ಸಹೋದ್ಯೋಗಿಯಿಂದಲೇ ಶಿಕ್ಷಕಿಯ ಕೊಲೆ; ಇಬ್ಬರ ಬಂಧನ

ಮೀಯಪದವು ಶಾಲೆಯ ರೂಪಶ್ರೀ ನಿಗೂಢ ಸಾವಿಗೆ ತಿರುವು

Team Udayavani, Jan 25, 2020, 1:19 AM IST

jan-38

ಕುಂಬಳೆ: ಜಿಲ್ಲೆಯಲ್ಲಿ ಭಾರೀ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದ್ದ ಮೀಯಪದವು ಶ್ರೀ ವಿದ್ಯಾವರ್ಧಕ ಶಾಲೆಯ ಶಿಕ್ಷಕಿ ಬಿ.ಕೆ.ರೂಪಶ್ರೀ (40) ಅವರ ಸಾವಿನ ನಿಗೂಢತೆಯನ್ನು ಕ್ರೈಂಬ್ರಾಂಚ್‌ ತಂಡವು ಭೇದಿಸಿದ್ದು, ಇದೊಂದು ಕೊಲೆ ಕೃತ್ಯ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ರೂಪಶ್ರೀ ಅವರ ಸಹೋದ್ಯೋಗಿ, ಚಿಗುರುಪಾದೆ ನಿವಾಸಿಯಾಗಿರುವ ಶಿಕ್ಷಕ ವೆಂಕಟರಮಣ ಕಾರಂತ ಹಾಗೂ ಈತನಿಗೆ ಸಹಾಯ ಮಾಡಿದ್ದ ಕಾರು ಚಾಲಕ ನಿರಂಜನ ಎಂಬವರನ್ನು ಬಂಧಿಸಲಾಗಿದೆ.

ಆರಂಭದಿಂದಲೂ ಇದೊಂದು ಕೊಲೆ ಎಂದೇ ಜನರು ಹೇಳುತ್ತಿದ್ದರು ಹಾಗೂ ವೆಂಕಟರಮಣನ ವಿರುದ್ಧವೇ ಶಂಕೆ ಬಲವಾಗಿತ್ತು. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆಯನ್ನೂ ಮಾಡಿದ್ದರು. ವೆಂಕಟರಮಣ ಮತ್ತು ರೂಪಶ್ರೀ ನಡುವೆ ಹಣಕಾಸಿನ ವ್ಯವಹಾರ ಇತ್ತು ಮತ್ತು ಇದೇ ಕಾರಣದಿಂದ ಕೊಲೆ ಮಾಡ ಲಾಗಿದೆ ಎಂದು ಶಂಕಿಸಲಾಗಿದೆ. ಈಕೆಯನ್ನು ಆರೋಪಿಯ ಮನೆಯಲ್ಲಿ ಕೊಂದು ಕಾರಿನಲ್ಲಿ ಸಾಗಿಸಿ ಸಮುದ್ರಕ್ಕೆ ಎಸೆಯಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ
ರೂಪಶ್ರೀಯ ನಾಪತ್ತೆಯಾಗಿದ್ದ ವ್ಯಾನಿಟಿ ಬ್ಯಾಗ್‌ ಕೂಡ ಗುರುವಾರ ಪತ್ತೆಯಾಗಿದೆ. ರೂಪಶ್ರೀ ಜ.16ರಂದು ಮಧ್ಯಾಹ್ನದ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದು, ಜ.18ರಂದು ಬೆಳಗ್ಗೆ ಕುಂಬಳೆ ಪೆರುವಾಡು ಕಡಪ್ಪುರದಲ್ಲಿ ಆಕೆಯ ಮೃತದೇಹ ಬಹುತೇಕ ನಗ್ನವಾಗಿ ಪತ್ತೆಯಾಗಿತ್ತು. ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯಲ್ಲಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದಾಗಿ ತಿಳಿದು ಬಂದಿತ್ತು. ಆದರೆ ಸಮುದ್ರಕ್ಕೆ ತಲುಪಿದ್ದ ಕುರಿತು ತನಿಖೆ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಗೆ ನೇತೃತ್ವ ವಹಿಸಿದ್ದ ಡಾ| ಕೆ. ಗೋಪಾಲಕೃಷ್ಣ ಪಿಳ್ಳೆ ಪೊಲೀಸರಿಗೆ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಮೊದಲಿಗೆ ಮಂಜೇಶ್ವರ ಮತ್ತು ಕುಂಬಳೆ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಆದರೆ ನಿಗೂಢತೆ ಹೆಚ್ಚಾದ ಹಿನ್ನೆಲೆಯಲ್ಲಿ ತನಿಖೆಯನ್ನು ಜಿಲ್ಲಾ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು. ಅದು ತನಿಖೆಯಲ್ಲಿ ಪ್ರಗತಿ ಸಾಧಿಸಿ, ಕೊಲೆ ಎಂದು ನಿರ್ಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮೊಬೈಲ್‌ ಕಣ್ಣಾಮುಚ್ಚಾಲೆ
ಸಾವಿನ ಬೆನ್ನಲ್ಲೇ ರೂಪಶ್ರೀಯ ಮೊಬೈಲ್‌ ಫೋನ್‌ ನಾಪತ್ತೆಯಾಗಿತ್ತು. ಅನಂತರ ಅದನ್ನು ಬೇರೆ ಬೇರೆ ಸ್ಥಳಾಂತರಿಸಲಾಗಿತ್ತು. ಇದನ್ನು ಕೇಂದ್ರೀಕರಿಸಿ ತನಿಖೆ ಮುಂದುವರಿಯುತ್ತಿದ್ದಂತೆ ಅದು ಶಿಕ್ಷಕಿಯ ಮನೆಯ ಕಿಟಿಕಿ ಪಕ್ಕದಲ್ಲಿ ಪತ್ತೆಯಾಗಿತ್ತು. ಆ ಬಳಿಕ ಆಕೆಯ ಬ್ಯಾಗ್‌ ಗುರುವಾರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು. ಬ್ಯಾಗ್‌ನಲ್ಲಿ ಸಿಕ್ಕಿದ ಗುರುತು ಚೀಟಿಯಿಂದ ಅದು ರೂಪಶ್ರೀಯದ್ದೆಂದು ದೃಢಪಟ್ಟಿತು.

