ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ


Team Udayavani, Jan 23, 2020, 6:00 AM IST

led-37

ಸುಳ್ಯ: ಸಮಾಜಕ್ಕೆ ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಸಾರಿದ, ಯುವ ಸಮುದಾಯಕ್ಕೆ ದಾರಿದೀಪವಾದ ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸುಳ್ಯದ ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಅಭಿಪ್ರಾಯಪಟ್ಟರು.

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು, ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಯುವ ರೆಡ್‌ಕ್ರಾಸ್‌ ಘಟಕ ಹಾಗೂ ವಿಕ್ರಮ ಯುವ ಮಂಡಲ ಜಯನಗರ ಇವುಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಪ್ರಯುಕ್ತ ನೆಹರೂ ಮೆಮೋರಿಯಲ್‌ ಕಾಲೇಜಿನಲ್ಲಿ ಹಮ್ಮಿಕೊಂಡ ವಿಷಯಾಧಾರಿತ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ ಅರಿವಿನಿಂದ ಪ್ರಗತಿಯೆಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ವ ಧರ್ಮ ಸಮನ್ವಯತೆಯನ್ನು ಸಾರಿದ ವಿವೇಕಾನಂದರು ಯುವಕರಿಗೆ ಮಾರ್ಗದರ್ಶಕರಾದುದ್ಲಲದೇ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ, ಗೌರವವನ್ನು ಕಲ್ಪಿಸಿದವರು. ಮಹಿಳೆಯರನ್ನು ಗೌರವಿಸದ ಸಮಾಜ ನಾಗರಿಕತೆಯೆಡೆ ಸಾಗುವುದಿಲ್ಲ ಎಂದು ಸಾರಿದವರು ವಿವೇಕಾನಂದರು. ಆ ನಿಟ್ಟಿನಲ್ಲಿ ಅರಿವಿನಿಂದ ಪ್ರಗತಿಯೆಡೆಗೆ ಎನ್ನುವ ಉತ್ತಮ ಶೀರ್ಷಿಕೆಯ ಅಡಿಯಲ್ಲಿ ಮೂಡಿ ಬರುವ ಈ ಕಾರ್ಯಕ್ರಮ ಯುವಜನತೆ ಯಶಸ್ವಿ ಜೀವನ ಸಾಗಿಸಲು ಸಹಾಯಕವಾಗಲಿ ಎಂದರು.

ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಕೆ. ಗಿರಿಧರ ಗೌಡ ಮಾತನಾಡಿ, ದೇಶ ಕಟ್ಟುವ ಶಕ್ತಿ ಯುವಕರಲ್ಲಿದೆ. ಯುವಕರು ಮನಸ್ಸು ಮಾಡಿದರೆ ಸದೃಢ ಭಾರತ ನಿರ್ಮಾಣ ಸಾಧ್ಯ. ಯುವ ಶಕ್ತಿ ತಪ್ಪು ದಾರಿ ಹಿಡಿದರೆ ಇಡೀ ಮನುಕುಲವೇ ನಿರಾಶಾದಾಯಕವಾಗುತ್ತದೆ. ಉತ್ತಮ ಗುಣ ನಡತೆ, ಆದರ್ಶಗಳಿಂದ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ತಮ್ಮನ್ನು ತಾವು ತಿದ್ದಿಕೊಳ್ಳುವ ಮೂಲಕ ಜಗತ್ತಿನಲ್ಲಿ ಪರಿವರ್ತನೆ ಕಾಣೋಣ. ಇಂತಹ ಉತ್ತಮ ಕಾರ್ಯಕ್ರಮದ ಆಯೋಜನೆ ನಿಮ್ಮ ಜೀವನದಲ್ಲಿ ಒಳ್ಳೆಯ ಬದಲಾವಣೆಗೆ ಪ್ರೇರಣೆಯಾಗಲಿ ಎಂದರು.

