ಬರದ ಜಿಲ್ಲೆಯಲ್ಲಿ ಅಭಿವೃದ್ಧಿ ಶಕೆ ಶುರು

ಗಣರಾಜ್ಯೋತ್ಸವದಲ್ಲಿ ಸಂವಿಧಾನ ಪೀಠಿಕೆ ಓದಿ ಗೌರವ ಸೂಚಿಸಿದ ವಿಜಯಪುರದ ನಾಗರಿಕರು

Team Udayavani, Jan 27, 2020, 1:40 PM IST

27-Janauary-15

ವಿಜಯಪುರ: ನಗರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ರಾಷ್ಟ್ರಧ್ವಜಾರೋಹ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು

ವಿಜಯಪುರ: ಅಭಿವೃದ್ಧಿಯಲ್ಲಿ ಹಿಂದುಳಿದಿದೆ, ನಿರಂತರ ಮಳೆ ಇಲ್ಲದೇ ಶಾಶ್ವತ ಬರದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ಅಭಿವೃದ್ಧಿ ಶಕೆ ಆರಂಭವಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ ನೇತೃತ್ವದ ಸಮಿತಿ ರಚಿಸಿದ ಸಂವಿಧಾನದಲ್ಲಿ ಜಾರಿ ಬಂದಿರುವ ಕಾರಣ ದೇಶದ ನಾಗರಿಕರು, ನ್ಯಾಯ, ಸ್ವಾತಂತ್ರ್ಯ , ಸಮಾನತೆ, ಲಿಂಗ ಮತ್ತು ಆರ್ಥಿಕ ಸಮಾನತೆ ಭದ್ರಪಡಿಸಿಕೊಳ್ಳಲು ಅವಕಾಶ ಪಡೆಯಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಹೇಳಿದರು.

ನಗರದ ಅಂಬೇಡ್ಕರ್‌ ಕ್ರೀಡಾಂಗಣ ದಲ್ಲಿ 71ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿ ವಿವಿಧ ಕವಾಯತ್‌ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ಹಾಗೂ ಜವಾಬ್ದಾರಿವನ್ನು ನೀಡಿದೆ. ನನಗೆ ದೇಶ ಏನು ಮಾಡಿದೆ ಎಂದು ಕೇಳಿಕೊಳ್ಳುವ ಮುನ್ನ, ನಾನು ದೇಶಕ್ಕಾಗಿ ಏನು ಮಾಡುತ್ತಿದ್ದೇನೆ ಎಂಬುವುದನ್ನು ಪ್ರತಿಯೊಬ್ಬರೂ ಪ್ರಶ್ನಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಸಾಂಸ್ಕೃತಿಕ, ಸಾಮಾಜಿಕ, ಭಾಷೆ ಹಾಗೂ ಧಾರ್ಮಿಕತೆ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ವಿಶ್ವದ ಬಹುದೊಡ್ಡ ಶಕ್ತಿ ರಾಷ್ಟ್ರ ಎನಿಸಿರುವ ಭಾರತದ ಲಿಖೀತವಾದ ಪ್ರಜಾಪ್ರಭುತ್ವವಾಗಿ ಸಂವಿಧಾನ ಜಾಗತ್ತಿಗೆ ಮಾದರಿಯಾಗಿದೆ. ಮಹಾತ್ಮ ಗಾಂಧೀಜಿ, ನೇತಾಜಿ, ನೆಹರು, ಡಾ| ಬಿ.ಆರ್‌. ಅಂಬೇಡ್ಕರ್‌ ಅವರಂಥ ಮಹಾತ್ಮರಿಂದ ದಕ್ಕಿರುವ ಈ ಸ್ವಾತಂತ್ರ್ಯ ಹಾಗೂ ಸಂವಿಧಾನ ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದರು.

ಸರ್ಕಾರ ಮತ್ತು ಜನರ ಸಹಭಾಗಿತ್ವವು ಉತ್ತಮ ರಾಷ್ಟ್ರವನ್ನು ನಿರ್ಮಿಸಿದರೆ ರಾಷ್ಟ್ರಗಳ ಸಹಭಾಗಿತ್ವವು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ. ಈ ರೀತಿಯಾಗಿ ಕುಟುಂಬ ರಾಷ್ಟ್ರ ಮತ್ತು ಪ್ರಪಂಚವನ್ನು ಹಣೆಯುವದು ಮತ್ತು ಪ್ರಪಂಚವನ್ನು ಕುಟುಂಬವಾಗಿ ಪರಿಗಣಿಸಲು ಪ್ರಮುಖ ಕಾರಣವಾಗಿದೆ. ಮುಕ್ತ ಸಂವಹನ, ಪ್ರಾಮಾಣಿಕ ಸಂಭಾಷಣೆ ಸಹಾನುಭೂತಿಯಿಂದ ಪಾಲುದಾರಿಕೆ ಹೆಚ್ಚಿಸಲಾಗುತ್ತದೆ. ಜನರ ಕಲ್ಯಾಣಕ್ಕಾಗಿ ಕರ್ತವ್ಯವನ್ನು ಪಾಲಿಸುವ ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಸಮಾಜ ಹೆಚ್ಚಿನ ಗೌರವ ತೋರಿಸುತ್ತ ಬಂದಿದೆ.

