ನಗರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ

ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಗವಿರಂಗಪ್ಪ ಸ್ಪಷ್ಟನೆ

Team Udayavani, Jan 25, 2020, 4:28 PM IST

25-January-20

ಚಿಕ್ಕಮಗಳೂರು: ನಗರದ ಅಭಿವೃದ್ಧಿಗೆ ಪೂರಕ ಬಜೆಟ್‌ ಮಂಡನೆಗೆ ನಗರಸಭೆ ಸಾರ್ವಜನಿಕರಿಂದ ಮಾಹಿತಿ ಪಡೆದು ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಗವಿರಂಗಪ್ಪ ತಿಳಿಸಿದರು.

ಶುಕ್ರವಾರ ನಗರದ ನಗರಸಭೆ ಸಭಾಂಗಣದಲ್ಲಿ 2020-21ನೇ ಸಾಲಿನ ನಗರಸಭೆ ಬಜೆಟ್‌ ಕುರಿತ ಸಾರ್ವಜನಿಕರ ಎರಡನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೃತ್‌ ಯೋಜನೆ ಹಾಗೂ ಯುಜಿಡಿ ಕಾಮಗಾರಿ ಮಾ.8 ರೊಳಗೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು. ಸರ್ಕಾರಿ ಹೆರಿಗೆ ಆಸ್ಪತ್ರೆ ಮುಂಭಾಗ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತ ನಿರ್ಮಾಣಕ್ಕೆ ನಗರಸಭೆ ಸೂಕ್ತ ಕ್ರಮ ಕೈಗೊಂಡಿದೆ. ನಗರದ ಅಭಿವೃದ್ಧಿಗೆ ನಾಗರಿಕರು ತಮ್ಮ ಸಲಹೆ ಸಹಕಾರ ನೀಡಬೇಕೆಂದರು.

ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ನಗರದ ಎಲ್ಲಾ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಆದರೂ ನಗರಸಭೆ ನಿರ್ಲಕ್ಷ್ಯ ವಹಿಸಿದೆ. ಕನಿಷ್ಟ ಪಕ್ಷ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವನ್ನಾದರೂ ಮಾಡಿ. ನಗರದ ಜನತೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಹೇಳಿದರು. ಹಿರಿಯ ನಾಗರಿಕ ನಂಜುಂಡರಾವ್‌ ಮಾತನಾಡಿ, ನಗರದಲ್ಲಿ ನಿರ್ಮಿಸಿರುವ ಬಾಕ್ಸ್‌ ಚರಂಡಿಗಳಿಗೆ ಸ್ಲ್ಯಾಬ್ ಹಾಕದೆ ಇರುವುದರಿಂದ ದುರ್ವಾಸನೆ ಬರುತ್ತಿದೆ. ನಗರಸಭೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ, ತೆರಿಗೆ ಹಣ ಮಾತ್ರ ಹೆಚ್ಚು ಮಾಡಲಾಗುತ್ತಿದೆ. ಜನತೆಗೆ ಮೂಲಭೂತ ಸೌಲಭ್ಯ ನೀಡಿ ತೆರಿಗೆ ಹೆಚ್ಚಿಗೆ ಮಾಡಿ ಎಂದು ಸಲಹೆ ನೀಡಿದರು.

ಬಹುಜನ ಸಮಾಜವಾದಿ ಪಕ್ಷದ ಮುಖಂಡ ಗಂಗಾಧರ್‌ ಮಾತನಾಡಿ, ನಗರದ ಎಂ.ಜಿ.ರಸ್ತೆ, ಐ.ಜಿ.ರಸ್ತೆ, ಮಾರ್ಕೆಟ್‌ ರಸ್ತೆ ಸಮರ್ಪಕವಾಗಿ ಸರಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ರಸ್ತೆ ಬದಿಯಲ್ಲಿ ಗಿಡ ಬೆಳೆಸಲು ಸಾಧ್ಯವಾಗದಂತೆ ಮಾಡಲಾಗಿದೆ. ರಸ್ತೆಗಳು ಧೂಳಿನಿಂದ ಕೂಡಿದ್ದು, ನಗರದ ಜನರಿಗೆ ಅನಾರೋಗ್ಯ ಕಾಡುವ ಮುನ್ಸೂಚನೆ ಕಾಣುತ್ತಿದೆ. ಸರ್ಕಾರ ಹೆಚ್ಚಿನ ಅನುದಾನ ನೀಡಿದರು ನಗರದ ಅಭಿವೃದ್ಧಿ ಕುಂಠಿತವಾಗಿರುವುದು ನೋವಿನ ಸಂಗತಿ ಎಂದರು.

ಮಾಜಿ ನಗರಸಭೆ ಸದಸ್ಯ ರೂಬಿನ್‌ ಮೋಸಸ್‌ ಮಾತನಾಡಿ, ನಗರದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳನ್ನು ನಗರಸಭೆ ಅಧಿಕಾರಿಗಳು ಯಾರೂ ಸ್ಥಳ ಪರಿಶೀಲನೆ ಮಾಡುವುದಿಲ್ಲ. ಪರಿಶೀಲನೆ ನಡೆಸದೆ ಬಿಲ್‌ ನೀಡಲಾಗುತ್ತಿದೆ. ಗೌರಿ ಕಾಲುವೆ ಬಾಕ್ಸ್‌ ಚರಂಡಿಗೆ ಸ್ಲ್ಯಾಬ್  ನಿರ್ಮಿಸುವುದಾಗಿ ಕಾಮಗಾರಿ ಆರಂಭಿಸಿ ಇದುವರೆಗೂ ಸ್ಲ್ಯಾಬ್ ಹಾಕಿಲ್ಲ. ನಗರದಲ್ಲಿ ಬೀದಿ ನಾಯಿ ಮತ್ತು ಹಂದಿಗಳ ಸಂಖ್ಯೆ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಬೀದಿನಾಯಿ, ಹಂದಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಪ್ರೇಮ್‌ಕುಮಾರ್‌ ಮಾತನಾಡಿ, ನಗರದ ಅಭಿವೃದ್ಧಿಗೆ ಎಂ.ಜಿ ರಸ್ತೆಯಲ್ಲಿರುವ ನಗರಸಭೆ ಜಾಗದಲ್ಲಿ ಮಾರುಕಟ್ಟೆ ಕಾಂಪ್ಲೆಕ್ಸ್‌ ನಿರ್ಮಾಣ ಮಾಡಬೇಕು. ಬಸ್‌ ನಿಲ್ದಾಣ ಬಳಿ ಇರುವ ಜೈಲು ಜಾಗವನ್ನು ನಗರಸಭೆ ಬಳಸಿಕೊಳ್ಳಬೇಕು. ಇಂದಾವರ ಕಸ ವಿಲೆವಾರಿಯನ್ನು ಆಧುನಿಕ ಕಾಲಕ್ಕೆ ತಕ್ಕಂತೆ ಬದಲಾಯಿಸಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ನಗರಸಭೆ ಲೆಕ್ಕ ಅಧಿಧೀಕ್ಷಕರಾದ ಲತಾಮಣಿ, ಕಚೇರಿ ವ್ಯವಸ್ಥಾಪಕರಾದ ಮಂಜುನಾಥ್‌, ಪರಿಸರ ಅಭಿಯಂತರರಾದ ರಕ್ಷಿತ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.