ಬಜಾರ್ ನಲ್ಲಿ ಪುನೀತ್ ಹಾಜರ್

ಮಾಯಾ ಲೋಕದಲ್ಲಿ ಒಂದು ಪವರ್‌ ಫ‌ುಲ್‌ ಸಿನ್ಮಾ

Team Udayavani, Jan 24, 2020, 6:30 AM IST

kaa-25

ಜನರು ಈಗ ಹೊಸತನ್ನು ಬಯಸುತ್ತಿದ್ದಾರೆ. ಮಾಡಿದ್ದನ್ನೇ ಮಾಡಿದರೆ ಅವರಿಗೂ ಅದು ರುಚಿಸೋದಿಲ್ಲ. ಹೊಸದೇನಿದೆ ಎನ್ನುವ ಜನರಿಗೆ “ಮಾಯಾ ಬಜಾರ್‌’ ಉದಾಹರಣೆ. ಇಲ್ಲಿ ಎಲ್ಲವೂ ಹೊಸದಾಗಿದೆ. ಹೊಸ ತರಹದ ಕಥೆ, ಹೊಸ ಸ್ಕ್ರೀನ್‌ ಪ್ಲೇ ಮೂಲಕ ಹೊಸತನ್ನೇ ಹೇಳ ಹೊರಟಿದ್ದಾರೆ.

“ಚೆನ್ನಾಗಿದ್ದರೆ ಸಪೋರ್ಟ್‌ ಮಾಡಿ, ಚೆನ್ನಾ­ಗಿಲ್ಲ ಅಂದರೆ, ಇನ್ನಷ್ಟು ಸಿನಿಮಾ ಮಾಡ್ತೀವಿ. ಒಂದಷ್ಟು ಪ್ರಯೋಗ ಮಾಡ್ತಾ ಹೋಗ್ತಿವಿ…’

– ಹೀಗೆ ಹೇಳಿದ್ದು ಪುನೀತ್‌ ರಾಜಕುಮಾರ್‌. ಅವರು ಹಾಗೆ ಹೇಳಿಕೊಂಡಿದ್ದು ತಮ್ಮ ಪಿಆರ್‌ಕೆ ಪ್ರೊಡಕ್ಷನ್ಸ್‌ ನಲ್ಲಿ ತಯಾರಾಗಿರುವ “ಮಾಯಾಬಜಾರ್‌’ ಚಿತ್ರದ ಬಗ್ಗೆ. ಈ ಚಿತ್ರ ಈಗ ಬಿಡುಗಡೆಗೆ ಸಿದ್ಧಗೊಂಡಿದೆ. ತಮ್ಮ “ಮಾಯಾಬಜಾರ್‌’ ಕುರಿತು ಪುನೀತ್‌ ಹೇಳಿದ್ದಿಷ್ಟು.

“ನಮ್ಮ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ಮೊದಲು “ಕವಲುದಾರಿ’ ಶುರುವಾಯ್ತು. ಮೊದಲ ಸಿನಿಮಾಗೆ ಸಕ್ಸಸ್‌ ಸಿಕು¤. ಅದೊಂದು ಹೆಮ್ಮೆ. ಪಿಆರ್‌ಕೆ ಅಂದರೆ, ಪಾರ್ವತಮ್ಮ ರಾಜಕುಮಾರ್‌. ಪುನೀತ್‌ ರಾಜಕುಮಾರ್‌ ಅನ್ನೋದು ಪ್ರಸೆಂಟ್‌ ಅಷ್ಟೇ. ಮೊದಲ ಸಿನಿಮಾ ಜೊತೆಯಲ್ಲೇ ಈ ಕಥೆ ಕೇಳಿದಾಗ ಇಷ್ಟ ಆಯ್ತು. ನಿರ್ದೇಶಕ ರಾಧಾಕೃಷ್ಣ ರೆಡ್ಡಿ ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದರು. ಚಿತ್ರದಲ್ಲಿ ಕಲಾವಿದರ ದಂಡು ದೊಡ್ಡದ್ದಾಗಿದೆ. ರಾಜ್‌ ಬಿ.ಶೆಟ್ಟಿ, ವಸಿಷ್ಠ ಸಿಂಹ, ಚೈತ್ರಾ, ಅಚ್ಯುತ ಕುಮಾರ್‌ ಎಲ್ಲರೂ ಇದ್ದಾರೆ.

