ಶಾಲಾ ಮಕ್ಕಳ ಪಾಲಿಗೆ ಇನ್ನೂ ಆಗದ “ನಂದನವನ’

ಮಳೆಗೆ ಕಟ್ಟಡ ಉರುಳಿಬಿದ್ದು 6 ತಿಂಗಳಾದರೂ ಇನ್ನೂ ನಿರ್ಮಿಸಿಲ್ಲ!

Team Udayavani, Jan 24, 2020, 6:02 AM IST

2301UPPE4-1

ಉಪ್ಪುಂದ: ಹೆಸರಿಗೆ ಇದು ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ. ಆದರೆ ಶಾಲಾ ಮಕ್ಕಳ ಪಾಲಿಗೆ ನಂದನವನ ಆಗಿಲ್ಲ. ಕಾರಣ 6 ತಿಂಗಳ ಹಿಂದೆ ಭಾರೀ ಮಳೆಗೆ ಶಾಲೆಯ ಕೊಠಡಿಗಳು ಧರಾಶಾಯಿಯಾಗಿದ್ದರೂ ಆಡಳಿತ ಮರುನಿರ್ಮಾಣಕ್ಕೆ ಮುಂದಾಗಿಲ್ಲ!

ಕುಸಿದ ಕಟ್ಟಡ
ಕೆರ್ಗಾಲು ಗ್ರಾ.ಪಂ. ವ್ಯಾಪ್ತಿಯ ಈ ಶಾಲೆ 1914ರಲ್ಲಿ ಸ್ಥಾಪನೆಯಾಗಿದ್ದು ಶತಮಾನ ಪೂರೈಸಿದೆ. ಇಲ್ಲಿ ಎಲ್‌ಕೆಜಿಯಿಂದ 5ನೇ ತರಗತಿಯ ವರೆಗೆ ಶಿಕ್ಷಣ ನೀಡಲಾಗುತ್ತಿದೆ. 25 ವಿದ್ಯಾರ್ಥಿಗಳೂ ಇದ್ದಾರೆ. ಕಳೆದ ಆ.10ರ ಮಳೆಗೆ ಶಾಲೆಯ ಮೂರು ಕೊಠಡಿ ಕುಸಿದಿದ್ದು ಸಮಸ್ಯೆಯಾಗಿತ್ತು. ಅಂದು ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಭರವಸೆ ದೊರೆತಿದ್ದರೂ ಈಡೇರಿಲ್ಲ.

ಒಂದೇ ಕೊಠಡಿ!
ಇದೀಗ ಒಂದೇ ಕೊಠಡಿ ಮಾತ್ರ ಇದು ಎಲ್ಲ ವಿದ್ಯಾರ್ಥಿಗಳು ಅದರಲ್ಲಿಯೇ ಕುಳಿತು ಕೊಳ್ಳಬೇಕು.ಅಲ್ಲದೇ ಶಿಕ್ಷಕರ ಕೊಠಡಿ, ಶಾಲಾ ದಾಖಲಾತಿ ಎಲ್ಲದಕ್ಕೂ ಇದೊಂದೇ ಕೊಠಡಿ ಇದೆ.

ಅಡುಗೆ ಕೋಣೆಯಲ್ಲೂ ಪಾಠ
4ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲರೊಂದಿಗೆ ಪಾಠ ಹೇಳಲು ಸಾಧ್ಯವಾಗದ್ದರಿಂದ ಅಡುಗೆಕೋಣೆಯಲ್ಲಿ ಪಾಠ ಮಾಡಲಾಗುತ್ತಿದೆ. ಇದೂ ಮಳೆಗಾಲದಲ್ಲಿ ಸೋರುತ್ತದೆ. ಬದಿಯಲ್ಲಿ ಅಡುಗೆ ಕೂಡ ಮಾಡಲಾಗುತ್ತದೆ.

ಭರವಸೆ ಮಾತ್ರ
ಇಲ್ಲಿ ಕನಿಷ್ಠ ಮೂಲಸೌಕರ್ಯ ವಿಲ್ಲದೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ನಿತ್ಯ ಸಮಸ್ಯೆಯಾಗುತ್ತಿದೆ. ಶಾಲಾ ಅಭಿವೃದ್ಧಿಗೆ ಸಹಕರಿಸುವಂತೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಇ-ಮೇಲ್‌ ಮೂಲಕ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಜನಪ್ರತಿನಿಧಿಗಳಿಂದ ಭರವಸೆ ಮಾತ್ರ ಸಿಕ್ಕಿದ್ದು, ಕೆಲಸ ಯಾವಾಗ ಆಗುತ್ತದೆ ಎಂದು ಹೆತ್ತವರು ಪ್ರಶ್ನಿಸುತ್ತಿದ್ದಾರೆ.

