ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ 25ರಿಂದ

ನೂತನ ದೇವಾಲಯ ಉದ್ಘಾಟನೆ | ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

Team Udayavani, Jan 23, 2020, 5:10 PM IST

23-January-22

ಶಿರಸಿ: ಐನೂರು ವರ್ಷಗಳ ಇತಿಹಾಸವುಳ್ಳ, ಕರೂರು ಅರಸ ಶಿವಪ್ಪ ನಾಯಕನಿಂದ ಪ್ರತಿಷ್ಠಾಪಿತವಾಗಿದೆ ಎಂಬ ಐತಿಹ್ಯವುಳ್ಳ ತಾಲೂಕಿನ ತುಡಗುಣಿ ಸಿದ್ಧಿವಿನಾಯಕ ದೇವಸ್ಥಾನದ ಪುನರ್‌ ನಿರ್ಮಾಣವಾಗಿದ್ದು, ಮಹಾಗಣಪತಿ ಮೂರ್ತಿ ಪ್ರತಿಷ್ಠಾ ಮಹೋತ್ಸವ ಜ.25 ರಿಂದ 27ರ ತನಕ ನಡೆಯಲಿದೆ.

ಈ ಕುರಿತು ಮಾಹಿತಿ ನೀಡಿದ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಹೆಗಡೆ
ಭತ್ತಗುತ್ತಿಗೆ ಹಾಗೂ ಇತರರು, ಜ.25 ರಿಂದ 27ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೀವಗಿ ರಮಾನಂದ ಸ್ವಾಮೀಜಿ ಹಾಗೂ ಸೋಂದಾ ಸ್ವರ್ಣವಲ್ಲೀ ಶ್ರೀಗಳು
ಸಾನ್ನಿಧ್ಯ ವಹಿಸಲಿದ್ದಾರೆ. ಆಗಮ ಪಂಡಿತ ಷಡಕ್ಷರಿ ಕೃಷ್ಣ ಭಟ್ಟ ಗೋಕರ್ಣ ಅವರ ಪ್ರಧಾನ ಆಚಾರ್ಯತ್ವದಲ್ಲಿ ಪ್ರತಿಷ್ಠಾ ವಿಧಿ ವಿಧಾನಗಳು ನಡೆಯಲಿವೆ ಎಂದು ವಿವರಿಸಿದರು.

ಐದು ಶತಮಾನದಾಚೆಯ ಈ ದೇಗುಲ ಜೀರ್ಣವಾಗಿದ್ದು, ಅದನ್ನು ಪುನಃ ಪ್ರತಿಷ್ಠಾಪನೆ ಮಾಡಲಾಗಿದೆ. ಹಿಂದೆ ಕರೂರು ಅರಸ ಶಿವಪ್ಪ ನಾಯಕನು ವೈರಿಗಳಿಂದ ಸೋತು
ಜೀವ ರಕ್ಷಣೆಗಾಗಿ ಇಲ್ಲಿ ಬಂದು ನೆಲೆ ನಿಂತಿದ್ದನು. ಬಳಿಕ ಮಂದಿರ ನಿರ್ಮಾಣ ಮಾಡಿದ್ದಾನೆ ಎಂಬ ಉಲ್ಲೇಖವಿದೆ. 400 ವರ್ಷಗಳಿಂದ ಶಿವಪ್ಪ ನಾಯಕನಿಂದಲೇ ಕಡತೋಕದ ಅರ್ಚಕ ಕುಟುಂಬದವರು ಈ ದೇವಾಲಯದ ದೇವರ ಅರ್ಚನೆಗೆ ಬಂದವರು. ಪೂಜೆ ಪುನಸ್ಕಾರಗಳನ್ನೂ ಅದೇ ಕುಟುಂಬ ನಡೆಸಿಕೊಂಡು ಬಂದಿದ್ದು ಕಾಲಾಂತರದಲ್ಲಿ ಇದು
ಗ್ರಾಮದ ದೇವಸ್ಥಾನವಾಗಿದೆ. 1988ರಲ್ಲಿ ಒಮ್ಮೆ ಜೀರ್ಣೋದ್ಧಾರ ಆಗಿದ್ದರೂ
ಪ್ರಶ° ಮಂಗಲದ ಪ್ರಕಾರ ವೆಂಕಟೇಶ ಭಟ್ಟ ಫಲಕಾಡರ ಮಾರ್ಗದರ್ಶನದಲ್ಲಿ ನೂತನ ದೇವಸ್ಥಾನ ಹಾಗೂ ದೇವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