ಪ್ರೇರಕ ಶಕ್ತಿ
ಕೆವಿಜಿ ಕ್ಯಾಂಪಸ್‌ನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಜವರೇಗೌಡ ಡಿ. ಮಾತನಾಡಿ, ಭಾರತ ದೇಶವನ್ನು ವಿಶ್ವ ಸಮುದಾಯದಲ್ಲಿ ಅತ್ಯುನ್ನತಕ್ಕೇರಿಸಬೇಕು ಎಂದು ಜಗತಿನಾದ್ಯಂತ ದೇಶದ ಸಂಸ್ಕೃತಿಯನ್ನು ಪರಿಚಯಿಸಿದ ದೇಶ ಭಕ್ತ ಸಂತ- ಸ್ವಾಮಿ ವಿವೇಕಾನಂದರು. ದೇಶ ಭಕ್ತಿಯನ್ನು ಜನತೆಯಲ್ಲಿ ಹುಟ್ಟು ಹಾಕಿದುದಲ್ಲದೇ, ದೇಶದ ಜನರೆಲ್ಲ ಜಾಗೃತರಾಗಬೇಕು. ದೇಶದ ಜನರೆಲ್ಲ ಒಂದಾಗಬೇಕು. ಆಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಯುವಕರಿಗೆ ಪ್ರೇರಕ ಶಕ್ತಿಯಾದ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ನಡೆಸುವ ಒಂದು ದಿನದ ಈ ಕಾರ್ಯಕ್ರಮ ಯುವಜನತೆಗೆ ಸ್ಫೂರ್ತಿದಾಯಕವಾಗಲಿ ಎಂದರು.

ಆದರ್ಶ ಪಾಲಿಸಿ
ನೆಹರೂ ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್‌ ಮಾತನಾಡಿ, ಯುವ ಸಮುದಾಯ ಸಮಾಜಕ್ಕೆ ಹೆಚ್ಚಿನ ಸೇವೆ ಮಾಡುವಂತಾಗಬೇಕು. ವಿವೇಕಾನಂದರ ಚಿಂತನೆ, ಆದರ್ಶಗಳನ್ನು ಯುವಕರು ಪಾಲಿಸಬೇಕು. ಇಲ್ಲಿನ ವಿಚಾರಗಳು ಜೀವನಕ್ಕೆ ಪ್ರಯೋಜನವಾದಾಗ ಇಂತಹ ಕಾರ್ಯ ಕ್ರಮಗಳ ಆಯೋಜನೆ ಸಾರ್ಥಕ ಎಂದರು.

ವಿಕ್ರಮ ಯುವ ಮಂಡಲ ಜಯನಗರದ ಪೂರ್ವಾಧ್ಯಕ್ಷ ಸುರೇಂದ್ರ ಕಾಮತ್‌, ನೆಹರೂ ಯುವ ಕೇಂದ್ರ ದಕ್ಷಿಣ ಕನ್ನಡ ಜಿಲ್ಲಾ ನಾಮ ನಿರ್ದೇಶಿತ ಸದಸ್ಯ ಕಿಶನ್‌ ಜಬಳೆ, ವಿಕ್ರಮ ಯುವ ಮಂಡಲ ಜಯನಗರ ಅಧ್ಯಕ್ಷ ಪ್ರಸನ್ನ ಶುಭ ಹಾರೈಸಿದರು. ಯುವ ರೆಡ್‌ಕ್ರಾಸ್‌ ಘಟಕದ ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ತರಬೇತುದಾರ ಚಂದ್ರಶೇಖರ ಬಿಳಿನೆಲೆ, ಶಿಕ್ಷಣ ಸಂಯೋಜಕ ಡಾ| ಸುಂದರ ಕೇನಾಜೆ, ಭವಾನಿಶಂಕರ ಅಡ್ತಲೆ, ಸಾಯಿರಾಂ ಸುಳ್ಯ ತರಬೇತುದಾರರಾಗಿ ಭಾಗವಹಿಸಿದ್ದರು.

ಮೌನ, ತೇಜಸ್ವಿನಿ, ರಚನಾ ಪ್ರಾರ್ಥಿಸಿದರು. ಕುಲದೀಪ್‌ ಸ್ವಾಗತಿಸಿ, ಅಶ್ವಿ‌ತಾ ವಂದಿಸಿದರು. ಜಯಮಾಲ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು. ರೆಡ್‌ಕ್ರಾಸ್‌ ಘಟಕ ನಾಯಕರಾದ ಭುವನ್‌ ಪಿ., ಕುಮುದಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.