ಇಂಥ ಸಂದರ್ಭದಲ್ಲಿ ಬರ ಪೀಡಿತ ವಿಜಯಪುರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ನೀರಾವರಿ ಕ್ಷೇತ್ರ ವಿಸ್ತಾರಗೋಳ್ಳುತ್ತಿದೆ. ಕೃಷಿಕರ ಬದುಕು ಹಾಗೂ ಜಿಲ್ಲೆಯ ಜನರ ಆರ್ಥಿಕ ಮಟ್ಟ ಸುಧಾರಿಸುತ್ತಿದೆ. ಇದರಿಂದ ಬರದ ಹಿನ್ನೆಲೆಯಲ್ಲಿ ಉದ್ಯೋಗ ಅರಸಿ ಮುಂಬೈ, ಮಂಗಳೂರು, ಗೋವಾ ಬೆಂಗಳೂರು ಸೇರಿದಂತೆ ವಿವಿಧೆಡೆ ಜನರು ಗುಳೆ ಹೋಗುವುದು ತಪ್ಪುತ್ತಿದೆ. ನಗರೀಕರಣದತ್ತ ಮುಖ ಮಾಡುವ ಬದಲು ಜಿಲ್ಲೆಯ ಜನರು ಇದೀಗ ಸ್ವಾವಲಂಬಿ ಜೀವನ ನಡೆಸಲು ನೀರಾವರಿ ಸಹಕಾರಿ ಆಗಿದೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಹಲವು ಕಾರಣಗಳಿಂದ ಉದ್ಯೋಗ ಅವಕಾಶಗಳ ಕೊರತೆಯ ಕಾರಣದಿಂದ ಹತಾಶ, ಅತೃಪ್ತಿ, ಕೋಪ, ಆತಂಕ, ಒತ್ತಡ ಮತ್ತು ನಡವಳಿಕೆಯಲ್ಲಿನ ವೈಪರಿತ್ಯಗಳಲ್ಲಿ ವ್ಯಕ್ತವಾಗುತ್ತಿದೆ. ಯುವ ಜನತೆ ಲಾಭದಾಯಕ ಉದ್ಯೋಗ, ಸಮುದಾಯದೊಂದಿಗೆ ಸಕ್ರೀಯವಾಗಿ ತೊಡಗಿಸಿಕೊಂಡು ಪೋಷಕರ ಮಾರ್ಗದರ್ಶನದಲ್ಲಿ ಜೀವನ ನಡೆಸಬೇಕಿದೆ ಎಂದು ಯುವ ಸಮೂಹಕ್ಕೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ 2011ರಲ್ಲಿ ಪ್ರತಿ ಸಾವಿರ ಪುರುಷರಿಗೆ 931 ಮಹಿಳೆಯರು ಇದ್ದು, ಲಿಂಗ ಸಮಾನತೆಯನ್ನು ದೇಶದಲ್ಲಿ ಸಾಧಿಸುವ ದೃಷ್ಟಿಯಿಂದ ಮೊದಲ ಬಾರಿಗೆ 2015ರಲ್ಲಿ ದೇಶದ 100 ಜಿಲ್ಲೆಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಅನುಷ್ಠಾನಗೊಂಡಿದೆ ಎಂದರು.

ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ಕ್ರೀಡಾಂಗಣದಲ್ಲಿ ನೆರೆದ ಎಲ್ಲರೂ ಭಾರತ ಸಂವಿಧಾನದ ಪೀಠಿಕೆ ಓದಿ ಸಂವಿಧಾನಕ್ಕೆ ಗೌರವ ಸೂಚಿಸಿದರು. ಕ್ರೀಡಾಂಗಣದಲ್ಲಿ ವಿವಿಧ ಕವಾಯತು ತಂಡಗಳು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರಿಗೆ ಗೌರವ ವಂದನೆ ಸಲ್ಲಿಸಿದರು. ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ. ಪಾಟೀಲ, ಜಿಪಂ
ಅಧ್ಯಕ್ಷ ಶಿವಲಿಂಗಪ್ಪ ನೇದಲಗಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ಔದ್ರಾಮ, ಎಎಸ್ಪಿ ರಾಮ ಅರಸಿದ್ದಿ, ವೂಡಾ ಅಧ್ಯಕ್ಷ ಶ್ರೀಹರಿ ಗೋಳಸಂಗಿ ಇದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.