ಆಂಧ್ರ ವಿಧಾನ ಪರಿಷತ್‌ ಅಮಾನತಿಗೆ ನಿರ್ಧಾರ

ಜಗನ್‌ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Team Udayavani, Jan 28, 2020, 6:30 AM IST

jagan

ಅಮರಾವತಿ (ಆಂಧ್ರಪ್ರದೇಶ): ಆಂಧ್ರ ಪ್ರದೇಶದಲ್ಲಿ ವಿಧಾನ ಪರಿಷತ್ತನ್ನೇ ರದ್ದು ಪಡಿಸುವ ಮಹತ್ವದ ಮಸೂದೆಯನ್ನು ಇಲ್ಲಿನ ವಿಧಾನಸಭೆ ಸೋಮವಾರ ಅಂಗೀಕರಿಸಿದೆ.

ಇದರೊಂದಿಗೆ ವಿಧಾನ ಪರಿಷತ್‌ ಕೇವಲ 5 ರಾಜ್ಯಗಳಲ್ಲಿ ಮಾತ್ರ ಉಳಿದುಕೊಂಡಂತಾಗಿದೆ.

ವಿಧಾನ ಪರಿಷತ್‌ ಏಕೆ ಬೇಕು?
ಕಳೆದ ತಿಂಗಳು ಆಂಧ್ರ ಮೇಲ್ಮನೆ ಕಲಾಪದಲ್ಲಿ ಮುಖ್ಯ ಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಇಂಥದ್ದೊಂದು ಬೆದರಿಕೆಪೂರ್ಣ ಪ್ರಶ್ನೆ ಕೇಳಿದ್ದರು. ಅದುವೇ ಆ ಮನೆಯ ಕೊನೆಯ ಕಲಾಪವಾಗಿ ಬಿಟ್ಟಿದೆ. ಸೋಮವಾರ ವಿಧಾನಪರಿಷತ್‌ ರದ್ದು ಪಡಿಸುವ ನಿರ್ಧಾರವನ್ನು ಸಂಪುಟ ಅಂಗೀಕರಿಸಿ ದರೆ, ಸಂಜೆ ವಿಧಾನಸಭೆಯಲ್ಲಿ 133-0 ಮತ ಗಳಲ್ಲಿ ಮಸೂದೆಯನ್ನು ಅಂಗೀಕರಿಸಿತು.

ಕಾರಣ ಏನು?
ಆಂಧ್ರದಲ್ಲಿ ರಾಜಧಾನಿಗಳ ವಿಕೇಂದ್ರೀಕರಣ ಸಹಿತ 3 ಪ್ರಮುಖ ಮಸೂದೆಗಳು ಕಳೆದ ಕಲಾಪದಲ್ಲಿ ವಿಧಾನ ಪರಿಷತ್‌ನಲ್ಲಿ ತಿರಸ್ಕೃತ ಗೊಂಡಿದ್ದವು. ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರೂಪಿಸಲು ಜಿದ್ದಿಗೆ ಬಿದ್ದಿರುವ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ನ ಸದಸ್ಯ ಬಲ ಕೇವಲ 9 ಇದ್ದಿದ್ದರಿಂದ ಮಸೂದೆ ಪಾಸಾಗಲಿಲ್ಲ. ಎದುರಾಳಿ ತೆಲುಗು ದೇಶಂ ಪಕ್ಷದ ಸದಸ್ಯರ ಸಂಖ್ಯೆ 28. ಇದರಿಂದ ಕೆರಳಿದ ಮುಖ್ಯಮಂತ್ರಿ ಇಡೀ ಮೇಲ್ಮನೆಯನ್ನೇ ರದ್ದುಪಡಿಸಲು ಮುಂದಾದರು. ವರ್ಷಕ್ಕೆ ಮೇಲ್ಮನೆ ನಿರ್ವಹಣೆಗೆ 60 ಕೋಟಿ ರೂ. ನಷ್ಟ ಎನ್ನುವುದು ಅವರ ವಾದ.

