“ಎ’ ತಂಡಗಳ ಅನಧಿಕೃತ ಏಕದಿನ ಸರಣಿ ಭಾರತಕ್ಕೆ 5 ವಿಕೆಟ್‌ ಜಯ


Team Udayavani, Jan 23, 2020, 12:19 AM IST

5-wicket-jaya

ಲಿಂಕನ್‌ (ನ್ಯೂಜಿಲ್ಯಾಂಡ್‌): ಭಾರತ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಯುವ ಆಟಗಾರರಾದ ಪೃಥ್ವಿ ಶಾ ಮತ್ತು ಸಂಜು ಸ್ಯಾಮ್ಸನ್‌ ಬಿರುಸಿನ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಬುಧವಾರ “ಬರ್ಟ್‌ ಸಟ್‌ಕ್ಲಿಫ್ ಓವಲ್‌’ನಲ್ಲಿ ನ್ಯೂಜಿಲ್ಯಾಂಡ್‌ “ಎ’ ವಿರುದ್ಧ ನಡೆದ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಶಾ ಮತ್ತು ಸ್ಯಾಮ್ಸನ್‌ ಅವರ ಉತ್ತಮ ಆಟದಿಂದಾಗಿ ಭಾರತ “ಎ’ ತಂಡವು ಐದು ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಅನಧಿಕೃತ ಏಕದಿನ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ದಾಖಲಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಕಿವೀಸ್‌ “ಎ’ ತಂಡವು 48.3 ಓವರ್‌ಗಳಲ್ಲಿ 230 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಭಾರತ ಕೇವಲ 29.3 ಓವರ್‌ಗಳಲ್ಲಿ 231 ರನ್‌ ಗಳಿಸಿ ಜಯಶಾಲಿಯಾಯಿತು.

ಭಾರತ ಪರ ಆರಂಭಿಕರಾದ ಪೃಥ್ವಿ ಶಾ ಮತ್ತು ಮಾಯಾಂಕ್‌ ಅಗರ್ವಾಲ್‌ (29) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟಿಗೆ 9.1 ಓವರ್‌ಗಳಲ್ಲಿ 79 ರನ್‌ ಒಟ್ಟುಗೂಡಿಸಿದರು.

35 ಎಸೆತ ಎದುರಿಸಿದ ಪೃಥ್ವಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ನೆರವಿನಿಂದ 48 ರನ್‌ ಗಳಿಸಿದರು. ಈ ನಡುವೆ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದ ವಿಕೆಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ 21 ಎಸೆತಗಳಿಂದ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ ನೆರವಿನಿಂದ 39 ರನ್‌ ಗಳಿಸಿ ಅಬ್ಬರಿಸಿದರು. ಭಾರತ ಪರ ಮಿಂಚಿದ ಮತ್ತೂಬ್ಬ ಬ್ಯಾಟ್ಸ್‌
ಮನ್‌ ಸೂರ್ಯಕುಮಾರ್‌ ಯಾದವ್‌. ಅವರ ಗಳಿಕೆ 35 ರನ್‌ (18 ಎಸೆತ, 6 ಬೌಂಡರಿ, 1 ಸಿಕ್ಸರ್‌). ನಾಯಕ ಶುಭಮನ್‌ ಗಿಲ್‌ 30, ವಿಜಯ್‌ ಶಂಕರ್‌ ಅಜೇಯ 20, ಕೃಣಾಲ್‌ ಪಾಂಡ್ಯ ಅಜೇಯ 15 ರನ್‌ಗಳ ಕೊಡುಗೆ ನೀಡಿದರು.

ಕಿವೀಸ್‌ ಪರ ಆರಂಭಿಕ ರಚಿನ್‌ ರವೀಂದ್ರ 49 ಹಾಗೂ ನಾಯಕ ಟಾಮ್‌ ಬ್ರೂಸ್‌ 47 ರನ್‌ ಗಳಿಸಿ ಸಮರ್ಥ ಬ್ಯಾಟ್ಸ್‌ಮನ್‌ ಎನಿಸಿಕೊಂಡರು. ಭಾರತದ ಪರ ಮೊಹಮ್ಮದ್‌ ಸಿರಾಜ್‌ 3, ಖಲೀಲ್‌ ಅಹ್ಮದ್‌ ಮತ್ತು ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತು ಮಿಂಚಿದರು.

