ಕಾರ್ತಿಕ್‌ ತ್ಯಾಗಿ ಮ್ಯಾಜಿಕ್‌ ದಾಳಿ; ಭಾರತ ಸೆಮಿಗೆ


Team Udayavani, Jan 28, 2020, 10:47 PM IST

tyagi-magic

ಪೊಚೆಫ್ಸೂಮ್‌ (ದಕ್ಷಿಣ ಆಫ್ರಿಕಾ): ಬ್ಯಾಟಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದರೂ ಬೌಲಿಂಗ್‌ನಲ್ಲಿ ಅಮೋಘ ನಿರ್ವಹಣೆ ದಾಖಲಿಸಿದ ಹಾಲಿ ಚಾಂಪಿಯನ್‌ ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯ ತಂಡವನ್ನು 74 ರನ್ನುಗಳಿಂದ ಸೋಲಿಸಿ ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಸೆಮಿಫೈನಲ್‌ ಹಂತಕ್ಕೇರಿಸಿತು.

ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ತಂಡವು ಆಸ್ಟ್ರೇಲಿಯದ ನಿಖರ ದಾಳಿಗೆ ರನ್‌ ಗಳಿಸಲು ಒದ್ದಾಡಿತು. ಕೊನೆ ಹಂತದಲ್ಲಿ ಅಥರ್ವ ಅಂಕೋಲೆಕರ್‌ ಮತ್ತು ಆರಂಭಿಕ ಯಶಸ್ವಿ ಜೈಸ್ವಾಲ್‌ ಅವರ ಹೋರಾಟದ ಅರ್ಧಶತಕದಿಂದಾಗಿ ಭಾರತ 9 ವಿಕೆಟಿಗೆ 233 ರನ್ನುಗಳ ಸಾಧಾರಣ ಮೊತ್ತ ಪೇರಿಸಿತು.

ಗುರಿ ಸಾಧಾರಣವಾಗಿದ್ದರೂ ಭಾರತ ಉತ್ಕೃಷ್ಟ ಮಟ್ಟದ ಬೌಲಿಂಗ್‌ ದಾಳಿ ಸಂಘಟಿಸಿ ಆಸ್ಟ್ರೇಲಿಯವನ್ನು ಕಟ್ಟಿಹಾಕಲು ಯಶಸ್ವಿಯಾಯಿತು. 4 ರನ್‌ ತಲುಪುವಷ್ಟರಲ್ಲಿ 3 ವಿಕೆಟ್‌ ಕಿತ್ತ ಭಾರತ ಎದುರಾಳಿಗೆ ಪ್ರಬಲ ಹೊಡೆತ ನೀಡಿತು. ಆಬಳಿಕ ಸ್ಯಾಮ್‌ ಫ‌ನ್ನಿಂಗ್‌ ಮತ್ತು ಲಿಯಮ್‌ ಸ್ಕಾಟ್‌ ಭರ್ಜರಿಯಾಗಿ ಆಡಿ ಭಯ ಹುಟ್ಟಿಸಿದರು. ಆದರೆ ಈ ಜೋಡಿ ಮುರಿಯುತ್ತಲೇ ಮತ್ತೆ ಕುಸಿದ ಆಸ್ಟ್ರೇಲಿಯ 43.3 ಓವರ್‌ಗಳಲ್ಲಿ 159 ರನ್ನಿಗೆ ಆಲೌಟಾಗಿ ಶರಣಾಯಿತು.

ನಾಟಕೀಯ ಕುಸಿತ
ಗೆಲ್ಲಲು 234 ರನ್‌ ಗಳಿಸುವ ಗುರಿ ಪಡೆದ ಆಸ್ಟ್ರೇಲಿಯ ಆರಂಭದಲ್ಲಿಯೇ ನಾಟಕೀಯ ರೀತಿಯಲ್ಲಿ ಕುಸಿತ ಕಂಡಿತು. ಇನ್ನೂ ರನ್‌ ಖಾತೆ ತೆರೆಯುವ ಮೊದಲೇ ಮೆಕ್‌ಗುರ್ಕ್‌ ರನೌಟಾ ದರು. ಆಬಳಿಕ ತ್ಯಾಗಿ ಮ್ಯಾಜಿಕ್‌ ದಾಳಿಗೆ 3 ವಿಕೆಟ್‌ ಬೇಗನೇ ಉರುಳಿತು. 17 ರನ್‌ ಗಳಿಸುವಷ್ಟರಲ್ಲಿ ತಂಡ 4 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು.

