ಮಂಜೂರಾದ 27 ಹುದ್ದೆಗಳಲ್ಲಿ 6 ಮಂದಿ ಮಾತ್ರ ಕಾರ್ಯನಿರ್ವಹಣೆ


Team Udayavani, Jan 23, 2020, 4:37 AM IST

led-11

ಬಂಟ್ವಾಳ: ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರಕಾರ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು, ಆದರೆ ಅದನ್ನು ಅನುಷ್ಠಾನಗೊಳಿಸುವ ಇಲಾಖೆಯಲ್ಲಿ ಸಿಬಂದಿ ಕೊರತೆ ಕಾಡುತ್ತಿದೆ. ಬಂಟ್ವಾಳ ತಾ| ಕೃಷಿ ಇಲಾಖೆಗೆ ಮಂಜೂರಾಗಿರುವ 27 ಹುದ್ದೆಗಳಲ್ಲಿ 6 ಮಂದಿ ಮಾತ್ರ ಕಾರ್ಯ ನಿರ್ವಹಿಸು ತ್ತಿದ್ದು, ಶೇ. 77.77ಕ್ಕಿಂತಲೂ ಹೆಚ್ಚು ಹುದ್ದೆ ಖಾಲಿ ಇವೆ.

ಈ ರೀತಿಯಲ್ಲಿ ಮಂಜೂರಾಗಿರುವ ಹುದ್ದೆಗಳಲ್ಲಿ ಖಾಲಿಯಾಗಿರುವುದೇ ಹೆಚ್ಚಿದ್ದಾಗ ಇರುವ ಸಿಬಂದಿಯೂ ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾದ ಅನಿವಾರ್ಯ ಎದುರಾಗುತ್ತದೆ. ಕಾರ್ಯನಿರ್ವ ಹಿಸುವವರೇ 2- 3 ಹುದ್ದೆಗಳನ್ನು ನಿರ್ವಹಿಸಬೇಕಾ ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಕೆಲಸವೂ ಸಾಗುವುದಿಲ್ಲ.

ತಾಲೂಕಿನ ಬಿ.ಸಿ. ರೋಡ್‌ನ‌ಲ್ಲಿರುವ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಜತೆಗೆ ಮೂರು ರೈತ ಸಂಪರ್ಕ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಬಂಟ್ವಾಳ ಕಸ್ಬಾ ಸಂಪರ್ಕ ಕೇಂದ್ರವು ಸಹಾಯಕ ನಿರ್ದೇಶಕರ ಕಚೇರಿಯ ವಠಾರದಲ್ಲಿದ್ದರೆ, ಪಾಣೆಮಂಗಳೂರು ಹಾಗೂ ವಿಟ್ಲದಲ್ಲಿ ರೈತ ಸಂಪರ್ಕ ಕೇಂದ್ರ ಗಳು ಕಾರ್ಯಾಚರಿಸುತ್ತಿವೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ತಲಾ ಒಬ್ಬರು ಕೃಷಿ ಅಧಿಕಾರಿ, 4 ಮಂದಿ ಸಹಾಯಕ ಕೃಷಿ ಅಧಿಕಾರಿ ಕರ್ತವ್ಯ ನಿರ್ವ ಹಿಸಬೇಕಿದ್ದು, ಆದರೆ ಇಲ್ಲಿ ಸಾಧ್ಯವಾಗಿಲ್ಲ. ರೈತರ ಬಳಿಗೆ ತೆರಳಿ ಫೀಲ್ಡ್‌ನಲ್ಲೇ ಕಾರ್ಯ ನಿರ್ವಹಿಸ ಬೇಕಾದ ಕಾರಣ ಸಿಬಂದಿ ಕೊರತೆ ಹೆಚ್ಚಿನ ತೊಂದರೆ ನೀಡುತ್ತದೆ ಎಂದು ಇಲಾಖೆ ಮೂಲ ಹೇಳುತ್ತದೆ.