ಆಯ್ಕೆ ಸಮರ್ಥಸಿಕೊಂಡ ಶಾ-ಸಂಜು
ಹಿರಿಯ ಅನುಭವಿ ಆಟಗಾರ ಶಿಖರ್‌ ಧವನ್‌ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಕಿವೀಸ್‌ ಪ್ರವಾಸದಲ್ಲಿ ಟ್ವೆಂಟಿ-20 ಸರಣಿಗೆ ಸಂಜು ಸ್ಯಾಮ್ಸನ್‌ ಮತ್ತು ಏಕದಿನ ಸರಣಿಗೆ ಪೃಥ್ವಿ ಶಾ ಅವರನ್ನು ಬದಲಿ ಆಟಗಾರರೆಂದು ಘೋಷಿಸಲಾಗಿತ್ತು. ಇದಕ್ಕೆ ತಕ್ಕ ರೀತಿಯಲ್ಲಿ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ಪೃಥ್ವಿ ಹಾಗೂ ಸಂಜು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌
ನ್ಯೂಜಿಲ್ಯಾಂಡ್‌ “ಎ’ -48.3 ಓವರ್‌ಗಳಲ್ಲಿ 230ಕ್ಕೆ ಆಲೌಟ್‌ (ರವೀಂದ್ರ 49, ಬ್ರೂಸ್‌ 47, ಸಿರಾಜ್‌ 33ಕ್ಕೆ 3, ಅಕ್ಷರ್‌ 31ಕ್ಕೆ 2, ಖಲೀಲ್‌ 46ಕ್ಕೆ 2). ಭಾರತ “ಎ’-5 ವಿಕೆಟಿಗೆ 231( ಶಾ 48, ಸಂಜು, 39, ಸೂರ್ಯಕುಮಾರ್‌ 35, ಜೇಮ್ಸ್‌ ನೀಶಮ್‌ 25ಕ್ಕೆ 2).

ಕಿವೀಸ್‌ ಪ್ರವಾಸದಲ್ಲಿ ಸಂಜು-ಪೃಥ್ವಿಗೆ ಸ್ಥಾನ
ಭುಜದ ನೋವಿನಿಂದ ಬಳಲುತ್ತಿರುವ ಶಿಖರ್‌ ಧವನ್‌ ಮುಂಬರುವ ನ್ಯೂಜಿಲ್ಯಾಂಡ್‌ ಪ್ರವಾಸದ ಟಿ20 ಮತ್ತು ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ತಂಡವು ಧವನ್‌ ಬದಲಿಗೆ ಟ್ವೆಂಟಿ20ಗೆ ಯುವ ಆಟಗಾರ ಸಂಜು ಸ್ಯಾಮ್ಸನ್‌ ಮತ್ತು ಏಕದಿನ ಸರಣಿಗೆ ಪೃಥ್ವಿ ಶಾ ಅವರನ್ನು ಸೇರಿಸಿಕೊಂಡಿದೆ. ಶಾ ಅವರು ಭಾರತ “ಎ’ ತಂಡದ ಎರಡನೇ ಅಭ್ಯಾಸ ಪಂದ್ಯದಲ್ಲಿ 100 ಎಸೆತಗಳಲ್ಲಿ 150 ರನ್‌ ಸಿಡಿಸಿ ಗಮನ ಸೆಳೆದಿದ್ದರು.

ಶಿಖರ್‌ ಧವನ್‌ ಅವರ ಗಾಯದ ಎಂಆರ್‌ಐ ಸ್ಕ್ಯಾನ್‌ ನಡೆಸಲಾಗಿದ್ದು ಗ್ರೇಡ್‌ ಸೆಕೆಂಡ್‌ ಗಾಯವಾಗಿರುವುದು ದೃಢಪಟ್ಟಿದೆ. ಹಾಗಾಗಿ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ಅವರಿಗೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.