ಸವಾಲು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ


Team Udayavani, Jan 30, 2020, 3:00 AM IST

savalu-edu

ಮೈಸೂರು: 4ನೇ ತಂಡದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ತರಬೇತಿ ಪಡೆದ 239 ಮಂದಿ ಪ್ರಶಿಕ್ಷಾಣಾರ್ಥಿಗಳ ತಂಡ ಆಕರ್ಷಕ ನಿರ್ಗಮನ ಪಥ ಸಂಚಲನ ಪ್ರದರ್ಶಿಸಿದರು.

ಜ್ಯೋತಿನಗರದ ಡಿಎಆರ್‌ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್‌ ತರಬೇತಿ ಶಾಲೆ ವತಿಯಿಂದ 4ನೇ ತಂಡದ ಮಹಿಳಾ ನಾಗರಿಕ ಪೊಲೀಸ್‌ ಕಾನ್‌ಸ್ಟೆಬಲ್‌, ರೈಲ್ವೇಸ್‌ ಮತ್ತು ಕೆಎಸ್‌ಐಎಸ್‌ಎಫ್ ಪ್ರಶಿಕ್ಷಣಾರ್ಥಿಗಳ ಪಥ ಸಂಚಲನದಲ್ಲಿ 194 ಮಂದಿ ಮಹಿಳಾ ನಾಗರಿಕ ಪೊಲೀಸ್‌ ಕಾನ್‌ಸ್ಟೆಬಲ್‌, 27 ಮಂದಿ ರೈಲ್ವೇಸ್‌ ಮಹಿಳಾ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ 18 ಮಂದಿ ಕೆಎಸ್‌ಐಎಸ್‌ಎಫ್ ಕಾನ್‌ಸ್ಟೆಬಲ್‌ ಪ್ರಶಿಕ್ಷಾಣಾರ್ಥಿಗಳು ನಿರ್ಗಮನ ಪಥಸಂಚಲನ ನಡೆಸಿಕೊಟ್ಟರು.

ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸಬೇಕು: ಪ್ರಶಿಕ್ಷಾಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ತರಬೇತಿ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಎಸ್‌. ರವಿ ಮಾತನಾಡಿ, ಕಳೆದ ಎಂಟು ತಿಂಗಳಿನಿಂದ ಸೂಕ್ತ ತರಬೇತಿ ಪಡೆದು, ಕೆಲಸಕ್ಕೆ ನಿಯುಕ್ತಿಗೊಂಡ ಮೇಲೆ ಶ್ರೇಷ್ಠ ಕಾರ್ಯ ವೈಖರಿ ಮೂಲಕ ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಧೈರ್ಯ ಮತ್ತು ಸಾಹಸ ಪ್ರವೃತ್ತಿ ಇರಲಿ: ಪೊಲೀಸ್‌ ಇಲಾಖೆ ತುಂಬಾ ಕಟ್ಟುನಿಟ್ಟಾದ ಇಲಾಖೆಯಾಗಿದ್ದು, ಇಲ್ಲಿ ಕೆಲಸ ಮಾಡಲು ಬರುವವರು ಧೈರ್ಯ ಮತ್ತು ಸಾಹಸ ಪ್ರವೃತ್ತಿ ಮನೋಭಾವ ಹೊಂದಿರುವವರಾಗಿರಬೇಕು. ಜೊತೆಗೆ ತರಬೇತಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ತುಂಬಲಾಗುತ್ತದೆ. ನೀವುಗಳು ಕೆಲಸಕ್ಕೆ ನಿಯುಕ್ತಿಯಾದ ನಂತರ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಲು, ಜ್ಞಾನ, ಕೌಶಲ್ಯ, ಮೌಲ್ಯ ಹಾಗೂ ಸರಿಯಾದ ಮನೋಭಾವವನ್ನು ತರಬೇತಿಯಲ್ಲಿ ತಿಳಿಸಿಕೊಡಲಾಗಿದೆ. ಈ ನಾಲ್ಕು ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಇತರರಂತೆ ಸಮರ್ಥವಾಗಿ ಕೆಲಸ ನಿರ್ವಹಿಸಿ: ಕರ್ತವ್ಯಕ್ಕೆ ಸೇರ್ಪಡೆಯಾದ ನಂತರ ಮಹಿಳಾ ಪೇದೆಗಳು ಸರಳ ಕೆಲಸಗಳಾದ ಸೆಂಟ್ರಿ, ವೈರ್‌ಲೆಸ್‌ ಹಾಗೂ ಕಂಪ್ಯೂಟರ್‌ ವಿಭಾಗಗಳಲ್ಲಿ ಕೆಲಸ ಮಾಡಲು ಹೆಚ್ಚು ಉತ್ಸುಕರಾಗುತ್ತಾರೆ ಎಂಬ ಅಪವಾದಗಳು ಇವೆ. ನೀವುಗಳು ಈ ಪ್ರವೃತ್ತಿಯನ್ನು ಬಿಟ್ಟು ಇತರರಂತೆ ಸಮರ್ಥವಾಗಿ ಕೆಲಸ ನಿರ್ವಹಿಸಬೇಕು. ರಾತ್ರಿ ಪಾಳಿ ಎಂದು ಹಿಂಜರಿಯದೇ ಇಲಾಖೆಯ ಎಲ್ಲಾ ಕೆಲಸಗಳಲ್ಲೂ ಭಾಗಿಯಾಗಿ ಎಂದು ಕಿವಿಮಾತು ಹೇಳಿದರು.

