3 ತಿಂಗಳು ಕಳೆದರೂ ಬಿಡುಗಡೆಯಾಗದ ಅನುದಾನ

ರಾಜ್ಯದ 24 ಜಿಲ್ಲೆಗಳಲ್ಲಿ ಗೇರು ಕೃಷಿ ವಿಸ್ತರಣೆ ಗುರಿ ನಿಗದಿ

Team Udayavani, Jan 27, 2020, 5:55 AM IST

Cashew-Fruit-Agriculture

ಉಡುಪಿ: ಗೇರು ಕೃಷಿ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 200 ಹೆಕ್ಟೇರ್‌ ಸೇರಿದಂತೆ ರಾಜ್ಯದಲ್ಲಿ ಒಟ್ಟು 1,500 ಹೆಕ್ಟೇರ್‌ ಪ್ರದೇಶದಲ್ಲಿ ಗೇರು ಕೃಷಿ ಅನುಷ್ಠಾನಗೊಳಿಸಲು ತೋಟಗಾರಿಕೆ ಇಲಾಖೆ ಮಾರ್ಗಸೂಚಿ ಹೊರಡಿಸಿ ಮೂರು ತಿಂಗಳು ಕಳೆದರೂ ಅನುದಾನ ಬಿಡುಗಡೆ ಆಗದೆ ಯೋಜನೆ ಕುಂಟುತ್ತಿದೆ.
ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದ.ಕ., ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 100 ಹೆಕ್ಟೇರ್‌, ಚಿಕ್ಕಬಳ್ಳಾಪುರ, ಹಾವೇರಿ, ಮಂಡ್ಯ, ಧಾರವಾಡ, ಕೋಲಾರ ಜಿಲ್ಲೆಗಳಲ್ಲಿ ತಲಾ 49 ಹೆಕ್ಟೇರ್‌, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ 39 ಹೆಕ್ಟೇರ್‌ ಸೇರಿದಂತೆ ಒಟ್ಟು 1,500 ಹಕ್ಟೇರ್‌ ಪ್ರದೇಶದಲ್ಲಿ ಗೇರು ಕೃಷಿ ಅನುಷ್ಠಾನದ ಗುರಿ ನೀಡಿದೆ.

ಯೋಜನೆಯ ಉದ್ದೇಶ
ಗೇರು ಉತ್ಪಾದನೆ ಹೆಚ್ಚಿಸುವ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಮುಖ್ಯ ಉದ್ದೇಶ. ಆಯಾ ಪ್ರದೇಶ ಮತ್ತು ಹವಾಗುಣಕ್ಕೆ ಹೊಂದುವ ಕಸಿ ಗಿಡ ನಾಟಿ ಮಾಡುವುದು ಹಾಗೂ ಒಣ ಬೇಸಾಯ ಪದ್ಧತಿಯಲ್ಲಿ ಗೇರು ಕೃಷಿ ವಿಸ್ತರಿಸಲು ಪ್ರೋತ್ಸಾಹ ನೀಡುವುದು ಸೇರಿವೆ.

ಶೇ. 50ರಷ್ಟು ಸಹಾಯಧನ
ಕಾರ್ಯಕ್ರಮದಡಿ ಸಾಮಾನ್ಯ ಫ‌ಲಾನುಭವಿಗೆ ಒಂದು ಘಟಕಕ್ಕೆ (1 ಹೆಕ್ಟೇರ್‌) ತಗಲುವ ಒಟ್ಟಾರೆ ವೆಚ್ಚದ ಶೇ. 50ರಷ್ಟು ಅಂದರೆ, ಪ್ರತಿ ಹೆಕ್ಟೇರ್‌ಗೆ ಗರಿಷ್ಠ 22,539 ರೂ. ಸಹಾಯಧನ ನೀಡಲಾಗುತ್ತದೆ. ಪ.ಜಾತಿ, ಪಂಗಡದವರಿಗೆ ಶೇ. 90ರಷ್ಟು ಅಂದರೆ, ಪ್ರತಿ ಹೆಕ್ಟೇರ್‌ಗೆ ಗರಿಷ್ಠ 40,569 ರೂ.ನಷ್ಟು ಸಹಾಯಧನ ನೀಡಲಾಗುತ್ತದೆ. ಸಹಾಯ ಧನವನ್ನು 0.2ರಿಂದ 4 ಹೆಕ್ಟೇರ್‌ ವರೆಗೆ ನೀಡಬಹುದಾಗಿದೆ. ಇದರಲ್ಲಿ 12 ಸಾವಿರ ರೂ. ಮೊತ್ತವನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಎನ್‌ಆರ್‌ಇಜಿ ಅನುದಾನದ ಮೂಲಕ ಭರಿಸಲಾಗುತ್ತದೆ. ರೈತರಿಗೆ ಅಗತ್ಯ ತರಬೇತಿಯನ್ನು ಇಲಾಖೆ ನೀಡಲಿದೆ.

ಹಣ ಬಾರದೆ ಹಿನ್ನಡೆ
ರಾಜ್ಯ ಸರಕಾರ ಗೇರು ಪ್ರದೇಶ ವಿಸ್ತರಣೆಗಾಗಿ 2019ರ ಅ. 30ರಂದು 24 ಜಿಲ್ಲೆಗಳ ತೋಟಗಾರಿಕೆ ಇಲಾಖೆಗಳಿಗೆ ಮಾರ್ಗಸೂಚಿ ರವಾನಿಸಿತ್ತು. ಆದರೆ ಸೂಕ್ತ ಅನುದಾನವಿಲ್ಲದೆ ಯೋಜನೆ ಅನುಷ್ಠಾನವಾಗಿಲ್ಲ. ಮುಂದಿನ ವರ್ಷ ಅನುದಾನ ಕಾದಿರಿಸಿ ಯೋಜನೆ ಕಾರ್ಯರೂಪಕ್ಕೆ ತರುವ ಕುರಿತು ಚಿಂತನೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಿಲ್ಲೆ ಪ್ರಸ್ತುತ ಗೇರು ಬೆಳೆ (ಹೆ.)
ದಕ್ಷಿಣ ಕನ್ನಡ 26,000
ಉಡುಪಿ 17,000

ಗೇರು ಕೃಷಿ ಪ್ರದೇಶ ವಿಸ್ತರಣೆ ಯೋಜನೆಯಡಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತಲಾ 100 ಹೆಕ್ಟೇರ್‌ ಗರಿಷ್ಠ ವಿಸ್ತರಣೆಯ ಗುರಿ ನೀಡಲಾಗಿದೆ.

ಜಿಲ್ಲೆಯ ಗೇರು ಪ್ರದೇಶ ವಿಸ್ತರಣೆಗೆ ಸಂಬಂಧಿಸಿದಂತೆ ಕಾರ್ಯ ಯೋಜನೆ ಸಿದ್ಧವಾಗಿದೆ. ಹಣ ಬಿಡುಗಡೆಯಾದ ತತ್‌ಕ್ಷಣ ಯೋಜನೆ ಕಾರ್ಯರೂಪಕ್ಕೆ ಬರಲಿದೆ.
 - ಭುವನೇಶ್ವರಿ, ಉಪನಿರ್ದೇಶಕಿ, ತೋಟಗಾರಿಕೆ ಇಲಾಖೆ ಉಡುಪಿ

 ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.