ಹಿಂದೊಮ್ಮೆ ಇಲ್ಲಿ ರದ್ದಾಗಿತ್ತು
ವಿಶೇಷವೆಂದರೆ 1985ರಲ್ಲಿ ಟಿಡಿಪಿ ಸಿಎಂ ಎನ್‌.ಟಿ. ರಾಮರಾವ್‌ ಮೇಲ್ಮನೆಯನ್ನು ರದ್ದು ಪಡಿಸಿದ್ದರು. ವೈ.ಎಸ್‌. ರಾಜಶೇಖರ ರೆಡ್ಡಿ 2007ರಲ್ಲಿ ಮೇಲ್ಮನೆಗೆ ಮತ್ತೆ ಜೀವ ನೀಡಿದ್ದರು.

ವಿಧಾನಪರಿಷತ್‌ ಅಧಿಕಾರವೇನು?
ಭಾರತದ ಸಂಸತ್‌ ವ್ಯವಸ್ಥೆಯಲ್ಲಿ ಮೇಲ್ಮನೆ, ಕೆಳಮನೆ ಎಂಬ ಎರಡು ಸದನಗಳಿವೆ. ಕೆಳಮನೆ ನೇರವಾಗಿ ಜನರಿಂದ ಆಯ್ಕೆಯಾದ ಸದಸ್ಯರಿರುವ ಸದನ. ಮೇಲ್ಮನೆ ಶಾಸಕರಿಂದ, ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಶಾಸಕರಿರುವ ಸದನ. ಸಂಸತ್ತಿನಲ್ಲಿರುವ ರಾಜ್ಯಸಭೆಗೆ ಹೆಚ್ಚಿನ ಅಧಿಕಾರವಿದೆ. ಅಂತಹ ಅಧಿಕಾರ ರಾಜ್ಯಗಳಲ್ಲಿರುವ ವಿಧಾನ ಪರಿಷತ್‌ಗಿಲ್ಲ. ವಿಧಾನ ಪರಿಷತ್‌ನ ಸಲಹೆ, ನಿರ್ಧಾರಗಳನ್ನು ತಿರಸ್ಕರಿಸುವ ಅಧಿಕಾರ ವಿಧಾನಸಭೆಗಿದೆ. ಅಲ್ಲದೆ ಪರಿಷತ್‌ ಸದಸ್ಯರಿಗೆ, ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಹಾಕುವ ಅಧಿಕಾರವಿಲ್ಲ. ಹಾಗೆಯೇ ಸಾಂವಿಧಾನಿಕವಾಗಿ ಪರಿಷತ್‌ ಮಹತ್ವದ ಸ್ಥಾನ ಹೊಂದಿಲ್ಲ.

ಪರಿಷತ್‌ ಇರುವ ರಾಜ್ಯಗಳು
ಬಿಹಾರ (58 ಸ್ಥಾನಗಳು)
ಕರ್ನಾಟಕ (75)
ಮಹಾರಾಷ್ಟ್ರ (78)
ತೆಲಂಗಾಣ (40)
ಉತ್ತರಪ್ರದೇಶ (100)

2010ರಲ್ಲಿ ತಮಿಳುನಾಡಿನಲ್ಲಿ ವಿಧಾನ ಪರಿಷತ್‌ ರದ್ದಾಯಿತು. ಜಮ್ಮು- ಕಾಶ್ಮೀರದಲ್ಲೂ ಪರಿಷತ್‌ ಇತ್ತು. ಆದರೆ ಆ ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿರುವುದರಿಂದ ಅಲ್ಲೂ ಪರಿಷತ್‌ ರದ್ದಾಗಿದೆ. ರಾಜಸ್ಥಾನ, ಅಸ್ಸಾಂ ನಲ್ಲಿ ಮೇಲ್ಮನೆ ಸ್ಥಾಪಿಸುವ ಪ್ರಸ್ತಾವ ಇದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.