ಇಲ್ಲೊಂದು ಪ್ರಮುಖ ಪಾತ್ರವಿತ್ತು. ಅದನ್ನು ಯಾರಿಂದ ಮಾಡಿಸೋದು ಎಂಬ ಪ್ರಶ್ನೆ ಇತ್ತು. “ರಾಜಕುಮಾರ’ ಚಿತ್ರೀಕರಣ ವೇಳೆ ಪ್ರಕಾಶ್‌ ರಾಜ್‌ ಬಳಿ, ನಾನೊಂದು ಪ್ರೊಡಕ್ಷನ್ಸ್‌ ಶುರು ಮಾಡ್ತಾ ಇದ್ದೇನೆ ಅಂದಿದ್ದೆ. ಅದಕ್ಕವರು, ನೀವು ಮಾಡುವ ಚಿತ್ರದಲ್ಲಿ ಪಾತ್ರ ಏನಾದರೂ ಇದ್ದರೆ, ಕಳುಹಿಸಿ, ಕಥೆ ಕೇಳ್ತೀನಿ ಅಂದಿದ್ದರು. ನಿರ್ದೇಶಕರು ಹೋಗಿ ಕಥೆ ಹೇಳಿದ್ದರು. ಆಗ, ಪ್ರಕಾಶ್‌ ರಾಜ್‌, “ನನಗೆ ಸಂಭಾವನೆ ಏನೂ ಕೊಡಬೇಡಿ ನಾನು ನಟಿಸ್ತೀನಿ’ ಅಂದಿದ್ದರು. ಇಲ್ಲಿ ಪ್ರತಿ ಪಾತ್ರಕ್ಕೂ ಆದ್ಯತೆ ಇದೆ. ಇಡೀ ಚಿತ್ರದಲ್ಲಿ ಗಮನ ಸೆಳೆಯುವ ಇನ್ನೊಂದು ಪಾತ್ರವಿದೆ. ಅದನ್ನು ಸಾಧುಕೋಕಿಲ ಅವರಿಂದ ಮಾಡಿಸಬಹುದಾ ಎಂಬ ಇನ್ನೊಂದು ಪ್ರಶ್ನೆ ಎದುರಾಯ್ತು. ಆಗ ಒಂದು ಪ್ರಯತ್ನ ಮಾಡೋಣ ಅಂತ ಕಥೆ ಕೇಳಿಸಿದಾಗ, ಅವರೂ ಖುಷಿಯಿಂದಲೇ ಒಪ್ಪಿ ನಟಿಸಿದ್ದಾರೆ. ಚಿತ್ರದಲ್ಲೇ ಅವರದು ಹೊಸತರಹದ ಪಾತ್ರ. ನನಗೆ ಒಳ್ಳೆಯ ತಂಡ ಸಿಕ್ಕಿದ್ದರಿಂದ ಸಿನಿಮಾ ಚೆನ್ನಾಗಿ ಬಂದಿದೆ. ಫೆಬ್ರವರಿಯಲ್ಲಿ ರಿಲೀಸ್‌ ಮಾಡುವ ಯೋಚನೆ ಇದೆ’ ಎಂಬುದು ಪುನೀತ್‌ ಮಾತು.

ಅಂದಹಾಗೆ, ಈ ಚಿತ್ರದಲ್ಲಿ ಪುನೀತ್‌ ಕೂಡ ಹಾಡೊಂದಕ್ಕೆ ಸ್ಟೆಪ್‌ ಹಾಕಿದ್ದಾರೆ. ಆ ಬಗ್ಗೆ ಹೇಳುವ ಅವರು, “ಚಿತ್ರದ ಹಾಡೊಂದರಲ್ಲಿ ನಾನು ಹೆಜ್ಜೆ ಹಾಕಿದ್ದೇನೆ. ಆ ಸಾಂಗ್‌ ಅನ್ನು ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಂದ ಹಾಡಿಸಿದರೆ ಹೇಗಿರುತ್ತೆ ಎಂಬ ಐಡಿಯಾ ಬಂತು. ಅವರು ಶಿವಣ್ಣ, ರಾಘಣ್ಣ ಚಿತ್ರಗಳಿಗೆ ಹಾಡಿದ್ದಾರೆ. ನಾನೂ ಕೂಡ “ಬೆಟ್ಟದ ದಾರಿ’ ಚಿತ್ರದಲ್ಲಿ ಅವರ ಜೊತೆ ಹಾಡಿದ್ದೇನೆ. ಅಪ್ಪಾಜಿಯವರು ಅವರ ಚಿತ್ರಕ್ಕೆ ಹಾಡಿದ್ದಾರೆ. ಅಂತಹ ಲೆಜೆಂಡ್‌ ಹಾಡಿದರೆ ಚೆನ್ನಾಗಿರುತ್ತೆ ಅಂದುಕೊಂಡು ಒಂದು ಸಾಂಗ್‌ ಹಾಡಿಸಿದ್ದೇವೆ. ಎಲ್ಲರೂ ಈ ಚಿತ್ರ ನೋಡಿ. ಚೆನ್ನಾಗಿದ್ದರೆ ಸಪೋರ್ಟ್‌ ಮಾಡಿ, ಚೆನ್ನಾಗಿಲ್ಲ ಅಂದರೆ, ಇನ್ನಷ್ಟು ಸಿನಿಮಾ ಮಾಡ್ತೀವಿ. ಮತ್ತಷ್ಟು ಪ್ರಯೋಗ ಮಾಡ್ತಾ ಹೋಗ್ತಿವಿ’ ಅಂತ ಹೇಳಿ ಮಾತು ಮುಗಿಸಿದರು ಪುನೀತ್‌.

