ಗುರುಸಿದ್ಧಪ್ಪನವರ ಸೇವೆ ಅವಿಸ್ಮರಣೀಯ

ಕಿನ್ನಾಳ್‌ ಪೊರಮ್ಮಾಂಬೆ ಗುರುಸಿದ್ದಪ್ಪ ಪ್ರೌಢಶಾಲೆ ಸುವರ್ಣ ಮಹೋತ್ಸವಗಮನಸೆಳೆದ ಮೆರವಣಿಗೆ-ಸ್ಮರಣ ಸಂಚಿಕ

Team Udayavani, Jan 26, 2020, 1:43 PM IST

26-January-17

ಹಗರಿಬೊಮ್ಮನಹಳ್ಳಿ: ಸಂಘಸಂಸ್ಥೆಗಳ ಅಭಿವೃದ್ಧಿಯಿಂದ ಶೈಕ್ಷಣಿಕ ಪ್ರಗತಿ ಕಾಣಬಹುದು ಎಂದು ಜಗದ್ಗುರು ಡಾ| ಸಂಗನಬಸವ ಮಹಸ್ವಾಮೀಜಿ ತಿಳಿಸಿದರು. ತಾಲೂಕಿನ ತಂಬ್ರಹಳ್ಳಿ ಕಿನ್ನಾಳ್‌ ಪೊರಮ್ಮಾಂಬೆ ಗುರುಸಿದ್ದಪ್ಪ ಪ್ರೌಢಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಅವರು ಶನಿವಾರ ಮಾತನಾಡಿದರು.

ಕಿನ್ನಾಳ್‌ ಗುರುಸಿದ್ದಪ್ಪನವರ ಸೇವೆ ಅವಿಸ್ಮರಣೀಯ. ಹಂಪಿ ಮಠದಿಂದ ಗುರುಸಿದ್ದಪ್ಪನವರ ಹೆಸರಿನಲ್ಲಿ 1ಲಕ್ಷ ರೂ. ಠೇವಣಿ ಇಟ್ಟು ಬರುವ ಬಡ್ಡಿ ಮೊತ್ತವನ್ನು ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕಪಡೆದ ಮಕ್ಕಳಿಗೆ ಪ್ರತಿವರ್ಷ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿವಿ ಸಂಘದವರು ಗ್ರಾಮದಲ್ಲಿ ಡಿಗ್ರಿ ಕಾಲೇಜು ಪ್ರಾರಂಭಿಸದಿದ್ದರೆ ನಮ್ಮ ಮಠದಿಂದ ಇಲ್ಲಿ ಡಿಗ್ರಿ ಕಾಲೇಜು ಪ್ರಾರಂಭಿಸುತ್ತೇವೆ. ಈ ಭಾಗದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ದೊರಕಲಿ ಎಂದರು.

ಜಗದ್ಗುರು ಡಾ| ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿವಿ ಸಂಸ್ಥೆಗೆ ನೆರವು ನೀಡಿದ ಕುಟುಂಬದ ತ್ಯಾಗವನ್ನು ಸ್ಮರಿಸಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಚಿಂತನೆ ನಡೆಯಬೇಕು. ಹಾನಗಲ್‌ ಕುಮಾರಸ್ವಾಮೀಜಿ ಅನ್ನದಾನಕ್ಕಿಂತ ವಿದ್ಯಾದಾನ ಶ್ರೇಷ್ಠ ಎಂದಿದ್ದಾರೆ. ಪ್ರತಿ ಸ್ಥಳದಲ್ಲಿ ಗೌರವ ಸಿಗಬೇಕೆಂದರೆ ವಿದ್ಯೆ ಅತಿಮುಖ್ಯವಾದುದು ಎಂದರು.

ಬಳ್ಳಾರಿ ಸಂಸದ ವೈ. ದೇವೆಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಸದರ ಅನುದಾನವನ್ನು ಸಂಸ್ಥೆಯ ಪೂರಕ ಬೆಳವಣಿಗೆಗೆ ನೀಡಲಾಗುವುದು. ದಿ. ಕಿನ್ನಾಳ್‌ ಗುರುಸಿದ್ದಪ್ಪನವರ ಸೇವಾ ಮನೋಭಾವ ಮಾದರಿಯಾಗಿದೆ. ಶಿಕ್ಷಣಕ್ಕೆ ನೀಡುವ ದಾನ ಇಡೀ ಜಗತ್ತನ್ನು ಬೆಳಗುವುದು ಎಂದರು.

ಅಖೀಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ಕಿನ್ನಾಳ್‌ ಗುರುಸಿದ್ದಪ್ಪನವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ದಾನಧರ್ಮದ ಗುಣ ಎಲ್ಲರಿಗೂ ಬರಬೇಕು. ಕಿನ್ನಾಳ್‌ ಗುರುಸಿದ್ದಪ್ಪನವರು ವಿವಿ ಸಂಘಕ್ಕೆ ಅಂದು ಭೂಮಿ ದಾನ ಮಾಡದಿದ್ದರೆ ತಂಬ್ರಹಳ್ಳಿಯಲ್ಲಿ ಸಂಸ್ಥೆಯ ಶಾಲೆ ಪ್ರಾರಂಭವಾಗುತ್ತಿರಲಿಲ್ಲ. ಅವರು ಸಂಘದೊಂದಿಗೆ ನಿರಂತರ ಒಡನಾಟ ಹೊಂದಿ ತಮ್ಮ ದಾರಾಳ ಗುಣದಿಂದ ದಾನ ಮಾಡಿದ್ದು ನಿಜಕ್ಕೂ ಶ್ಲಾಘನೀಯ. ಅವರ ಜೊತೆ ಅಕ್ಕಿ ಕೊಟ್ರಪ್ಪ, ನಾಗನಗೌಡ್ರು ಸಂಘದ ಪದಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ಗ್ರಾಮಕ್ಕೆ ಶಾಲೆಯನ್ನು ತಂದರು ಎಂದು ತಿಳಿಸಿದರು.

