ಕೂಲಿ ಪಾವತಿಗೆ ಒತ್ತಾಯಿಸಿ ಗ್ರಾಪಂಗೆ ಮುತ್ತಿಗೆ
Team Udayavani, Jan 28, 2020, 3:05 PM IST
ಕನಕಗಿರಿ: ಕೂಲಿ ಪಾವತಿಸುವಂತೆ ಒತ್ತಾಯಿಸಿ ಕಾರ್ಮಿಕರು ಸೋಮವಾರ ಜೀರಾಳ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಕೂಲಿ ಕಾರ್ಮಿಕ ಯಮನೂರಪ್ಪ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿ 4 ತಿಂಗಳಾದರೂ ಕೂಲಿ ಹಣ ಪಾವತಿಸಿಲ್ಲ. ಕೂಲಿ ಪಾವತಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಲಿಯನ್ನು ನಂಬಿಕೊಂಡಿರುವ ಕುಟುಂಬಗಳ ಕಂಗಾಲಾಗಿವೆ. ಕೂಲಿ ಕಾರ್ಮಿಕರ ಹಣವನ್ನು ಪಾವತಿ ಮಾಡುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.
ಮಲ್ಲಮ್ಮ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ 15 ದಿನ ಕೆಲಸ ಮಾಡಿದ್ದೇವೆ. ಆದರೆ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. ಗ್ರಾಪಂ ಅಧಿ ಕಾರಿಗಳನ್ನು ಕೇಳಿದರೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಹಣ ಪಾವತಿಸಬೇಕೆಂದರು. ಈ ಸಂದರ್ಭದಲ್ಲಿ ರಮೇಶದಾಸ, ಲಕ್ಷ್ಮಣ, ನಾಗಮ್ಮ, ಸಿದ್ದಮ್ಮ, ರಾಮೇಶ್ವರಿ ಸೇರಿದಂತೆ ಜೀರಾಳ ಗ್ರಾಪಂ ವ್ಯಾಪ್ತಿಯ ಕೂಲಿ ಕಾರ್ಮಿಕರು ಇದ್ದರು.
ಉದ್ಯೋಗ ಖಾತ್ರಿ ಯೋಜನೆಯಡಿ ಜೀರಾಳ ಗ್ರಾಪಂನಲ್ಲಿ ನೀಡಲಾಗಿರುವ ಕೆಲಸಕ್ಕೆ ಕೂಲಿ ಪಾವತಿ ಮಾಡದೇ ಇರುವುದು ಗಮನಕ್ಕೆ ಇದೆ. ಕ್ರಿಯಾಯೋಜನೆ ಅನುಮೋದನೆಯಾಗದೇ ಕೆಲಸ ಮಾಡಿದ್ದಾರೆ. ಇದರಿಂದ ತೊಂದರೆಯಾಗಿದೆ. ಕ್ರಿಯಾ ಯೋಜನೆ ಅನುಮೋದನೆಗೆ ಜಿಪಂ ಕಳಿಸಲಾಗಿದೆ. 15 ದಿನಗಳ ಒಳಗಾಗಿ ಹಣ ಪಾವತಿಸಲಾಗುವುದು. –ಚಿದಾನಂದ, ಜಿಪಂ ವಿಭಾಗ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