ಗೃಹರಕ್ಷಕದಳದ “ಕಾಸ್‌’ಬಾತ್‌

ಜಿಲ್ಲೆಯಲ್ಲಿದ್ದಾರೆ ಸುಮಾರು 952 ಗೃಹರಕ್ಷಕ ಸಿಬ್ಬಂದಿಡ್ನೂಟಿ ಹಾಕಲು ಯುನಿಟ್‌ ಹೆಡ್‌ ಗಳ ಕಿರಿಕಿರಿ

Team Udayavani, Jan 25, 2020, 11:47 AM IST

25-January-5

ಬೀದರ: ತುರ್ತು ಸಂದರ್ಭದಲ್ಲಿ ರಕ್ಷಣೆ ಮತ್ತು ಸಮಾಜ ಸೇವೆ ಮಾಡುತ್ತಿರುವ ಗೃಹ ರಕ್ಷಕರಿಗೆ “ಡ್ನೂಟಿ’ ಹಾಕಲು ಯೂನಿಟ್‌ ಹೆಡ್‌ಗಳು ಸತಾಯಿಸುತ್ತಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಶಿಸ್ತುಬದ್ಧ, ಸಮವಸ್ತ್ರಧಾರಿ ಸ್ವಯಂ ಸೇವಕರ ಪಡೆಯಾಗಿರುವ ಗೃಹ ರಕ್ಷಕ ದಳ ಮೂರ್‍ನಾಲ್ಕು ವರ್ಷಗಳಿಂದ ಸಿಬ್ಬಂದಿಗಳ ಜೀವನಕ್ಕೆ ಆಸರೆಯಾಗಿ ಬದಲಾಗುತ್ತಿದೆ. ವರ್ಷದಲ್ಲಿ ಏಳೆಂಟು ತಿಂಗಳು ಕೆಲಸ, ಉತ್ತಮ ಗೌರವ ಧನವೂ ಸಿಗುತ್ತಿದೆ. ಹಾಗಾಗಿ ಮಹಿಳೆಯರು-ಪುರುಷರು ತಮ್ಮ ಬಿಡುವಿನ ದಿನಗಳಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಯೂನಿಟ್‌ ಹೆಡ್‌ನ‌ವರು ಸೇವೆ ಮಾಡಲು ಅವಕಾಶ ನೀಡಲು ಸತಾಯಿಸುತ್ತಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಗಡಿ ಜಿಲ್ಲೆ ಬೀದರನಲ್ಲಿ ಸುಮಾರು 952 ಜನರು ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ
ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ 200 ಮಂದಿ ಮಹಿಳೆಯರು ಸಹ ಸೇರಿದ್ದಾರೆ.
ಬೀದರ ನಗರದಲ್ಲೇ ಸುಮಾರು 200 ಗೃಹ ರಕ್ಷಕರು ಕೆಲಸ ಮಾಡುತ್ತಿದ್ದಾರೆ. ತಿಂಗಳಿಗೆ 12,000 ರೂ. ಗೌರವ ಧನ ಪಡೆಯುತ್ತಿದ್ದಾರೆ. ಗೃಹ ರಕ್ಷಕರು ತಮ್ಮ ಕರ್ತವ್ಯನಿಷ್ಠೆ ಮತ್ತು ಬದ್ಧತೆಯಿಂದ ಸೇವೆ ಸಲ್ಲಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌, ಭದ್ರತಾ ಸಿಬ್ಬಂದಿಗೆ ಸಾಥ್‌ ನೀಡುತ್ತಿದ್ದಾರೆ.

