ಮತದಾನ ಮಹತ್ವ ಅರಿತುಕೊಳ್ಳಿ

ಜಿಲ್ಲಾಡಳಿತದಿಂದ ಮತದಾರರ ದಿನಾಚರಣೆದೇಶದ ಉತ್ತಮ ಭವಿಷ್ಯಕ್ಕಾಗಿ ಕಡ್ಡಾಯ ಮತದಾನ ಅಗತ್ಯ

Team Udayavani, Jan 26, 2020, 12:00 PM IST

26-January-6

ವಿಜಯಪುರ: ಏಕತೆಯಲ್ಲಿ ಐಕ್ಯತೆ ಹೊಂದಿರುವ ಭಾರತ ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಹಾಗೂ ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ಹೊಂದಿದ್ದು ಚುನಾವಣೆಗಳಲ್ಲಿ ಪ್ರಜೆಗಳು ತಮ್ಮ ಅಮೂಲ್ಯ ಮತ ಚಲಾಯಿಸಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾ ಧೀಶರಾದ ಸದಾನಂದ ನಾಯಿಕ ಹೇಳಿದರು.

ಶನಿವಾರ ನಗರದ ಕಂದಗಲ್ಲ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಯೋಗ್ಯರನ್ನೇ ಆಯ್ಕೆ ಮಾಡಿ ದೇಶದ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡಿ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆ ಮತದಾನ ಮಹತ್ವ ಅರಿತು ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಭಾರತದ ಪ್ರಜಾಪ್ರಭುತ್ವ ರಕ್ಷಣೆ, ಸುಭದ್ರ ಹಾಗೂ ಅಭಿವೃದ್ಧಿ ಪರ ಸರ್ಕಾರ ರಚನೆಗೆ ಮುಂದಾಬೇಕು. ಇಂಥ ಕನಸು ನನಸಾಗಲು ಪ್ರತಿ ಮತದಾರ ಯೋಗ್ಯ ಅಭ್ಯರ್ಥಿ ಆಯ್ಕೆಗೆ ಆದ್ಯತೆ ನೀಡಿದಲ್ಲಿ ಮಾತ್ರ ಇದು ಸಾಧ್ಯವಿದೆ ಎಂದರು.

ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಭಾರತದ ಸಂವಿಧಾನ ಶ್ರೇಷ್ಠ ಪೀಠಿಕೆ, ಮೂಲಭೂತ ಹಕ್ಕುಗಳು ಹಾಗೂ ರಾಜ್ಯ ನಿರ್ದೇಶನ ತತ್ವಗಳನ್ನು ಆಯಾ ರಾಜ್ಯಗಳಿಗೆ ನೀಡಿದೆ. ಉತ್ತಮ ರಾಷ್ಟ್ರದ ಭವಿಷ್ಯಕ್ಕಾಗಿ ಮತದಾನದ ಮಹತ್ವ ಅರಿಯುವ ಜೊತೆಗೆ ಇತರರಲ್ಲಿಯೂ ಕೂಡ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಎನ್‌.ಡಿ. ರಜಪೂತ ಉಪನ್ಯಾಸ ನೀಡಿ, 19ನೇ ಶತಮಾನದವರೆಗೆ ಅಮೆರಿಕ ದೇಶದಲ್ಲಿ ಮಹಿಳೆಯರಿಗೆ ಮತದಾನ ಹಕ್ಕು ಇರಲಿಲ್ಲ. ಆದರೆ ಭಾರತ ದೇಶದಲ್ಲಿ ಸಂವಿಧಾನದ ಮೂಲಕ ಹೆಣ್ಣು-ಗಂಡು, ಬಡವ-ಶ್ರೀಮಂತ ಎಂಬ ಯಾವ ತಾರತಮ್ಯ ಮಾಡದೇ ಎಲ್ಲರಿಗೂ ಮತದಾನ ಹಕ್ಕನ್ನು ನೀಡಲಾಗಿದೆ. ದೇಶಕ್ಕೆ ಬೇಕಾದ ಉತ್ತಮ ಸರಕಾರ ರಚಿಸುವ ಜವಾಬ್ದಾರಿ ಮತದಾನ ಹಕ್ಕು ಹೊಂದಿರುವ ಪ್ರತಿ ನಾಗರಿಕರ ಜವಾಬ್ದಾರಿ ಎಂದರು.