ಚಿತ್ರದಲ್ಲಿ ಸಾಧು­ಕೋಕಿಲ ವಿಶೇಷ ಪಾತ್ರ ಮಾಡಿದ್ದಾರೆ. ಅವರ ಪ್ರಕಾರ, ಇಲ್ಲಿ ಎಂದಿನ ಸಾಧು ಕೋಕಿಲ ಇಲ್ಲವಂತೆ. ಹೊಸ ಸಾಧು ಕೋಕಿಲ ಅವರನ್ನು ಜನರು ಕಾಣುತ್ತಾರೆ ಎಂಬುದು ಅವರ ಅಭಿಪ್ರಾಯ.”ಜನರು ಈಗ ಹೊಸತನ್ನು ಬಯಸುತ್ತಿದ್ದಾರೆ. ಮಾಡಿದ್ದನ್ನೇ ಮಾಡಿದರೆ ಅವರಿಗೂ ಅದು ರುಚಿಸೋದಿಲ್ಲ. ಹೊಸದೇನಿದೆ ಎನ್ನುವ ಜನರಿಗೆ “ಮಾಯಬಜಾರ್‌’ ಉದಾಹರಣೆ. ಇಲ್ಲಿ ಎಲ್ಲವೂ ಹೊಸದಾಗಿದೆ. ಹೊಸ ತರಹದ ಕಥೆ, ಹೊಸ ಸ್ಕ್ರೀನ್‌ ಪ್ಲೇ ಮೂಲಕ ಹೊಸತನ್ನೇ ಹೇಳಹೊರಟಿದ್ದಾರೆ. ಇಲ್ಲಿ ಹಳೆಯ ಸಾಧು ಇರಲ್ಲ, ಹೊಸ ಸಾಧು ನೋಡಬಹುದು. ನಗಿಸ್ತಾನಾ, ಅಳಿಸ್ತಾನಾ ಅನ್ನೋದನ್ನು ಚಿತ್ರದಲ್ಲೆ ನೋಡಬೇಕು’ ಎಂಬುದು ಸಾಧು ಮಾತು.

ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಅವರು ಮೊದಲು ಗೋವಿಂದು ಬಳಿ ಕಥೆ ಹೇಳಿದಾಗ, ಅವರು ಪುನೀತ್‌ ಬಳಿ ಕರೆದೊಯ್ದರಂತೆ. ಅವರೂ ಕೇಳಿದ ಕೂಡಲೇ, ಗ್ರೀನ್‌ಸಿಗ್ನಲ್‌ ಕೊಟ್ಟರಂತೆ. ಹಾಗಾಗಿ, “ಮಾಯಬಜಾರ್‌’ ಈಗ ಬಿಡುಗಡೆವರೆಗೂ ಬಂದಿದೆ. ಕಥೆಯ ಒಂದೇ ಒಂದು ಎಳೆ ಹೇಳುವ ನಿರ್ದೇಶಕ ರಾಧಾ, “ಇಲ್ಲಿ ಲೀಡ್‌ ಅಂತ ಯಾವುದೂ ಇಲ್ಲ. ಪ್ರತಿ ಪಾತ್ರಗಳಿಗೆ ಆದ್ಯತೆ ಇದೆ. ಜಾಸ್ತಿ ನಗಿಸುತ್ತೆ. ಅಲ್ಲಲ್ಲಿ ಅಳಿಸುತ್ತೆ’ ಅದೇ ಕಥೆ’ ಎಂದರು ರಾಧಾ.

