ಇಂದು ಟ್ರಿಪಲ್‌ ತಲಾಖ್‌ ಸಿನಿಮಾ ಪ್ರೀಮಿಯರ್ ಶೋ; ಉಚಿತ ಪ್ರವೇಶ

ಯುವ ಮೆರಿಡಿಯನ್‌ ಹಾಲ್‌ನಲ್ಲಿ ಜ.25ರಂದು ಸಂಜೆ 5.45ಕ್ಕೆ ಟ್ರಿಪಲ್‌ ತಲಾಖ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ

Team Udayavani, Jan 25, 2020, 10:13 AM IST

Triple-Talaq-Movie

ಕುಂದಾಪುರ: ಇಲ್ಲಿನ ಯುವ ಮೆರಿಡಿಯನ್‌ ಹಾಲ್‌ನಲ್ಲಿ ಜ.25ರಂದು ಸಂಜೆ 5.45ಕ್ಕೆ ಟ್ರಿಪಲ್‌ ತಲಾಖ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ ನಡೆಯಲಿದ್ದು ಸಾರ್ವಜನಿಕ ರಿಗೆ ಮುಕ್ತ ಪ್ರವೇಶ ಇದೆ ಎಂದು ಸಿನಿಮಾ ನಿರ್ದೇಶಕ ಯಾಕೂಬ್‌ ಖಾದರ್‌ ಗುಲ್ವಾಡಿ ಹೇಳಿದರು.

ಅವರು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. ತ್ರಿವಳಿ ತಲಾಖ್‌ ಸಮಸ್ಯೆ ಹಾಗೂ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪಿನ ಸುತ್ತ ಕಥೆ ಹೆಣೆಯಲಾಗಿದೆ.

96 ನಿಮಿಷಗಳ ಸಿನಿಮಾ ಸಿದ್ಧಪಡಿಸಲಾಗಿದ್ದು ಈ ಮೊದಲೇ ಸಿನಿಮಾ ಚಿತ್ರೀಕರಣ ಮಾಡಲಾಗಿತ್ತು. ಆದರೆ ಮಾರುಕಟ್ಟೆಗೆ ಬಿಡಲು ಸಾಧ್ಯವಾಗಿರಲಿಲ್ಲ. ಅದೇ ಸಂದರ್ಭ ಸುಪ್ರೀಂ
ಕೋರ್ಟ್‌ ತೀರ್ಪು ಬಂದಿದ್ದು ಅನಂತರದ ದಿನಗಳಲ್ಲಿ ನಿರ್ಮಾಪಕರ ಸಹಕಾರದಿಂದ 90 ಶೇ.ದಷ್ಟು ಮರು ಚಿತ್ರೀಕರಣ ನಡೆಸಲಾಗಿದೆ.

ಕುಂದಾಪುರ ತಾಲೂಕಿನಲ್ಲಿಯೇ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದಲ್ಲಿ ರೂಪಾ ವರ್ಕಾಡಿ,ನವ್ಯಾ ಪೂಜಾರಿ, ಅಝರ್‌ ಷಾ, ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ, ಬೇಬಿ ಪಾಹಿಮಾ, ಸಾಹಿತಿ, ನ್ಯಾಯವಾದಿ ಎ.ಎಸ್‌.ಎನ್‌. ಹೆಬ್ಟಾರ್‌, ಅಮೀರ್‌ ಹಂಝ, ಮಾಸ್ಟರ್‌ ಫ‌ಹಾದ್‌, ಎಂ.ಕೆ. ಮಠ, ದೇವೇಂದ್ರ ಬಡಿಗೇರ್‌, ಮಹಮ್ಮದ್‌ ಬಡ್ಡೂರ್‌, ಉಮರ್‌ ಯು.ಎಚ್‌. ಮೊದಲಾದವರು ನಟಿಸಿದ್ದಾರೆ.

ಬ್ಯಾರಿ ಭಾಷೆಯ ಈ ಚಿತ್ರವನ್ನು ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಭಾಷಾಂತರಿಸಿ ಟಾಕೀಸ್‌ನಲ್ಲಿ ಬಿಡುಗಡೆ ಮಾಡ ಲಾಗುವುದು. ಈಗ ಟಾಕೀಸ್‌ ನಲ್ಲಿ ಬಿಡುಗಡೆ ಮಾಡುವ ಯೋಜನೆ ಇಲ್ಲ. ಏಕೆಂದರೆ ಥಿಯೇಟರ್‌ಗಳ ಲಾಬಿ ಎದುರಿಸುವುದು ಕಷ್ಟ, ಥಿಯೇಟರ್‌ಗಳು ದೊರೆಯುವುದು ಕಷ್ಟ, ಥಿಯೇಟರ್‌ಗಳ ಬಾಡಿಗೆ ಕಟ್ಟುವುದೂ ಕಷ್ಟ . ಈಗಾಗಲೇ ಸಿನಿಮಾ ಲಂಡನ್‌ನಲ್ಲಿ ಚಿತ್ರೋತ್ಸವದಲ್ಲಿ
ಪ್ರದರ್ಶನ ಕಂಡಿದೆ ಎಂದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪೂರಕ ಮಾಹಿತಿ ನೀಡಿ, ಕನ್ನಡಕ್ಕೆ 2017ರಲ್ಲಿ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಗುಲ್ವಾಡಿ ಟಾಕೀಸ್‌ ನಿರ್ಮಾಣದ ಯಾಕೂಬ್‌ ಖಾದರ್‌ ತಲಾಖ್‌ ವಿಚಾರದಲ್ಲಿ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಕಲ್ಪನೆಗಳಿವೆ. ಕುರಾನ್‌ನಲ್ಲಿ ತಲಾಖ್‌ ಬಗ್ಗೆ ಏನು ಹೇಳಲಾಗಿದೆ ಎನ್ನುವುದನ್ನು ಈ ಸಿನಿಮಾದಲ್ಲಿ ಹೇಳಲು
ಪ್ರಯತ್ನಿಸಲಾಗಿದೆ ಎಂದರು.

ಚಿತ್ರದ ನಿರ್ಮಾಪಕ ನಾರಾಯಣ ಪಿ. ಸುವರ್ಣ ಮುಂಬಯಿ ಮಾತನಾಡಿ, ಚಿತ್ರವು ಪ್ರಾದೇಶಿಕ ಭಾಷೆ ವಿಭಾಗದಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಬ್ಯಾರಿ ಭಾಷೆಯಲ್ಲಿದೆ. ಇಂಗ್ಲಿಷ್‌ ಸಬ್‌ಟೈಟಲ್‌ ಒಳಗೊಂಡಿದೆ.

ನ್ಯಾಯಾಲಯ ಹಾಗೂ ಪೊಲೀಸ್‌ ಠಾಣೆ ದೃಶ್ಯಗಳನ್ನು ಸಹಜವಾಗಿ ಬರಲು ಕನ್ನಡದಲ್ಲೇ ಉಳಿಸಿಕೊಳ್ಳಲಾಗಿದೆ. ಎಂದರು. ನಿರ್ಮಾಪಕಿ ಪ್ರಭಾ ಎನ್‌. ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.