ಕುಸಿದ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನವನ್ನು ಆರಂಭಿಕ ಫ‌ನ್ನಿಂಗ್‌ ಮತ್ತು ಸ್ಕಾಟ್‌ ಮಾಡಿದರು. ಅವರಿಬ್ಬರು ಆರನೇ ವಿಕೆಟಿಗೆ 81 ರನ್‌ ಪೇರಿಸಿದಾಗ ಭಾರತ ದಿಗಿಲುಗೊಂಡಿತ್ತು. ಆದರೆ ಈ ಜೋಡಿಯನ್ನು ಬಿಷ್ಣೋಯಿ ಮುರಿಯುತ್ತಲೇ ಭಾರತದ ಪಾಳಯದಲ್ಲಿ ನಗು ಬಂತು. 21 ಎಸೆತಗಳ ಅಂತರದಲ್ಲಿ ಕೊನೆಯ 5 ವಿಕೆಟ್‌ ಉರುಳಿದ್ದವು. ಆಸ್ಟ್ರೇಲಿಯದ ನಾಟಕೀಯ ಕುಸಿತಕ್ಕೆ ಕಾರಣರಾದ ಕಾರ್ತಿಕ್‌ ತ್ಯಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಯಶಸ್ವಿ ಅರ್ಧಶತಕ
ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಮಾತ್ರ ಆಸೀಸ್‌ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಅವರ ಅರ್ಧಶತಕದಿಂದ ತಂಡ ಸಾಧಾರಣ ಮೊತ್ತ ಪೇರಿಸುವಂತಾಯಿತು. 82 ಎಸೆತ ಎದುರಿಸಿದ ಅವರು 62 ರನ್‌ ಹೊಡೆದರು. ಅಗ್ರ ಕ್ರಮಾಂಕದ ಉಳಿದ ಆಟಗಾರರು ಉತ್ತಮವಾಗಿ ಆಡಲು ವಿಫ‌ಲರಾದರು.

ಕೊನೆ ಹಂತದಲ್ಲಿ ಅಥರ್ವ ಅಮೋಲೆಕರ್‌ ಮಿಂಚಿನ ಆಟ ಆಡಿದ್ದರಿಂದ ತಂಡದ ಮೊತ್ತ 200ರ ಗಡಿ ದಾಟಿತು. ಅಥರ್ವ 54 ಎಸೆತಗಳಲ್ಲಿ 55 ಮತ್ತು ಬಿಷ್ಣೋಯಿ 35 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರು
ಭಾರತ 9 ವಿಕೆಟಿಗೆ 233 (ಯಶಸ್ವಿ ಜೈಸ್ವಾಲ್‌ 62, ಸಿದ್ದೇಶ್‌ ವೀರ್‌ 25, ಅಥರ್ವ ಅಂಕೋಲೆಕರ್‌ 55, ರವಿ ಬಿಷ್ಣೋಯಿ 30, ಕೋರೆ ಕೆಲ್ಲಿ 45ಕ್ಕೆ 2, ಟಾಡ್‌ ಮರ್ಫಿ 40ಕ್ಕೆ 2); ಆಸ್ಟ್ರೇಲಿಯ 43.3 ಓವರ್‌ಗಳಲ್ಲಿ 159ಕ್ಕೆ ಆಲೌಟ್‌ (ಸ್ಯಾಮ್‌ ಫ‌ನ್ನಿಂಗ್‌ 75, ಲಿಯಮ್‌ ಸ್ಕಾಟ್‌ 35, ಕಾರ್ತಿಕ್‌ ತ್ಯಾಗಿ 24ಕ್ಕೆ 4, ಆಕಾಶ್‌ ಸಿಂಗ್‌ 30ಕ್ಕೆ 3).

ಟಾಪ್ ನ್ಯೂಸ್

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.