ಹೊರಗುತ್ತಿಗೆ ಸಿಬಂದಿ
ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಒತ್ತಡ ನಿಭಾಯಿಸಲು, ಇಲಾಖೆಯ ಕಾರ್ಯ ಸರಾಗ ವಾಗುವ ನಿಟ್ಟಿನಲ್ಲಿ ಹೊರಗುತ್ತಿಗೆಯ ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳಲ್ಲಿ ತಲಾ ಒಬ್ಬೊಬ್ಬರು ಲೆಕ್ಕಿಗರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಒಟ್ಟು 4 ಮಂದಿ ಹೊರಗುತ್ತಿಗೆಯ ಸಿಬಂದಿ ಇದ್ದಾರೆ.

ಮುಖ್ಯಸ್ಥರ ಹುದ್ದೆಯೇ ಖಾಲಿ !
ತಾಲೂಕಿನ ಕೃಷಿ ಇಲಾಖೆಯ ಮುಖ್ಯಸ್ಥರಾಗಿರುವ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯೇ ಖಾಲಿ ಇದೆ. 2018ರ ಎಪ್ರಿಲ್‌ನಿಂದ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯನ್ನು ಬಂಟ್ವಾಳ ಕಸ್ಬಾದ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಅವರು ನಿಭಾಯಿಸುತ್ತಿದ್ದಾರೆ. ಇದರ ಜತೆಗೆ ತಾಂತ್ರಿಕ ಅಧಿಕಾರಿ ಸಹಿತ ಅವರು ಮೂರು ಹುದ್ದೆಗಳನ್ನು ನಿಭಾಯಿಸಬೇಕಾದ ಸ್ಥಿತಿ ಇದೆ !

ಭರ್ತಿ-ಖಾಲಿ ವಿವರ
ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರ ಒಂದು ಹುದ್ದೆ ಖಾಲಿಯಿದ್ದು, ಕೃಷಿ ಅಧಿಕಾರಿ 5 ಹುದ್ದೆಗಳಲ್ಲಿ ಇಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಹಾಯಕ ಕೃಷಿ ಅಧಿಕಾರಿಯ 12 ಹುದ್ದೆಗಳಲ್ಲಿ ಮೂರು ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದಂತೆ ಅಧೀಕ್ಷಕರು, ಪ್ರಥಮದರ್ಜೆ ಸಹಾಯಕರು, ಬೆರಳಚ್ಚುಗಾರರು ಹಾಗೂ ವಾಹನ ಚಾಲಕರ ತಲಾ ಒಂದೊಂದು ಹುದ್ದೆಗಳಿದ್ದು, ಎಲ್ಲವೂ ಖಾಲಿ ಇವೆ.

ದ್ವಿತೀಯ ದರ್ಜೆ ಸಹಾಯಕರ ಮಂಜೂರಾದ ಎರಡೂ ಹುದ್ದೆಗಳೂ ಖಾಲಿ ಇವೆ. ಡಿ ದರ್ಜೆ ನೌಕರರ 3 ಹುದ್ದೆಗಳಲ್ಲಿ ಒಬ್ಬರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಒಟ್ಟು ಮಂಜೂರಾದ 27 ಹುದ್ದೆಗಳ ಪೈಕಿ 6 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 21 ಹುದ್ದೆಗಳು ಖಾಲಿ ಇವೆ.

 2-3 ಹುದ್ದೆಗಳ ನಿರ್ವಹಣೆ
ಇಲಾಖೆಯಲ್ಲಿ ಬಹುತೇಕ ಹುದ್ದೆಗಳು ಖಾಲಿಯಿದ್ದು, ಇರುವವರು 2-3 ಹುದ್ದೆಗಳನ್ನು ನಿಭಾಯಿಸುತ್ತಿದ್ದೇವೆ. ನನ್ನ ಖಾಯಂ ಹುದ್ದೆ ಕೃಷಿ ಅಧಿಕಾರಿಯಾಗಿದ್ದು, ಪ್ರಸ್ತುತ ಪ್ರಭಾರ ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯನ್ನು ನಿಭಾಯಿ ಸುತ್ತಿದ್ದೇನೆ. ಉಳಿದಂತೆ ಕೆಲವೊಂದು ಹುದ್ದೆಗಳಿಗೆ ಹೊರಗುತ್ತಿಗೆಯ ಆಧಾರದಲ್ಲಿ ಸಿಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ.
 - ನಾರಾಯಣ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರು, ಬಂಟ್ವಾಳ

-  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.