ರಾಜ್‌ ಬಿ.ಶೆಟ್ಟಿ ಅವರಿಗೆ, ಪಿಆರ್‌ಕೆ ಬ್ಯಾನರ್‌ನ ಚಿತ್ರ ಅಂದಾಗ, ಕ್ಷಣ ನಂಬಲಾಗಲಿಲ್ಲವಂತೆ. ನಿರ್ದೇಶಕ ರಾಧಾ ಕಥೆ ಹೇಳಿದ್ದನ್ನು ಕೇಳಿ, ಹಿಂದೆ ಮುಂದೆ ಯೋಚಿಸದೆಯೇ ಒಪ್ಪಿದರಂತೆ. ಆ ಬಗ್ಗೆ ಹೇಳಿಕೊಳ್ಳುವ ರಾಜ್‌, ” ಇಲ್ಲಿ ಪ್ರಯೋಗ ಇದ್ದರೂ, ಆ ಪ್ರಯೋಗದ ಉದ್ದೇಶ ನೋಡುಗರನ್ನು ಇನ್ನಷ್ಟು ಉತ್ಸಾಹಗೊಳಿಸುವ ಕೆಲಸ ಆಗಿದೆ. ಪ್ರತಿಯೊಬ್ಬ ಕಲಾವಿದನಿಗೂ ಇಲ್ಲಿ ಹೊಸದೇನೋ ಕಲಿಸ್ತಾ ಇದೆ ಎಂಬ ಫೀಲ್‌ ಬಂತು. ಒಳ್ಳೆಯ ಉದ್ದೇಶದೊಂದಿಗೆ ಹೊಸ ಪ್ರಯತ್ನದ ಸಿನಿಮಾ ಮಾಡಿದ್ದೇವೆ. ಮನರಂಜನೆಗಂತೂ ಕೊರತೆ ಇಲ್ಲ. ನಾನಿಲ್ಲಿ ದೊಡ್ಡದ್ದಾಗಿ ಬೆಳೆಯಬೇಕೆಂಬ ಆಶಯ ಹೊಂದಿರುವ ಪಾತ್ರ ಮಾಡಿದ್ದೇನೆ. ಪ್ರತಿ ಪಾತ್ರಗಳೂ ಬೆಳೆಯಬೇಕು, ಸಾಧಿಸಬೇಕು ಎಂದು ಹೋರಾಡುವಂತಹ ಕಥೆ ಇಲ್ಲಿದೆ. ನಾನು ಬೆಳೆಯೋಕೆ ಏನೆಲ್ಲಾ ಹಾದಿ ಹಿಡಿಯುತ್ತೇನೆ ಎಂಬುದು ಕಥೆ’ ಎಂದರು ರಾಜ್‌ ಬಿ.ಶೆಟ್ಟಿ.

ಚೈತ್ರಾ ಅವರಿಗೆ ಇದು ಮೊದಲ ಚಿತ್ರ. ಅವರಿಲ್ಲಿ ಕಾಲೇಜ್‌ಗೆ ಹೋಗುವ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಜಗತ್ತು ಏನು ಅನ್ನೋದು ಗೊತ್ತಿರದ ಹುಡುಗಿ, ಹಲವು ಮನಸ್ಸುಗಳ ಮಧ್ಯೆ ಹೇಗಿರುತ್ತಾಳೆ ಎಂಬುದೇ ಕಥೆ’ ಎಂದರು ಚೈತ್ರಾ.

ಮಿಥುನ್‌ ಮುಕುಂದನ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. “ಪ್ರತಿ ಹಾಡಲ್ಲೂ ವಿಭಿನ್ನ ಸೌಂಡ್‌ ಇದೆ. ಸಿಕ್ಕ ಅವಕಾಶ ಚೆನ್ನಾಗಿ ಬಳಸಿಕೊಂಡ ತೃಪ್ತಿ ಇದೆ’ ಎಂಬುದು ಮಿಥುನ್‌ ಮಾತು. ಮಾತುಕತೆಯ ಕೊನೆಯಲ್ಲಿ ಬಂದ ವಸಿಷ್ಠ ಸಿಂಹ, “ಇಷ್ಟಪಟ್ಟು ಮಾಡಿದ ಪಾತ್ರವಿದು. ಫ್ರೆಶ್‌ ಎನಿಸುವ ಪಾತ್ರ ಇಲ್ಲಿದೆ. ಹ್ಯೂಮರಸ್‌ ಅಗಿದೆ’ ಅಂದರು. ನಿರ್ಮಾಪಕಿ ಅಶ್ವಿ‌ನಿ ಪುನೀತ್‌ರಾಜಕುಮಾರ್‌, ಗೋವಿಂದು, ಅಭಿಷೇಕ್‌ ಇದ್ದರು.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.