ಶಂಕರನಾರಾಯಣ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ 4 ಜೋಡಿ ಅವಳಿ ಜವಳಿ  

ನಡೆನುಡಿಯಲ್ಲಿ ಮಾತ್ರವಲ್ಲದೆ ಆಟ ಪಾಠಗಳಲ್ಲೂ ಮುಂಚೂಣಿಯಲ್ಲಿ

Team Udayavani, Jan 23, 2020, 1:01 AM IST

2101SIDE9-SN-SCHOOL

ಸಿದ್ದಾಪುರ: ಶಂಕರ ನಾರಾಯಣ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನಾಲ್ಕು ಜೋಡಿ ಅವಳಿ ಜವಳಿ ಮಕ್ಕಳು ಕಲಿಯುತ್ತಿದ್ದಾರೆ. ಈ ನಾಲ್ಕು ಜೋಡಿ ಅವಳಿ ಜವಳಿಗಳು ಪ್ರತಿನಿತ್ಯ ಶಾಲೆಗೆ ಬರುವಾಗ ಒಂದೇ ತೆರನಾದ ಬ್ಯಾಗ್‌, ನಡೆದುಕೊಳ್ಳುವ ರೀತಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಶಿಕ್ಷಕರನ್ನು ಆಚ್ಚರಿ ಮೂಡಿಸಿದ್ದಾರೆ. ಇವರು ತಮ್ಮ ಡ್ರೆಸ್‌ ಹಾಗೂ ನಡೆ ನುಡಿಯಲ್ಲಿ ಮಾತ್ರವಲ್ಲದೆ, ಆಟ- ಪಾಠಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಇದು ಇನ್ನೂ ಆಚ್ಚರಿಗೆ ಕಾರಣವಾಗಿದೆ. ಅರಳು ಹುರಿದಂತೆ ಮಾತನಾಡುವ ಅವಳಿ- ಜವಳಿ ಮಕ್ಕಳು ಎಲ್‌ಕೆಜಿ, ಯುಕೆಜಿ, 3 ಮತ್ತು 4ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ. ಈ ಮಕ್ಕಳು ಕಲಿಯುವ ತರಗತಿಗಳಿಗೆ ಪಾಠಕ್ಕೆ ಹೋಗುವುದೆಂದರೆ ಶಿಕ್ಷಕರಿಗೆ ಒಂದು ರೀತಿಯಲ್ಲಿ ಖುಷಿ.

