ನಗರ ಸೌಂದರ್ಯೀಕರಣಕ್ಕೆ ಚಾಲನೆ
ಗೋಡೆಗಳ ಮೇಲೆ ಸಮ್ಮೇಳನ ಲಾಂಛನ ವಿದ್ಯಾರ್ಥಿಗಳಿಂದ ಪ್ರಚಾರ
Team Udayavani, Jan 24, 2020, 10:52 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ. 5, 6 ಮತ್ತು 7ರಂದು ನಡೆಯುತ್ತಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ನಗರವನ್ನು
ಸಿಂಗರಿಸಲಾಗುತ್ತಿದೆ ಮತ್ತು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ
ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯಿಂದ ಹಮ್ಮಿಕೊಂಡಿದ್ದ ನಗರ
ಸೌಂದಯೀìಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ಹಾಗೂ ಅನ್ನಪೂರ್ಣ ಕ್ರಾಸ್ನಿಂದ ಗುಲಬರ್ಗಾ ವಿಶ್ವವಿದ್ಯಾಲಯ, ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸರ್ಕಾರಿ ಕಟ್ಟಡಗಳ ಆವರಣ ಗೋಡೆಗಳ ಮೇಲೆ ಸಮ್ಮೇಳನದ ಲಾಂಛನ ಹಾಗೂ ವಿವಿಧ
ಆಕರ್ಷಕ ಚಿತ್ರಗಳನ್ನು ಬಿಡಿಸಲಾಗುತ್ತದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಮುನಾಫ್ ಪಟೇಲ್ ಮಾತನಾಡಿ, ನಗರ ಸೌಂದರ್ಯೀಕರಣಕ್ಕೆ ಖಾಸಗಿ ಸಂಸ್ಥೆಯವರಾದ ಶಿರಶಿಮೆ ಅವರು ಗೋಡೆ ಬರಹ ಬರೆಯುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಅಲಂಕಾರ ಸಮಿತಿಯ ಸದಸ್ಯರು, ಮಹಾನಗರ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು