ದೇವರ ಮನೆ ದೇವಾಲಯಲ ಹೊಯ್ಸಳರ ಕಾಲದ್ದು

ಲೇಖಕ ಡಾ| ಸಂಪತ್‌ ಬೆಟ್ಟಗೆರೆ ಅಭಿಮತ

Team Udayavani, Jan 26, 2020, 5:40 PM IST

26-January-29

ಮೂಡಿಗೆರೆ: ಬಣಕಲ್‌ ಹೋಬಳಿಯಲ್ಲಿರುವ ದೇವರಮನೆ ದೇಗುಲ ಕಲ್ಲಿನ ರಚನೆಯನ್ನು ಪ್ರಧಾನವಾಗಿ ಹೊಂದಿರುವ ಪ್ರಾಚೀನ ಕಾಲಘಟ್ಟದ ದೇಗುಲವನ್ನು ಹೊಂದಿದೆ. ಇಲ್ಲಿ ಕಾಲಭೈರವನ ಆರಾಧನೆಯನ್ನು ಹಲವಾರು ತಲೆಮಾರುಗಳಿಂದ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿನ ದೇವಾಲಯವನ್ನು ಮೂಲತಃ ದ್ರಾವಿಡ ಶೈಲಿ ಅನುಸರಿಸಿ ವಿಶೇಷವಾಗಿ ನಿರ್ಮಾಣ ಮಾಡಲಾಗಿದೆ ಎಂದು ಲೇಖಕ ಡಾ| ಸಂಪತ್‌ ಬೆಟ್ಟಗೆರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಇಳಿಸಂಜೆ ದೇವರಮನೆ ಪರಿಸರದಲ್ಲಿ ಹಾಸನ ಆಕಾಶವಾಣಿ ಕೇಂದ್ರ ಏರ್ಪಡಿಸಿದ್ದ “ವಾರಕ್ಕೊಂದು ತಾಣ’ ವಿಶೇಷ ನೇರಪ್ರಸಾರದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೊಯ್ಸಳರ ವಾಸ್ತು ಶಿಲ್ಪವು ದ್ರಾವಿಡ ಮತ್ತು ಆರ್ಯಶೈಲಿ ಎರಡನ್ನೂ ಅನುಸರಿಸಿದೆ. ಅದರಲ್ಲಿ ರಾಮಾಯಣ ಮತ್ತು ಮಹಾಭಾರತದ ದೃಶ್ಯಾವಳಿಗಳು, ನರ್ತಿಸುತ್ತಿರುವ ಶಿಲಾಬಾಲಿಕೆಯರ ಚಿತ್ರ ಇರುತ್ತದೆ. ಈ ವಾಸ್ತುಶಿಲ್ಪ ದೇವರ ಮನೆ ದೇವಾಲಯದ ಪ್ರವೇಶ ದ್ವಾರದ ಪ್ರಾಂಗಣದಲ್ಲಿದೆ. ಜೊತೆಗೆ ದೇವಾಲಯದ ಹಜಾರದ ಮೇಲಿನ ಚಪ್ಪಟೆಯಾದ ಚಾವಣಿ, ಗರ್ಭಗುಡಿಯ ಮೇಲೆ ಸಮತಟ್ಟಾದ ಅಂತಸ್ತುಗಳಿಂದ ಕೂಡಿದ ಶಿಖರ, ದ್ವಾರಪಾಲಕ ಶಿಲ್ಪಗಳು, ಪ್ರಧಾನ ಗುಡಿಯ ಸುತ್ತ ಪರಿವಾರ ದೇವತೆಗಳನ್ನು ಗಮನಿಸಿದಾಗ ಹೊಯ್ಸಳರ ಸಾಂಸ್ಕೃತಿಕ ಛಾಯೆ ಪ್ರಧಾನವಾಗಿ ಅರಿವಿಗೆ ಬರುತ್ತದೆ ಎಂದರು.

ಬಲ್ಲಾಳ ಎಂಬ ದೊರೆ ಶತ್ರುಗಳಿಂದ ರಕ್ಷಣೆ ಪಡೆಯುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದನೆಂದು ಪೂರ್ವಿಕರಿಂದ ಕೇಳಿ ತಿಳಿದ ಸ್ಥಳ ಪುರಾಣವನ್ನು ಇಲ್ಲಿನ ಸ್ಥಳೀಯರು ಹೇಳುತ್ತಾರೆ. ಆದ್ದರಿಂದ ಇದು ಹೊಯ್ಸಳ ಕಾಲದ ದೇವಾಲಯ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.

ದೇವರ ಮನೆ ಸಮೀಪದ ಕೊಟ್ರಕೆರೆ ಗ್ರಾಮದ ಸಾಂಸ್ಕೃತಿಕ ಪರಿಚಾರಕಿ ಶಾಂತಲಾ ನಾಗೇಶ್‌ ಅವರು ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ದೇವರ ಮನೆ ಪ್ರಾಕೃತಿಕವಾಗಿ ಬಹಳ ಮಹತ್ವ ಹೊಂದಿದೆ. ಇದು ಪಶ್ಚಿಮಘಟ್ಟದ ಪ್ರಮುಖ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚು ಮಳೆ ಬೀಳುವುದರಿಂದ ಸುತ್ತಮುತ್ತಲಿನ ರೈತರು ಬೆಳೆ ಹಾನಿಯಂತಹ ಸಮಸ್ಯೆಗಳನ್ನು ಎದುರಿಸಬೇಕಾಗಿ ಬರುತ್ತದೆ ಎಂದು ತಿಳಿಸಿದರು.

ದೇವಾಲಯದ ಧರ್ಮದರ್ಶಿ ಹೆಸಗೋಡು ಮದನ್‌ ಹೆಗ್ಗಡೆ ಅವರು ಮಾತನಾಡಿ, ಮೂಡಿಗೆರೆ ತಾಲೂಕಿನ ನಮ್ಮುಡುಗ್ರು ವಾಟ್ಸಪ್‌ ತಂಡದವರು ಇಲ್ಲಿನ ಪರಿಸರದಲ್ಲಿ ಪ್ರವಾಸಿಗರು ಎಸೆದು ಹೋಗಿದ್ದ ಘನತ್ಯಾಜ್ಯವನ್ನು ಸ್ವಯಂಪ್ರೇರಿತರಾಗಿ ಸ್ವತ್ಛ ಮಾಡಿದ್ದನ್ನು ತಿಳಿಸಿದಾಗ, ಆಕಾಶವಾಣಿ ಅ ಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು.

ಸತತ ಒಂದು ಗಂಟೆಯ ಈ ನೇರ ಪ್ರಸಾರವನ್ನು ರಾಜ್ಯಾದ್ಯಂತ ಶೋತೃಗಳು ಆಲಿಸಿದರು. ಹಾಸನ ಆಕಾಶವಾಣಿ ಕೇಂದ್ರದ ಎಂ.ಶಿವಕುಮಾರ್‌, ಜಿ.ಡಿ.ರಮೇಶ್‌, ಮೋಹನಾಕ್ಷಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಅರ್ಚಕ ನಾಗಭೂಷಣ ಭಟ್‌, ಹೆಸಗೋಡು ಅರುಣ್‌ ಕುಮಾರ್‌, ಸುನಿಲ್‌, ಹರ್ಷ, ಉಪೇಂದ್ರ ಮುಂತಾದವರಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.