ಹೊಣೆಗಾರಿಕೆ ನಿಮ್ಮ ಮೇಲಿದೆ: ಕೆಎಸ್‌ಐಎಸ್‌ಎಫ್ ವಿಭಾಗವು ಹೊಸದಾಗಿದ್ದು, ಈ ಕೆಲಸ ಸವಾಲಿನದ್ದಾಗಿದೆ. ಇಲ್ಲಿ ಕೆಲಸ ಮಾಡುವವರು ಮೈಯೆಲ್ಲ ಕಣ್ಣಾಗಿ ಕಾರ್ಯನಿರ್ವಹಿಸಬೇಕು. ಮೆಟ್ರೋ ರೈಲ್ವೇ ಸ್ಟೇಷನ್‌ನಂತಹ ಸ್ಥಳಗಳಲ್ಲಿ ನಿಮ್ಮನ್ನು ನಿಯುಕ್ತಿಗೊಳಿಸಲಾಗುತ್ತದೆ. ಜೊತೆಗೆ ರೈಲ್ವೇ ವಿಭಾಗದ ಪೊಲೀಸರಿಗೂ ಹೆಚ್ಚು ಸವಾಲುಗಳಿವೆ. ಲಕ್ಷಾಂತರ ಜನರು ಪ್ರತಿನಿತ್ಯ ಸಂಚರಿಸುವ ರೈಲು ಹಾಗೂ ನಿಲ್ದಾಣಗಳಲ್ಲಿ ಕೆಲಸ ಮಾಡುವುದು ಸುಲಭವಲ್ಲ. ಪ್ರತಿ ಕೆಲಸಗಳಲ್ಲೂ ಸವಾಲುಗಳು ಇರುತ್ತವೆ. ಆದರೆ ಅದನ್ನು ಸಮರ್ಥವಾಗಿ ನಿಭಾಯಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದರು.

ಕೌಶಲ್ಯಗಳನ್ನು ಪ್ರತಿನಿತ್ಯವೂ ಮುಂದುವರೆಸಿ: ಇಲಾಖೆಗೆ ಸೇರಿದ ಮೇಲೆ ಕರ್ತವ್ಯಕ್ಕೆ ಎಷ್ಟು ಒತ್ತು ನೀಡುತ್ತೀರೋ ಹಾಗೆಯೇ ವೈಯಕ್ತಿಕ ಜೀವನದತ್ತಲೂ ಗಮನ ಹರಿಸಬೇಕು. ಸುಂದರವಾಗಿ ಬದುಕು ನಡೆಸಲು ವೈಯಕ್ತಿಕ ಜೀವನವನ್ನು ಸರಿಯಾದ ರೀತಿ ರೂಪಿಸಿಕೊಳ್ಳಿ. ಹಾಗೆಯೇ ತರಬೇತಿಯಲ್ಲಿ ಪಡೆದುಕೊಂಡ ವ್ಯಾಯಾಮ, ಇತರೆ ಕೌಶಲ್ಯಗಳನ್ನು ಪ್ರತಿನಿತ್ಯವೂ ಮುಂದುವರೆಸಿ ಎಂದು ಹೇಳಿದರು. ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರಾದ ಡಾ. ಧರಣಿದೇವಿ ಮಾಲಗತ್ತಿ ಇದ್ದರು.