ತುರ್ತು ಅಗತ್ಯ
ಇನ್ನು ಕೆಲವೇ ತಿಂಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಹೆತ್ತವರು ತಮ್ಮ ಮಕ್ಕಳ ಭವಿಷ್ಯದ ಕುರಿತು ಚಿಂತಿಸುತ್ತಿದ್ದಾರೆ. ಕನಿಷ್ಠ 2 ತರಗತಿ ಕೋಣೆ, 1 ಆಫೀಸ್‌ ರೂಮ್‌, 1 ಶೌಚಾಲಯ ಹಾಗೂ ಅಗತ್ಯ ಪೀಠೊಪಕರಣಗಳು ಶಾಲೆಗೆ ತುರ್ತು ಅಗತ್ಯವಿದೆ.

ನಮ್ಮ ನೋವು ಅರ್ಥ ಮಾಡಿಕೊಳ್ಳಿ
ಶಿಕ್ಷಣ ಸಚಿವರಿಗೆ, ಸಂಸದರಿಗೆ ಮತ್ತು ಸಂಬಂಧಪಟ್ಟ ಇಲಾಖೆ ಶಾಲೆಯ ಸಮಸ್ಯೆಗಳ ಬಗ್ಗೆ ಮೇಲ್‌ ಮೂಲಕ ತಿಳಿಸಲಾಗಿದೆ, ಆದರೆ ಸ್ಪಂದನೆ ಇಲ್ಲ. ಮಳೆಗಾಲ ಹತ್ತಿರವಾಗುತ್ತಿದೆ. ಇಲ್ಲಿ ಕಲಿಯುವ ಮಕ್ಕಳ ಹೆತ್ತವರು ಆರ್ಥಿಕವಾಗಿ ಹಿಂದುಳಿದವರು ನಮ್ಮ ನೋವನ್ನು ಶಿಕ್ಷಣ ಇಲಾಖೆಯವರು ಅರ್ಥಮಾಡಿಕೊಳ್ಳಲಿ.
– ಶಾರದಾ,ಎಸ್‌ಡಿಎಂಸಿ ಅಧ್ಯಕ್ಷೆ

ಬೇರೆ ಕೋಣೆ ಇಲ್ಲ
ನಾವು ಬಡವರು ಖಾಸಗಿ ಶಾಲೆಗೆ ಕಳಿಸುವಷ್ಟು ಸಾಮರ್ಥ್ಯ ಇಲ್ಲ. ಸುತ್ತಲೂ ಹೊಳೆ, ತೋಡುಗಳಿಂದ ಸುತ್ತುವರಿದ ಪ್ರದೇಶವಾಗಿದ್ದರಿಂದ ಬೇರೆ ಶಾಲೆಗೆ ಕಳುಹಿಸಲು ಸಾಧ್ಯವಿಲ್ಲ. ಅಂದು ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳು ಬಂದು ಹೋದರೂ, ಯಾರೂ ಶಾಲೆ ಪುನರ್‌ನಿರ್ಮಾಣ ಬಗ್ಗೆ ಚಿಂತಿಸಿಲ್ಲ.
-ಮಲ್ಲಿಕಾ,ಹೆತ್ತವರು

ಅನುದಾನ
ಕೊಠಡಿ ನಿರ್ಮಾಣಕ್ಕೆ 10 ಲಕ್ಷ ರೂ.ಅನುದಾನ ನೀಡಲಾಗಿದೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ. ಹಾಗೇ ಜಿಲ್ಲಾಧಿಕಾರಿ ಅವರ ಬಳಿ ಮಾತನಾಡಿದ್ದು ಪ್ರಕೃತಿಕ ವಿಕೋಪದಡಿ ಅನುದಾನ ನೀಡಲು ತಿಳಿಸಿದ್ದೇನೆ. ಇದರಿಂದ ಮತ್ತೂಂದು ಅನುದಾನ ಸಿಗಲಿದೆ. ಶಾಲೆಯ ಎಲ್ಲ ಕೆಲಸಗಳನ್ನು ಮಾಡಿಕೊಡುತ್ತೇನೆ.
-ಬಿ.ಎಂ.ಸುಕುಮಾರ್‌ ಶೆಟ್ಟಿ,ಶಾಸಕರು

-ಕೃಷ್ಣ ಬಿಜೂರು

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.