ಅರಣ್ಯ ಇಲಾಖೆ ವಾಹನದ ಮೇಲೆ ಕಾಡಾನೆ ದಾಳಿ
Team Udayavani, Jan 26, 2020, 3:00 AM IST
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಕಾಡಾನೆಯೊಂದು ಶನಿವಾರ ಅರಣ್ಯ ಇಲಾಖೆಯ ವಾಹನದ ಮೇಲೆ ದಾಳಿ ಮಾಡಿದೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಅಭಯಾರಣ್ಯದ ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಆನೆ ದಾಳಿಯಿಂದ ವಾಹನ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರೆಲ್ಲ ಬಚಾವ್ ಆಗಿದ್ದಾರೆ. ಶನಿವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಅರಣ್ಯ ಇಲಾಖೆಯ ವಾಹನದಲ್ಲಿ ಕೆಲಸಗಾರರನ್ನು ಅಭಯಾರಣ್ಯದೊಳಗೆ ಕರೆದೊಯ್ಯಲಾಗುತ್ತಿತ್ತು.
ವಾಹನದ ಶಬ್ದ ಕೇಳಿದ ಕಾಡಾನೆ ಒಮ್ಮೆಲೇ ವಾಹನದ ಎದುರು ಬಂದು ದಾಳಿ ಮಾಡಿತು. ವಾಹನದಲ್ಲಿದ್ದವರೆಲ್ಲ ತಕ್ಷಣ ಇಳಿದು ಓಡಿ ಹೋದರು. ಆಕ್ರೋಶಗೊಂಡ ಆನೆ ವಾಹನವನ್ನು ನಜ್ಜುಗುಜ್ಜು ಮಾಡಿ ಸ್ಥಳದಿಂದ ಕಾಲ್ಕಿತ್ತಿದೆ. ವಾಹನ ನೋಡಿ ಆನೆ ರೊಚ್ಚಿಗೆದ್ದಿರಬಹುದು. ಆನೆ ದಾಳಿಯಿಂದ ವಾಹನ ಜಖಂಗೊಂಡಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಭಯಾರಣ್ಯದ ಅರಣ್ಯ ಸಂರಕ್ಷಣಾ ಧಿಕಾರಿ ಧನಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್