ಸರ್ಕಾರಿ ಶಾಲೆಗೆ ಸೌಲಭ್ಯ ಕೊರತೆ


Team Udayavani, Jan 24, 2020, 5:21 PM IST

kopala-tdy-1

ದೋಟಿಹಾಳ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆಯೇ ಹೊರತು. ಶಾಲೆಯ ಮೂಲ ಉದ್ದೇಶವನ್ನೇ ಮರೆಯುತ್ತಿದೆ. ಇದರಿಂದ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸರಕಾರ ಮಕ್ಕಳ ಶಿಕ್ಷಣಕ್ಕೆ ಶಿಕ್ಷಕರು ನೀಡದೆ. ಬಿಸಿಯೂಟ, ಕ್ಷೀರಭಾಗ್ಯ ಇನ್ನಿತರ ಯೋಜನೆಗಳನ್ನು ಮಾತ್ರ ಜಾರಿಗೆ ತಂದು ಶಾಲೆ ಹಾಜರಾತಿ ಹೆಚ್ಚಿಸುವ ಪ್ರಯತ್ನಿಸುತ್ತಿದೆ ಹೊರತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಮುಂದಾಗುತ್ತಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಮಾದಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4-5 ತಿಂಗಳಿನಿಂದ ವಿಷಯವಾರು ಶಿಕ್ಷಕರಿಲ್ಲದೇ, ಶಿಕ್ಷಣದಿಂದ ಮಕ್ಕಳ ಮುಂದಿನ ಭವಿಷ್ಯ ಅತಂತ್ರವಾಗಿದೆ. ಈ ಶಾಲೆಯಲ್ಲಿ ಒಟ್ಟು 123 ಮಕ್ಕಳಿದ್ದು 5 ಶಿಕ್ಷಕರ ಹುದ್ದೆಗಳಲ್ಲಿ ಸದ್ಯ ಇಬ್ಬರು ಮಾತ್ರ ಇದ್ದಾರೆ. ಮೂರು ಹುದ್ದೆಗಳು ಖಾಲಿ ಇವೆ. ಒಬ್ಬ ಶಿಕ್ಷಕಿ ಹೆರಿಗೆ ರಜೆಯ ಮೇಲೆ ತರಳಿದ್ದಾರೆ. ಉಳಿದ ಒಬ್ಬ ಶಿಕ್ಷಕ ಶಾಲೆಯ ದಾಖಲಾತಿಗಳು ಸರಿಪಡಿಸಿಕೊಂಡು. ಇಬ್ಬರ ಅತಿಥಿ ಶಿಕ್ಷಕರ ನಡುವೆ ಶಾಲೆ ನಡೆಯುತ್ತಿದೆ.

1-3ನೇ ತರಗತಿಗೆ ಒಟ್ಟು 63 ಮಕ್ಕಳಿದ್ದಾರೆ. ಎರಡು ನಲಿ-ಕಲಿ ತರಗತಿಗಳನ್ನು ಮಾಡಿಕೊಂಡು ಶಾಲಾ ಪ್ರಭಾರಿ ಮುಖ್ಯಗುರುಗಳು ಪಾಠ ಮಾಡುತ್ತಾರೆ. ಉಳಿದ 4, 5, 6 ಮತ್ತು 7ನೇ ತರಗತಿಗಳ ಮಕ್ಕಳಿಗೆ ಅತಿಥಿ ಶಿಕ್ಷಕರೇ ಪಾಠ ಮಾಡಬೇಕಾಗಿದೆ. ಇದರಿಂದಾಗಿ ವಿಷಯವಾರು ಶಿಕ್ಷಕರಿಲ್ಲದ ಕಾರಣ ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಸರಕಾರಿ ಶಾಲೆಯನ್ನು ಅತಿಥಿ ಶಿಕ್ಷಕರ ಮೇಲೆ ಶಾಲೆ ಬಿಟ್ಟು ಹೋಗುವಂತ್ತಿಲ್ಲ. ಆದರೆ ಇಲ್ಲಿ ಶಾಲೆ ಕೆಲಸದ ನಿಮಿತ್ಯ ಪ್ರಭಾರಿ ಮುಖ್ಯಗುರು ಹೊರಗೆ ಹೋದರೆ ಅತಿಥಿ ಶಿಕ್ಷಕರೇ ಶಾಲೆಯನ್ನು ಮುನ್ನಡೆಸಿಕೊಂಡು ಹೋಗ ಬೇಕಾಗಿರುವುದು ಅನಿವಾರ್ಯವಾಗಿದೆ.

ಸರಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಬದಲು ಮಕ್ಕಳ ಅನುಪಾತದಲ್ಲಿ ಎಲ್ಲಾ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲು ಕ್ರಮಕೈಗೊಳ್ಳಬೇಕು ಎಂಬುದು ಪ್ರಜ್ಞಾವಂತ ನಾಗರಿಕ ಕಳಕಳಿಯಾಗಿದೆ. ನಮ್ಮ ಶಾಲೆಯ ಎಂಟು ಹುದ್ದೆಗಳಲ್ಲಿ ಸದ್ಯ ಇಬ್ಬರು ಮಾತ್ರ ಇದ್ದೇವೆ. ಶಿಕ್ಷಕಿಯೊಬ್ಬರು ಹೆರಿಗೆ ರಜೆಯಲ್ಲಿದ್ದಾರೆ. ಈಗ ನಾನು ಮತ್ತು ಇಬ್ಬರು ಅತಿಥಿ ಶಿಕ್ಷಕರು ಶಾಲೆಯಲ್ಲಿದ್ದೇವೆ ಎಂದು ಪ್ರಭಾರಿ ಮುಖ್ಯಗುರುಗಳಾದ ಬಸವರಾಜ ಅಂಬಳನೂರು ಹೇಳಿದರು.

ಶಾಲೆಯಲ್ಲಿ ಇತ್ತೀಚೆಗೆ ಒಬ್ಬ ಶಿಕ್ಷಕ ನಿವೃತ್ತಿ ಹೊಂದಿದ್ದಾರೆ. ಇನ್ನೊಬ್ಬರು ವರ್ಗಾವಣೆಯಾಗಿ ಹೋಗಿದ್ದಾರೆ. ಶಿಕ್ಷಕಿ ಹೆರಿಗೆ ರಜೆಯ ಮೇಲೆ ಹೋಗಿದ್ದಾರೆ. ಸರಿಯಾದ ಮಾಹಿತಿ ಕೊರತೆಯಿಂದ ಅಲ್ಲಿ ಶಿಕ್ಷಕ ಕೊರತೆ ಕಾಣುತ್ತಿದೆ. ಕೂಡಲೇ ಆ ಶಾಲೆಗೆ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡುತ್ತೇವೆ. -ದಾವಲಸಾಬ ವಾಲಿಕಾರ್‌, ಶಿಕ್ಷಣ ಸಂಯೋಜಕರು ತಾವರಗೇರಾ

 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.