ಜಿಲ್ಲೆಯ ಐದು ತಾಲೂಕಿನಲ್ಲಿ ತಲಾ ಒಂದು ಯುನಿಟ್‌ ಮತ್ತು ವಿವಿಧ ವೃತ್ತಗಳಲ್ಲಿ 10 ಸಬ್‌
ಯೂನಿಟ್‌ಗಳನ್ನು ಸ್ಥಾಪಿಸಿ ಮುಖ್ಯಸ್ಥರನ್ನು ನೇಮಿಸಲಾಗಿದೆ. ಇಲ್ಲಿಯೇ ತಿಂಗಳಲ್ಲಿ 4 ಬಾರಿ ಪರೇಡ್‌ಗಳು ನಡೆಸಿ ಗೃಹ ರಕ್ಷಕರಿಗೆ ಹಾಜರಾತಿ ಮತ್ತು ಡ್ನೂಟಿ ಹಾಕುವುದು ನಿಯಮ. ಆದರೆ
ಡ್ನೂಟಿ ಹಾಕಿಸಿಕೊಳ್ಳಲು ಮತ್ತು ಇಂಥದ್ದೇ ಜಾಗದಲ್ಲಿ ಸೇವೆ ಸಲ್ಲಿಸಬೇಕಾದರೆ ಯೂನಿಟ್‌ ಹೆಡ್‌ಗಳು ಸೇವೆಗೆ ಅವಕಾಶ ಕಲ್ಪಿಸದೇ ಸತಾಯಿಸುತ್ತಾರೆಂಬ ದೂರುಗಳು ಕೇಳಿ ಬರುತ್ತಿವೆ.
ಜಿಲ್ಲೆಯಲ್ಲಿ ಇರುವ ಗೃಹ ರಕ್ಷಕರು ಮುಖ್ಯವಾಗಿ ಸುಗಮ ಸಂಚಾರ ವ್ಯವಸ್ಥೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಪೊಲೀಸ್‌ ಠಾಣೆ, ಬ್ರಿಮ್ಸ್‌, ರೈಲು ನಿಲ್ದಾಣ, ಕಾರಾಗೃಹದ ಸೇವೆಗಳಲ್ಲಿ ನಿಯೋಜನೆಗೊಂಡಿದ್ದಾರೆ. ಇನ್ನುಳಿದಂತೆ ಜಾತ್ರಾ ಮಹೋತ್ಸವ, ಚುನಾವಣೆ ಕೆಲಸ, ಮುಖ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ದುಡಿಸಿಕೊಳ್ಳಲಾಗುತ್ತದೆ. ಕೆಲವೊಮ್ಮೆ ರಾಜ್ಯದ ವಿವಿಧ ಜಿಲ್ಲೆ ಮಾತ್ರವಲ್ಲ ನೆರೆಯ ರಾಜ್ಯಗಳಲ್ಲೂ ಚುನಾವಣೆ ಕರ್ತವ್ಯಕ್ಕೂ ಹಾಜರಾಗುತ್ತಾರೆ. ಗೃಹ ರಕ್ಷಕ ದಳದ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಸಿಬ್ಬಂದಿಗಳಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕಿದೆ.

ಡ್ಯೂಟಿ ಹಾಕಿಸುವ ನೆಪದಲ್ಲಿ ಯೂನಿಟ್‌ಗಳಲ್ಲಿ ಗೃಹ ರಕ್ಷಕರಿಂದ ಹಣ ಪಡೆಯುತ್ತಿರುವುದು ನನ್ನ ಗಮನಕ್ಕೂ ಬಂದಿದೆ. ಈ ಹಿಂದೆ ಭಾಲ್ಕಿ ಮತ್ತು ಮಂಠಾಳ ಯೂನಿಟ್‌ನಲ್ಲಿ ಆರೋಪ ಕೇಳಿ ಬಂದಾಗ ಮುಖ್ಯಸ್ಥರನ್ನು ಅಮಾನತು ಮಾಡಲಾಗಿದೆ. ಪಾಳಿ ಆಧಾರದಲ್ಲಿ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಹಣ ಪಡೆಯುತ್ತಿರುವ ಬಗ್ಗೆ ದೂರು ನೀಡಿದರೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.
ಮನೋಜಕುಮಾರ, ಜಿಲ್ಲಾ
ಸಮಾದೇಷ್ಟ, ಬೀದರ ಗೃಹ ರಕ್ಷಕ ದಳ.

ಸಮಾಜ ಸೇವೆಯ ಹಂಬಲದೊಂದಿಗೆ ಬಿಡುವಿನ ದಿನಗಳಲ್ಲಿ ಗೃಹ ರಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ವರ್ಷದಲ್ಲಿ 5-6 ತಿಂಗಳು ಮಾತ್ರ ಗೃಹ ರಕ್ಷಕನಾಗಿ ಸೇವೆಗೆ ಅವಕಾಶ ಸಿಗುತ್ತದೆ. ಡ್ನೂಟಿ ಹಾಕಿಸಿಕೊಳ್ಳಲು ಯೂನಿಟ್‌ ಹೆಡ್‌ಗಳು ಸತಾಯಿಸುತ್ತಾರೆ.
ಹೆಸರು ಹೇಳಲಿಚ್ಚಿಸದ ಗೃಹ ರಕ್ಷಕ ಸಿಬ್ಬಂದಿ.

„ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.