ಪ್ರಾಸ್ತಾವಿಕ ಮಾತನಾಡಿದ ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎಸ್‌. ಪೂಜೇರಿ, ಪ್ರತಿ ವರ್ಷ ವಿಶೇಷ ಘೋಷಣೆಯೊಂದಿಗೆ ಮತದಾರರ ದಿನ ಆಚರಿಸಲಾಗುತ್ತಿದೆ. ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಮತದಾರರ ಸಾಕ್ಷರತೆ ಅಂಗವಾಗಿ ದೇಶದ 6.50 ಲಕ್ಷ ಸ್ಥಳಗಳಲ್ಲಿ ಹಾಗೂ 10 ಲಕ್ಷ ಮತಗಟ್ಟೆಗಳಲ್ಲಿ ಈ ದಿನ ಆಚರಿಸಲಾಗುತ್ತಿದೆ. ದೇಶದಲ್ಲಿ 18 ರಿಂದ 24 ವರ್ಷದ ವಯೋಮಾನದ 25 ಕೋಟಿ ಯುವ ಮತದಾರರಿದ್ದು, ಯುವ ಮತದಾರ ಸೇರಿದಂತೆ ಎಲ್ಲರೂ ಕಡ್ಡಾಯ ಮತದಾನ ಮಾಡುವ ಮೂಲಕ ಭವ್ಯ ಭಾರತ ನಿರ್ಮಿಸುವಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್‌ ಮೋಹನಕುಮಾರಿ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಮತದಾರರ ದಿನಾಚರಣೆ ನಿಮಿತ್ತ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹಮ್ಮಿಕೊಂಡಿದ್ದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ, ಕಿರು ನಾಟಕ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅತ್ಯುತ್ತಮ ನೋಡಲ್‌ ಅಧಿಕಾರಿಗಳಾದ ಎಂ.ಬಿ. ರಜಪೂತ, ಎಂ.ಎಸ್‌. ಮುನವಳ್ಳಿ, ಚಿದಾನಂದ ಆನೂರ ಹಾಗೂ ಅತ್ಯುತ್ತಮ ಬಿಎಲ್‌ಒ ಎನ್‌.ಎಲ್‌. ಅರವತ್ತು ಅವರನ್ನು ಸನ್ಮಾನಿಸಲಾಯಿತು.

ವಯೋವೃದ್ಧ ಮತದಾರರಾದ ಕಸ್ತೂರಿ ಶಟಗಾರ, ರುದ್ರಪ್ಪ ಕಲಶಟ್ಟಿ, ಶಾರದಾಬಾಯಿ ಮಸಳಿ, ಸಾಹೇಬಗೌಡ ಗೌಡರ ಮತ್ತು ಕೌಶಲ್ಯ ಗೌಡರ ಅವರನ್ನು ಸನ್ಮಾನಿಸಲಾಯಿತು. ಇದೇ ಮೊದಲ ಬಾರಿಗೆ ಮತದಾನದ ಹಕ್ಕು ಪಡೆದಿರುವ ಯುವ ನವ ಮತದಾರರು, ವಿಕಲಚೇತನ ಮತದಾರರಿಗೆ ಮತದಾರರ ಗರುತು ಪತ್ರ ವಿತರಿಸಲಾಯಿತು.

ಜಿಪಂ ಸಿಇಒ ಗೋವಿಂದರೆಡ್ಡಿ, ಎಎಸ್ಪಿ ರಾಮ ಅರಿಸಿದ್ದಿ, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆನ್ನೂರ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ವೇದಿಕೆಯಲ್ಲಿದ್ದರು. ವೀರೇಶ ವಾಲಿ ಪ್ರಾರ್ಥಿಸಿದರು. ಎಚ್‌.ಎ. ಮಮದಾಪುರ ನಿರೂಪಿಸಿದರು. ವರ್ಧಾ ನೀಲಗಾರ ಅವರು ಜೀವನ ಸಾಧನೆ ಕುರಿತು ಕಿರು ಭಾಷಣ ಮಾಡಿದರು. ಇದಕ್ಕೂ ಮುನ್ನ ನಗರದ ಗಾಂಧೀಜಿ  ವೃತ್ತದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಮತದಾರರ ಮಹತ್ವದ ಕುರಿತು ಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಔದ್ರಾಮ ಚಾಲನೆ ನೀಡಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.