ಪ್ರಶಸ್ತಿ ವಿಜೇತರ ವಿವರ: 4ನೇ ತಂಡದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ತರಬೇತಿಯಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರಿಗೆ ಬಹುಮಾನ ವಿತರಿಸಲಾಯಿತು.

ಅತ್ಯತ್ತಮ ಪ್ರಶಿಕ್ಷಣಾರ್ಥಿ: ಬಳ್ಳಾರಿ ಜಿಲ್ಲೆಯ ರಾಧಾ ಅತ್ಯುತ್ತಮ ಪ್ರಶಿಕ್ಷಣಾರ್ಥಿಯಾಗಿ ಹೊರಹೊಮ್ಮಿದ್ದು ಸರ್ವೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು.

ಒಳಾಂಗಣ ವಿಭಾಗ: ರೈಲ್ವೇಸ್‌ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರಬೀತಾ ಜಿ.ಎಲ್‌. ಅವರು ಒಳಾಂಗಣದಲ್ಲಿ ಪ್ರಥಮ ಬಹುಮಾನ ಪಡೆದರೆ, ಬಳ್ಳಾರಿ ಜಿಲ್ಲೆಯ ರಾಧ ದ್ವಿತೀಯ ಹಾಗೂ ರಾಯಚೂರು ಜಿಲ್ಲೆಯ ಶೇಖವ್ವ ತೃತೀಯ ಸ್ಥಾನ ಪಡೆದುಕೊಂಡರು.

ಹೊರಾಂಗಣ ವಿಭಾಗ: ಬಳ್ಳಾರಿ ಜಿಲ್ಲೆಯ ಎಂ. ದುರ್ಗಾ ಹೊರಾಂಗಣ ವಿಭಾಗದಲ್ಲಿ ಪ್ರಥಮ, ವಾಣಿಶ್ರೀ ಕೊಳ್ಳಿ ದ್ವಿತೀಯ, ಬೀದರ್‌ ಜಿಲ್ಲೆಯ ಸೋನಾಲಿ ದ್ವಿತೀಯ, ಲಕ್ಷ್ಮೀ ಪ್ರಕಾಶ್‌ ಗಡಾದ ತೃತೀಯ ಬಹುಮಾನ ಪಡೆದುಕೊಂಡರು.

ಫೈರಿಂಗ್‌ ವಿಭಾಗ: ರಾಯಚೂರು ಜಿಲ್ಲೆಯ ಅಂಬಿಕಾ ಫೈರಿಂಗ್‌ನಲ್ಲಿ ಪ್ರಥಮ, ಶೋಭಾ ಸಂಗಪ್ಪ ಬಳವಾಡ ದ್ವಿತೀಯ ಹಾಗೂ ಎಂ. ದುರ್ಗ ತೃತೀಯ ಬಹುಮಾನ ಪಡೆದರು. ಕೆಎಸ್‌ಐಎಸ್‌ಎಫ್ ವಿಭಾಗದಲ್ಲಿ ಶಿವಲೀಲಾ ಕೊಟ್ಟೂರು ಅತ್ಯುತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿ ಪಡೆದುಕೊಂಡರು. ನಿರ್ಗಮನ ಪಥಸಂಚಲನ ನೋಡಲು ಪ್ರಶಿಕ್ಷಣಾರ್ಥಿಗಳ ಪೋಷಕರು ದೂರದ ಊರುಗಳಿಂದ ಆಗಮಿಸಿ ಆಕರ್ಷಕ ಪಥ ಸಂಚಲನವನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.