ಎಲ್ಲದರಲ್ಲೂ ಮಾದರಿ ಈ ಶಾಲೆ

ಕ್ವಿಜ್‌ ಸ್ಪರ್ಧೆ-ನಾಟಕಗಳ ಮೂಲಕ ವಿಷಯಗಳ ಮನವರಿಕೆಸಿದ್ದಾಪುರ ತೋಟದ ಶಾಲೆಗೆ ಸಂದಿವೆ ಹಲವು ಪ್ರಶಸ್ತಿ

Team Udayavani, Jan 23, 2020, 3:47 PM IST

23-January-15

ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕದಾಗಿದ್ದರೂ ಹಲವು ಪ್ರಶಸ್ತಿಗಳ ಗರಿ ಮುಡಿಗೇರಿಸಿಕೊಂಡು ಮಾದರಿ ಶಾಲೆಯಾಗಿ ರೂಪುಗೊಂಡಿದೆ.

ಶಾಲಾ ಸುಧಾರಣಾ ಸಮಿತಿ ಸಹಕಾರ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಿಂದ ಹಿಡಿದು ಎಲ್ಲ ಶಿಕ್ಷಕರ ಶ್ರಮದ ಫಲವಾಗಿ ಸುಸಜ್ಜಿತ ಶಾಲೆಯಾಗಿ ಗಮನ ಸೆಳೆದಿದೆ. ಹೀಗಾಗಿ ಈ ಶಾಲೆಯಲ್ಲಿ ಸುಮಾರು 260 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮೊದಮೊದಲು ಗುಡಿಸಲಿನಿಂದಲೇ ಆರಂಭವಾದ ಈ ಶಾಲೆ ಇಂದು 10 ಕೋಣೆಗಳನ್ನು ಹೊಂದಿದ್ದು, ಪ್ರತಿ ಕೋಣೆಯೂ ಸಾಕಷ್ಟು ಗಾಳಿ, ಬೆಳಕು ಹೊಂದಿದೆ. ಶೌಚಾಲಯ ಇದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. 1600 ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ ಒಳಗೊಂಡಿದೆ.

ಶಾಲಾ ಆವರಣದಲ್ಲಿ ಶುಂಠಿ, ಅಜವಾನ, ಲವಂಗದಂತಹ ಸುಮಾರು 200ಕ್ಕೂ ಅಧಿ ಕ
ಔಷ ಧೀಯ ಗಿಡಮೂಲಿಕೆಗಳನ್ನು ಬೆಳೆಸಲಾಗಿದೆ. ಪ್ರಾಣಿ, ಪಕ್ಷಿಗಳಿಗೆಂದೇ ಕುಡಿಯುವ ನೀರು ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಆಕರ್ಷಿಸಲು ಶಿಕ್ಷಕರು
ಕ್ವಿಜ್‌ ಸ್ಪರ್ಧೆ, ನಾಟಕ ರೂಪದಲ್ಲಿ ಕೆಲವೊಂದಿಷ್ಟು ವಿಷಯಗಳನ್ನು ತೋರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಶಾಲೆಯ ಅನೇಕ ವಿದ್ಯಾರ್ಥಿಗಳು ರಾಜ್ಯ-ರಾಷ್ಟ್ರಮಟ್ಟದ ಖೋಖೋ ಸ್ಪರ್ಧೆ ಮತ್ತು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಸಿದ್ದಾಪುರ, ಕಾಡಪ್ಪ ಹೊಸೂರ, ಮಹಾಲಿಂಗಪ್ಪ
ಹಿಪ್ಪರಗಿ, ಹನಮಂತ ಗುಂಜಿಗಾಂವಿ, ಪಾಂಡು ಸಿದ್ದಾಪುರ, ಸತ್ಯಪ್ಪ ಸಿದ್ದಾಪುರ, ಮಲ್ಲಪ ಸಿದ್ದಾಪುರ, ಮುತ್ತಪ್ಪ ಕಣಬೂರ, ಶಿವಪ್ಪ ಗರಗದ, ಶ್ರೀಶೈಲ ಸಿದ್ದಾಪುರ, ರಾಮಪ್ಪ ಕುಂಬಾಳೆ ಅವರ ಜತೆಗೆ ಊರ ಹಿರಿಯರ ಸಹಾಯ-ಸಹಕಾರದಿಂದ ಶಾಲೆ ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಶಾಲಾ ಮುಖ್ಯಗುರು ಬಿ.ಆರ್‌.ಕರೆನ್ನವರ ಹಾಗೂ ಶಿಕ್ಷಕರಾದ ಕೆ.ಎಸ್‌.ಸಿದ್ನಾಳ, ಪಿ.ವೈ. ಘಂಟಿ, ಬಿ.ಡಿ.ಗದಗ, ಎಂ.ಎಚ್‌.ಗುಗ್ರಿ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ
ಶ್ರಮಿಸುತ್ತಿದ್ದು, ಕಲಿಕೆಯ ಹೊಸ ವಿಧಾನಗಳನ್ನು ಅಳವಡಿಸಿಕೊಂಡಿದ್ದಾರೆ. ಮಕ್ಕಳ ಮನಸ್ಥಿತಿ ಅರಿತು ಹೊಸ ಹೊಸ ವಿಧಾನಗಳ ಮೂಲಕ ಮಕ್ಕಳ ಜ್ಞಾನಾರ್ಜನೆಗೆ ಸಹಕಾರಿಯಾಗಿದ್ದಾರೆ.

ನಮ್ಮ ಶಾಲೆ ಇಷ್ಟೊಂದು ಅಭಿವೃದ್ಧಿ ಹೊಂದಲು ಎಸ್‌ಡಿಎಂಸಿ ಅಧ್ಯಕ್ಷರ-ಸದಸ್ಯರ ಸಹಕಾರ ಬಹಳ ಇದೆ. 1986ರಲ್ಲಿ ಗುಡಿಸಿಲಿನಿಂದ ಆರಂಭವಾದ
ಈ ಶಾಲೆ ಇಂದು ಸೌಕರ್ಯಗಳನ್ನು ಪಡೆದು ಉತ್ತರೋತ್ತರ ಅಭಿವೃದ್ಧಿ ಸಾಧಿಸುತ್ತಿದೆ. ಬಿ.ಆರ್‌.ಕರೆನ್ನವರ, ಮುಖ್ಯಗುರುಗಳು,
ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಬಂದಿವೆ ಹಲವು ಪ್ರಶಸ್ತಿ: ಈ ಶಾಲೆಯು ಎರಡು ಸಲ ಜಿಲ್ಲಾಮಟ್ಟದ ಹಸಿರು ಶಾಲೆ ಪ್ರಶಸ್ತಿ, ಎರಡು ಬಾರಿ ಜಿಲ್ಲಾ ಮಟ್ಟದ ಹಳದಿ ಶಾಲೆ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡ ಮಾಡುವ ಪರಿಸರ ಮಿತ್ರ ಹಸಿರು ಶಾಲೆ ಪ್ರಶಸ್ತಿ ಪಡೆದುಕೊಂಡ ಹೆಮ್ಮೆ ಇದೆ.

„ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.