ಶಾಲೆಯು ಕನ್ನಡ ಮಾಧ್ಯಮ ಶಾಲೆಯಾಗಿದ್ದರೂ ಇಲ್ಲಿ ಆಂಗ್ಲಮಾಧ್ಯಮ ವಿಭಾಗ ಇದೆ. ಶಾಲೆಯ ಆಂಗ್ಲಮಾಧ್ಯಮ ವಿಭಾಗದ ಎಲ್‌ಕೆಜಿಯಲ್ಲಿ ಕಲಿಯುತ್ತಿರುವ ಸಾನ್ವಿತಾ ಮತ್ತು ಸಂಹಿತಾ, ಯುಕೆಜಿಯಲ್ಲಿ ಕಲಿಯುತ್ತಿರುವ ರವಿ ಮತ್ತು ಕಿರಣ್‌, 3ನೇ ತರಗತಿಯಲ್ಲಿ ಕಲಿಯುತ್ತಿರುವ ಮಂದಾರ ಪೈ ಮತ್ತು ಮೇಘರಾಜ ಪೈ, 5ನೇ ತರಗತಿಯಲ್ಲಿ ಕಲಿಯುತ್ತಿರುವ ತನ್ವಿ ಮತ್ತು ಮನ್ವಿ ಶಾಲೆಗೆ ವಿಶೇಷ ಆಕರ್ಷಣೆಯಾಗಿದ್ದಾರೆ. ಈ ನಾಲ್ಕು ಜೋಡಿಗಳು ಪ್ರತಿಯೊಬ್ಬರೂ ಒಂದೊಂದು ವಿಭಾಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಅವರ ಪೈಕಿ ರವಿ ಮತ್ತು ಕಿರಣ್‌ ಅರಳು ಹುರಿದಂತೆ ಮಾತನಾಡುತ್ತಿದ್ದರೆ, ಮಂದಾರ ಪೈ ಮತ್ತು ಮೇಘರಾಜ ಪೈ ಅಕ್ಕ ತಮ್ಮಂದಿರು. ಉಳಿದ ಮೂವರು ಅವಳಿ ಜವಳಿಗಳು. ರವಿ ಮತ್ತು ಕಿರಣ್‌ ಒಂದೇ ತೆರನಾಗಿರುವುದರಿಂದ ಅವರನ್ನು ಗುರುತಿಸುವುದು ಸ್ವಲ್ಪ ಕಷ್ಟವಾಗುತ್ತದೆ. ಈ ಅವಳಿ ಜವಳಿ ಮಕ್ಕಳಲ್ಲಿ ಏಕತೆರನಾದ ಗುಣಧರ್ಮವಿದೆ. ಆಹಾರ ವಿಹಾರ ದಲ್ಲಿಯೂ ಏಕ ಪ್ರಕಾರ ಆಸಕ್ತಿ ಹೊಂದಿ ದ್ದಾರೆ. ಒಬ್ಬರಿಗೆ ಸೌಖ್ಯ ಇಲ್ಲದಿದ್ದರೆ ಇನ್ನೊಬ್ಬರಿಗೂ ಹಾಗೇ ಆಗುತ್ತಿರುವುದು ಮತ್ತೂಂದು ವಿಶೇಷ.

ಗುರುತು ಹಿಡಿಯುವುದು ಕಷ್ಟ
ಈ ಶಾಲೆ ಸರಕಾರಿ ಶಾಲೆಯಾಗಿದ್ದರೂ, ಖಾಸಗಿ ಶಾಲೆಗೆ ಕಡಿಮೆ ಇರದ ರೀತಿಯಲ್ಲಿ ಗುರುತಿಸಿಕೊಂಡಿದೆ. ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ವಿವಿಧ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಇವರು ಆಟ ಪಾಠದಲ್ಲಿ ಕ್ರಿಯಾಶೀಲರಾಗಿದ್ದಾರೆ. ಇವರನ್ನು ಗುರುತು ಹಿಡಿಯುವುದು ಕೂಡ ಕಷ್ಟವಾಗುತ್ತಿದೆ.
-ಸಂತೋಷಕುಮಾರ ಶೆಟ್ಟಿ,, ಪ್ರಭಾರ ಮುಖ್ಯ ಶಿಕ್ಷಕ

ಮೂಲ ಸೌಕರ್ಯ
ಈ ಶಾಲೆಯು ಕುಂದಾಪುರ ವಲಯದಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಯಾಗಿದೆ. ಈ ಶಾಲೆಯನ್ನು ಸರಕಾರ, ಎಸ್‌ಡಿಎಂಸಿ, ವಿದ್ಯಾಭಿಮಾನಿಗಳು, ವಿಶೇಷವಾಗಿ ಶಂಕರನಾರಾಯಣ ಎಜುಕೇಶನಲ್‌ ಟ್ರಸ್ಟ್‌ ಎಲ್ಲ ರೀತಿಯ ಮೂಲ ಸೌಕರ್ಯ ನೀಡುವಲ್ಲಿ ಶ್ರಮಿಸುತ್ತಿದೆ. ಈಗ ಈ ಶಾಲೆಗೆ ನಾಲ್ಕು ಜೋಡಿ ಮಕ್ಕಳು ಆಕರ್ಷಣೆಯಾಗಿದ್ದಾರೆ ಎಂದು ಪ್ರಭಾರ ಮುಖ್ಯ ಶಿಕ್ಷಕ ಸಂತೋಷ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.