕಿತ ಬ್ಲಾಕ್‌ ಮೇಲರ್‌ ಹಾಗೂ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾನೆ. ಆದರೆ, ಪ್ರಕರಣದ ತನಿಖೆ ವಿಷಯದಲ್ಲಿ ಪೊಲೀಸ್‌ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.