ಜಿಲ್ಲಾ ಕ್ರೈಂ ಬ್ರಾಂಚ್‌ ಡಿವೈಎಸ್‌ಪಿ ಸತೀಶ್‌ಕುಮಾರ್‌, ಎಸ್‌.ಐ. ಬಾಬು, ಮಂಜೇಶ್ವರ ಅಡಿಶನಲ್‌ ಎಸ್‌ಐ ಪಿ.ಬಾಲಚಂದ್ರನ್‌, ಕುಂಬಳೆ ಪೊಲೀಸ್‌ ಸಿವಿಲ್‌ ಪೊಲೀಸ್‌ ಆಫೀಸರ್‌ ಪ್ರದೀಶ್‌ ಗೋಪಾಲ್‌ ನೇತೃತ್ವದ ವಿಶೇಷ ತನಿಖಾ ತಂಡ ಪ್ರಕರಣವನ್ನು ಬಯಲಿಗೆಳೆದಿದೆ.

ಮನೆಗೆ ಕರೆಸಿಕೊಂಡು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದರು!
ಯಾವುದೋ ಕಾರ್ಯ ನಿಮಿತ್ತ ಶಿಕ್ಷಕಿಯನ್ನು ಮನೆಗೆ ಕರೆಸಿಕೊಂಡ ವೆಂಕಟರಮಣನು ಆಕೆಯನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ತುಂಬಿಸಿ ಸ್ಪಿಫ್ಟ್ ಕಾರಿನಲ್ಲಿ ಕೊಂಡೊಯ್ದು ಸಮುದ್ರಕ್ಕೆ ಎಸೆದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆಂದು ತನಿಖಾ ತಂಡವು ತಿಳಿಸಿದೆ. ಕಾರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರಿನಲ್ಲಿ ಮಹಿಳೆಯ ಕೂದಲು ಪತ್ತೆ
ಕಣ್ಣೂರಿನಿಂದ ಬಂದಿರುವ ಫಾರೆನ್ಸಿಕ್‌ ತಜ್ಞರು ವೆಂಕಟರಮಣನ ಕಾರನ್ನು ಪರಿಶೀಲಿಸಿದಾಗ ಅದರಲ್ಲಿ ಮಹಿಳೆಯ ಕೂದಲು ಪತ್ತೆಯಾಗಿತ್ತು. ಇದು ಕೊಲೆ ಶಂಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿತ್ತು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.