ವರ್ಲೆಗದ್ದೆ ವೆಂಕಟ್ರಮಣ ಹೆಗಡೆ ದೇವರ ಮೂರ್ತಿ ಕೆತ್ತನೆ
ಮಾಡಿಕೊಟ್ಟಿದ್ದಾರೆ. ವಾಸ್ತುಶಿಲ್ಪಿ ಮಹೇಶ ಮುನಿಯಂಗಳ ಅವರ
ಮಾರ್ಗದರ್ಶನಲ್ಲಿ ಕೇರಳ ಮಾದರಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಗರ್ಭಗುಡಿ ಗೋಪು ತಾಮ್ರ ಹೊದಿಕೆ ಮಾಡಲಾಗಿದೆ ಎಂದರು. ಗ್ರಾಮಸ್ಥರು, ಬೇರೆಡೆ
ಉದ್ಯೋಗದಲ್ಲಿರುವವರು ಹಾಗೂ ಈ ಗ್ರಾಮದ ತವರಿನ ಹೆಣ್ಣು ಮಕ್ಕಳು ಉದಾರವಾಗಿ ನೆರವಾಗಿದ್ದಾರೆ. ಈಗಾಗಲೇ 35 ಲಕ್ಷ ರೂ. ವಿನಿಯೋಗಿಸಲಾಗಿದೆ. 25ರಂದು ಬೆಳಗ್ಗೆ
ಸಾಮೂಹಿಕ ಪ್ರಾರ್ಥನೆ ಗಣೇಶ ಯಾಗ, ಬಿಂಬ ಪರಿಗ್ರಹ, ಬಿಂಬಾ ವಾಸಗಳು, ರಾತ್ರಿ ಯಾಗಶಾಲಾ ಪ್ರವೇಶ, ಕುಂಡ ಸಂಸ್ಕಾರಗಳು ನಡೆಯಲಿವೆ.

26ರಂದು ಪ್ರತಿಷ್ಠಾಂಗ ಹೋಮಗಳು, ಬೆಳಗ್ಗೆ 10:48ಕ್ಕೆ ರಮಾನಂದ
ಶ್ರೀಗಳಿಂದ ಪ್ರತಿಷ್ಠಾಪನೆ, ಶಿಖರ ಪ್ರತಿಷ್ಠೆ ಹೋಮಗಳು ನಡೆಯಲಿವೆ. 27ರಂದು ಕಲಾ ಸಾನ್ನಿಧ್ಯ, ಸ್ವರ್ಣವಲ್ಲೀ ಶ್ರೀಗಳಿಂದ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 4ಕ್ಕೆ ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ. ಬಳಿಕ ತಾಳಮದ್ದಲೆ ನಡೆಯಲಿದೆ ಎಂದರು.

ದೇವಸ್ಥಾನದ ಕಾರ್ಯದರ್ಶಿ ಶಿವಾನಂದ ಹೆಗಡೆ ಉಗ್ರೇಸರ, ಎಲ್‌. ಎಂ. ಹೆಗಡೆ, ವಿಶ್ವನಾಥ ಶರ್ಮಾ ನಾಡಗುಳಿ, ಗಣಪತಿ ಭಟ್ಟ, ರಾಮಚಂದ್ರ ಭಟ್ಟ, ಶ್ರೀಧರ ಭಟ್ಟ ದೊಡ್ಮನೆ, ಮಹಾಬಲ ಭಟ್ಟ, ಗಜಾನನ ಹೆಗಡೆ, ಲಕ್ಷೀಕಾಂತ ಭಟ್ಟ, ಮಂಜುನಾಥ ಹೆಗಡೆ, ನಾಗಪತಿ  ಗಡೆ ಬಾವಿಕೈ ಇತರರು ಇದ್ದರು.

ಟಾಪ್ ನ್ಯೂಸ್

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.