ಸರ್ಕಾರಿ ಜಾಗದಲ್ಲಿ ಮನೆ, ಶೆಡ್ ನಿರ್ಮಾಣ; ತೆರವಿಗೆ ತಾಕೀತು
ಪುರಸಭೆ ಕಚೇರಿಗೆ ದಿಢೀರ್ ಭೇಟಿ ನೀಡಿದ ಆಡಳಿತಾಧಿಕಾರಿಯೂ ಆದ ಎಸಿ ಸೋಮಶೇಖರ್
Team Udayavani, Jan 23, 2020, 5:19 PM IST
ಮಾಲೂರು: ಆಡಳಿತಾಧಿಕಾರಿಯೂ ಆದ ಎಸಿ ಸೋಮಶೇಖರ್ ಪುರಸಭೆಗೆ ದಿಢೀರ್ ಭೇಟಿ ನೀಡಿ, ಸಾರ್ವಜನಿಕರ ದೂರಿನ ಅನ್ವಯ ಅಕ್ರಮಗಳ ತನಿಖೆಗೆ ಆದೇಶ ಹೊರಡಿಸಿದರು. ಈ ವೇಳೆ ಜನರು ನೀಡಿದ್ದ ದೂರಿನ ಮೇಲೆ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕೆಲ ಬಡಾ ವಣೆಯಲ್ಲಿನ ಸಿಎ ನಿವೇಶನವನ್ನು ಅಕ್ರಮ ಖಾತೆ ಮಾಡಿ, ಪರಭಾರೆ ಮಾಡಿರುವುದರ ಜೊತೆಗೆ ಕೆಲವು ಪ್ರಭಾವಿಗಳು ಸರ್ಕಾರಿ ಜಾಗ ಅತಿಕ್ರಮಣ ಮಾಡಿ
ಮನೆ, ಶೆಡ್ ನಿರ್ಮಿಸಿ ಕೊಂಡಿ ರುವುದಾಗಿ ದೂರು ಬಂದಿವೆ ಎಂದು ಹೇಳಿದರು.
ಮೂರು ಪ್ರಕರಣ ಇತ್ಯರ್ಥಪಡಿಸಿ: ಕೆಲವು ಖಾಸಗಿ ವ್ಯಕ್ತಿಗಳು 9000 ಚದರ ಅಡಿಯಷ್ಟು
ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡು, ವಹಿವಾಟು ನಡೆಸುತ್ತಿರುವುದಾಗಿ, ಮುಖ್ಯಾಧಿಕಾರಿಗಳ ವಸತಿ ಗೃಹವನ್ನೂ ಖಾಸಗಿ ವ್ಯಕ್ತಿಯೊಬ್ಬರು ಸ್ವಾಧೀನ ಪಡಿಸಿಕೊಂಡು ಶೆಡ್ ನಿರ್ಮಿಸಿದ್ದಾರೆ ಎಂದು ಜನರು ದೂರು ನೀಡಿದ್ದಾರೆ. ಈ ಮೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಪುರಸಭಾ ಮುಖ್ಯಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ತೆರವು: ಈ ಕೂಡಲೇ ಎರಡು ಅಧಿಕಾರಿಗಳ ತಂಡ ರಚಿಸಿ ಅಕ್ರಮ ಸಿಎ ನಿವೇಶನಗಳ
ಪರಭಾರೆ, ಸ್ವಾಧೀನದ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ತಾವು ಸಹ ಅಕ್ರಮ ಶೆಡ್ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.
ವರದಿ ಮಂಡಿಸಿ: ಅದೇ ರೀತಿಯಲ್ಲಿ ಮಾಲೂರು ಪಟ್ಟಣದಲ್ಲಿ ಕಂದಾಯ ಇಲಾಖೆಯ ಕೆಲವು ಭೂಮಿಗಳಲ್ಲಿ ಅಕ್ರಮ ಶೆಡ್ಗಳ ನಿರ್ಮಾಣ, ರಾಜಕಾಲುವೆಗಳ ಒತ್ತುವರಿ, ಪಟ್ಟಣದ ಪ್ರಮುಖ ರಸ್ತೆಗಳ ಚರಂಡಿಗಳ ಮೇಲೆ ರಾತ್ರೋರಾತ್ರಿ ಪೆಟ್ಟಿಗೆ ಅಂಗಡಿ ಇಟ್ಟಿರುವುದು ಕಂಡು ಬಂದಿದೆ. ಮೂರು ದಿನಗಳ ಒಳಗಾಗಿ ವರದಿ ಮಂಡಿಸಿ, ತೆರವು ಮಾಡುವುದಾಗಿ ತಿಳಿಸಿದರು.
ಬೀಗ ಮುದ್ರೆ: ಪುರಸಭೆಗೆ ಬಾಡಿಗೆ ಮತ್ತು ತೆರಿಗೆ ಪಾವತಿಸದ ಕಾರಣ, 25 ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಇನ್ನೂ ಕೆಲವು ಕಲ್ಯಾಣ ಮಂಟಪಗಳು, ಉದ್ಯಮಗಳು, ತೆರಿಗೆ ಬಾಕಿ ಉಳಿಸಿ ಕೊಂಡಿರುವ ಕಾರಣ, ಶೀಘ್ರ ಬೀಗ ಮುದ್ರೆ ಹಾಕುವ ಕಾರ್ಯ ಮಾಡುತ್ತಿರುವುದಾಗಿ ತಿಳಿಸಿದರು.
ಕಂದಾಯ ಇಲಾಖೆಯಿಂದ ತಾಲೂಕಿನ ಆರು ಗ್ರಾಮಗಳನ್ನು ಪೋಡಿ ಮುಕ್ತ ಮಾಡಲು ಮುಂದಾಗಿದ್ದು, ಕೆಲವು ರಾಜಕಾಲುವೆಗಳ ಒತ್ತುವರಿ ತೆರವಿಗೂ ಕಠಿಣ ಕ್ರಮ ಅನುಸರಿಸಲಾಗುತ್ತಿದೆ. ಅದರಂತೆ ಬೈರನಹಳ್ಳಿಯ ರಾಜಕಾಲುವೆ, ಕೆಲವು ಗೋಕುಂಟೆಗಳ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದೆ ಎಂದು ಹೇಳಿದರು. ಖಾಸಗಿ ಇಡುವಳಿ
ದಾರ ರೈತರ ಪಿ ನಂಬರ್ ತೆಗೆಯುವ ಕಾರ್ಯವಾಗಿ ತಾಲೂಕಿನ 90 ಪ್ರಕರಣ ಪಟ್ಟಿ ಮಾಡಿ ಸರ್ವೆ ಇಲಾಖೆಯ ಅಧಿಕಾರಿ ಗಳೊಂದಿಗೆ ದುರಸ್ತಿ ಮಾಡಿಸಲಾಗುತ್ತಿದೆ ಎಂದರು. ಮುಖ್ಯಾಧಿಕಾರಿ ಪ್ರಸಾದ್ ಮಾತನಾಡಿ, ಎಸಿ ಆದೇಶದಂತೆ ಎಲ್ಲಾ ಅಕ್ರಮಗಳ ತನಿಖೆ ನಡೆಸಿ ಮೂರು ದಿನಗಳ ಒಳಗೆ ವರದಿ ಮಂಡಿಸ ಲಾಗುವುದು. ಅಕ್ರಮಗಳ ತೆರವಿಗೆ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