ವಿವಿ ಸಂಘದ ಅಧ್ಯಕ್ಷ ಉಡೇದ ಬಸವರಾಜ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಅಧ್ಯಕ್ಷ ಬಿ.ವಿ. ಬಸವರಾಜ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ದಾನಿಗಳ ವಂಶದ ವಕೀಲ ಕಿನ್ನಾಳ ಶಿವಾನಂದ ಪ್ರಾಸ್ತಾವಿಕವಾಗಿ ನುಡಿದರು. ಮುಖ್ಯಗುರು ಕೆ.ವಿ.ಲೋಕೇಶ್‌ ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕ ಎಂ.ಎಸ್‌.ಕಲಗುಡಿ ದಾನಿಗಳ ಪರಿಚಯ ಮಾಡಿದರು. ದಾನಿ ಅಕ್ಕಿ ಕೊಟ್ರಪ್ಪ, ಜಿಪಂ ಮಾಜಿ ಸದಸ್ಯ ಬಾವಿ ಬೆಟ್ಟಪ್ಪ, ಸಂಘದ ಮಾಜಿ ಅಧ್ಯಕ್ಷ ವಕೀಲ ಬಿಡ್ಡಪ್ಪ ಮಾತನಾಡಿದರು.

ವಿವಿ ಸಂಘದ ಪದಾ ಧಿಕಾರಿಗಳಾದ ಚೋರನೂರು ಕೊಟ್ರಪ್ಪ, ವೀರಭದ್ರಶರ್ಮ, ವೀರೇಶಗೌಡ, ಕೋಳೂರು ಮಲ್ಲಿಕಾರ್ಜುನಗೌಡ, ಜಿಪಂ ಮಾಜಿ ಸದಸ್ಯರಾದ ಎಚ್‌.ಬಿ. ನಾಗನಗೌಡ್ರು, ಅಕ್ಕಿ ತೋಟೇಶ್‌, ತಾಪಂ ಸದಸ್ಯ ಪಿ. ಕೊಟ್ರೇಶ, ಗ್ರಾಪಂ ಅಧ್ಯಕ್ಷ ಮಡಿವಾಳರ ಕೊಟ್ರೇಶ, ಸಂಘದ ಕರಿಬಸವರಾಜ ಬದಾಮಿ, ಕಿನ್ನಾಳ್‌ ಬಸವರಾಜ, ಎಸ್‌. ಗುರುಬಸವರಾಜ, ಟಿ.ಜಿ. ದೊಡ್ಡಬಸಪ್ಪ, ಮಲ್ಲಿಕಾರ್ಜುನ ರೆಡ್ಡಿ, ಗಂಗಾಧರ, ಕೊಳ್ಳಿ ಶೇಷರೆಡ್ಡಿ, ಗೌರಜ್ಜನವರ ಬಸವರಾಜಪ್ಪ, ಬಿಇಒ ಶೇಖರಪ್ಪ ಹೊರಪೇಟೆ, ಪಿಎಸ್‌ಐ ಸರಳ, ಬಣಕಾರ ತೋಟಪ್ಪ, ಗುಡ್ಡದ ಗಿರಿಧರ್‌, ನಿವೃತ್ತ ಶಿಕ್ಷಕರಾದ ಬಿ.ಕೆ.ನಾಲ್ವಾಡ, ಸುಭಾಷಶ್ಚಂದ್ರ, ಅಶೋಕ ಚವ್ಹಾಣ, ಶಾಲೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅಕ್ಕಿ ಶಿವಕುಮಾರ ಸ್ವಾಗತಿಸಿದರು. ಉಪನ್ಯಾಸಕ ಜಗದೀಶ, ಶಿಕ್ಷಕಿ ಶೈಲಜಾ ನಿರೂಪಿಸಿದರು. ಸುವರ್ಣ ಮಹೋತ್ಸವದ ವಿಜೃಂಭಣೆ ಮೆರವಣಿಗೆ ಕಾರ್ಯಕ್ರಮಕ್ಕೆ ಶಾಸಕ ಭೀಮಾನಾಯ್ಕ ಚಾಲನೆ ನೀಡಿದರು. ಇದೇ ವೇಳೆ ಕಿಂಡರ್‌ ಗಾರ್ಟನ್‌ ಶಾಲಾ ಕಟ್ಟಡ ಶಂಕುಸ್ಥಾಪನೆಯನ್ನು ಸಂಸದ ವೈ.ದೇವೆಂದ್ರಪ್ಪ ನೆರವೇರಿಸಿದರು. ಸುವರ್ಣ ಮಹೋತ್ಸವದ ಉದಯವಾಣಿ ವಿಶೇಷ ಪುರವಣಿಯನ್ನು ನಂದಿಪುರ ಮಹೇಶ್ವರ ಸ್ವಾಮೀಜಿ ಬಿಡುಗಡೆಗೊಳಿಸಿದರು. ಊಟದ ವ್ಯವಸ್ಥೆಯನ್ನು ಎಬಿಟಿಎಂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರುನಿರ್ವಹಿಸಿದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.