ಕಾವೇರಿ ನದಿ ಹೂಳೆತ್ತಲು 130 ಕೋಟಿ ರೂ.: ಅಪ್ಪಚ್ಚುರಂಜನ್‌


Team Udayavani, Jan 23, 2020, 1:55 AM IST

kaveri-nadi

ಮಡಿಕೇರಿ: ಕಾವೇರಿ ನದಿ ಜಲಾನಯನ ಪ್ರದೇಶಗಳ ಹೂಳೆತ್ತಲು ಸರಕಾರದಿಂದ ಘೋಷಣೆಯಾಗಿರುವ ರೂ.130 ಕೋಟಿ ರೂ.ಗಳನ್ನು ತತ್‌ಕ್ಷಣವೇ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಭರವಸೆ ನೀಡಿದ್ದಾರೆ.

ಕುಶಾಲನಗರದಲ್ಲಿ ನೂತನವಾಗಿ ಅಸ್ವಿತ್ವಕ್ಕೆ ಬಂದ ಕಾವೇರಿ ನದಿ ಪ್ರವಾಹ ಪೀಡಿತರ ರಕ್ಷಣಾ ವೇದಿಕೆ ಪ್ರತಿನಿಧಿಗಳು ಶಾಸಕರನ್ನು ಭೇಟಿ ಮಾಡಿ ಮುಂದಿನ ಸಾಲಿನಲ್ಲಿ ನೆರೆ ಮತ್ತೆ ಮರುಕಳಿಸದಂತೆ ಯೋಜನೆ ರೂಪಿಸಲು ಮನವಿ ಸಲ್ಲಿಸಿದ ಸಂದರ್ಭ ಅವರು ಪ್ರತಿಕ್ರಿಯಿಸಿದ್ದು, ಈಗಾಗಲೆ ಹಾರಂಗಿ-ಕಾವೇರಿ ನದಿಯ ಹೂಳೆತ್ತಲು ಸರಕಾರ ಯೋಜನೆ ರೂಪಿಸಿದೆ. ಕಳೆದ ಎರಡು ವರ್ಷಗಳಿಂದ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ನದಿ ಉಕ್ಕಿ ಹರಿದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು ಮತ್ತೆ ಮರುಕಳಿಸದಂತೆ ತಕ್ಷಣವೇ ಯೋಜನೆ ಕೈಗೆತ್ತಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ವೇದಿಕೆ ಪ್ರತಿನಿಧಿಗಳೊಂದಿಗೆ ಫೆಬ್ರವರಿ ಪ್ರಥಮ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ನಿಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರವಾಹಕ್ಕೆ ಕಾರಣ ಪತ್ತೆಹಚ್ಚಲು ತಜ್ಞರ ಸಮಿತಿ ನೇಮಿಸಿ ನದಿಯ ಹೂಳೆತ್ತಲು ಕಾರ್ಯಯೋಜನೆ ರೂಪಿಸುವುದು, ಕಾವೇರಿ ನದಿಯ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ನದಿಯ ಅಭಿವೃದ್ಧಿಗೆ ಯೋಜನೆ ರೂಪಿಸುವುದು. ಈ ಮೂಲಕ ಪಟ್ಟಣದ ಮತ್ತು ಗ್ರಾಮಗಳ ನದಿ ತಟಗಳ ಮನೆಗಳಿಗೆ ಮತ್ತೆ ಪ್ರವಾಹ ಮರುಕಳಿಸದಂತೆ ಎಚ್ಚರವಹಿಸಲು ಶಾಶ್ವತ ಕ್ರಿಯಾಯೋಜನೆ ರೂಪಿಸುವಂತೆ ವೇದಿಕೆ ಪ್ರಮುಖರು ಶಾಸಕರಿಗೆ ಮನವಿ ಪತ್ರದಲ್ಲಿ ಕೋರಿದ್ದಾರೆ.

ಮಳೆಗಾಲ ಸಂದರ್ಭ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್‌ ಬಳಿಯಿಂದ ಕೊಪ್ಪ ಭಾರತಮಾತ ಶಾಲೆ ತನಕ ರಾಷ್ಟ್ರೀಯ ಹೆದ್ದಾರಿ ಪ್ರವಾಹದಿಂದ ಜಲಾವೃತಗೊಂಡು ಸಂಚಾರ ಕೆಲವು ದಿನಗಳ ಕಾಲ ಸಂಪೂರ್ಣ ಅಡ್ಡಿಯಾಗು ತ್ತಿರುವ ಬಗ್ಗೆಯೂ ಸರಕಾರದ ಗಮನಕ್ಕೆ ತರಲಾಗುವುದು. ಕೆಲವೆಡೆ ರಸ್ತೆಯ ಎತ್ತರ ಹೆಚ್ಚಿಸುವುದರೊಂದಿಗೆ ಅಭಿವೃದ್ಧಿ ಗೊಳಿಸುವ ಯೋಜನೆ ಸಂಬಂಧ ಸಚಿವರ ಗಮನ ಸೆಳೆಯಲಾಗುವುದು ಎಂದು ಶಾಸಕ ಅಪ್ಪಚ್ಚುರಂಜನ್‌ ತಿಳಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ವೇದಿಕೆಯ ಕಾರ್ಯಾಧ್ಯಕ್ಷ ಎಂ.ಎಂ.ಚರಣ್‌, ಕುಶಾಲನಗರ ಪಟ್ಟಣ ಸೇರಿದಂತೆ ಕಾವೇರಿ ನದಿ ತಟದ ಮನೆಗಳಿಗೆ ಮತ್ತೆ ಪ್ರವಾಹ ಬಂದು ಜನಜೀವನ ಏರುಪೇರಾಗದಂತೆ ಶಾಶ್ವತ ಯೋಜನೆ ರೂಪಿಸಲು ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಸದ‌Âದಲ್ಲಿಯೇ ಪಟ್ಟಣದ ವಿವಿಧ ಬಡಾವಣೆಗಳು ಮತ್ತು ಗ್ರಾಮಗಳ ನಿವಾಸಿಗಳನ್ನು ಒಳಗೊಂಡಂತೆ ಮುಖ್ಯಮಂತ್ರಿ ಬಳಿ ತೆರಳಲಾಗುವುದು ಎಂದು ತಿಳಿಸಿದರು.

ವೇದಿಕೆಯ ಅಧ್ಯಕ್ಷ ಎಂ.ಎನ್‌. ಚಂದ್ರಮೋಹನ್‌, ಉಪಾಧ್ಯಕ್ಷ ತೋರೆರ ಉದಯಕುಮಾರ್‌, ಪ್ರಧಾನ ಕಾರ್ಯದರ್ಶಿ ವರದ, ಖಜಾಂಚಿ ಕೊಡಗನ ಹರ್ಷ, ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು ಮತ್ತು ಕುಶಾಲನಗರದ ಶೈಲಜಾ ಬಡಾವಣೆ, ಕುವೆಂಪು ಬಡಾವಣೆ, ದಂಡಿನಪೇಟೆ, ಇಂದಿರಾ ಬಡಾವಣೆ, ಬಸಪ್ಪ ಬಡಾವಣೆ, ಯೋಗಾನಂದ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ನಿವಾಸಿಗಳ 50ಕ್ಕೂ ಅಧಿಕ ಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.