ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದಲವಿಲ್ಲ


Team Udayavani, Jan 30, 2020, 3:00 AM IST

samputa-vista

ಚನ್ನರಾಯಪಟ್ಟಣ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ನಡೆಯಲಿದ್ದು, ಮುಖ್ಯ ಮಂತ್ರಿ ಯಡಿಯೂರಪ್ಪ ಶೀಘ್ರದಲ್ಲಿ ದಿನಾಂಕ ಘೋಷಣೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ನೂತನವಾಗಿ ಪ್ರಾತಂಭವಾಗಿರುವ ಲಕ್ಷ್ಮೀನಾರಾಯಣ ಪೆಟ್ರೋಲ್‌ ಬಂಕ್‌ ಉದ್ಘಾಟನಾ ಸಮಾರಂಭಕ್ಕೆ ಮುನ್ನ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ಸಚಿವ ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಂತರದ ದಿವಸದಲ್ಲಿ ಸಿಎಂ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಪಡಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಬಹುದೆಂಬ ಆತಂಕದಿಂದ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ ಎಂಬುದಾಗಿ ವಿರೋಧ ಪಕ್ಷಗಳು ಚಾತಕ ಪಕ್ಷಿಗಳಂತೆ ಕಾಯುತ್ತಿವೆ. ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಸಚಿವ ಸಂಪುಟ ವಿಸ್ತರಣೆಯೊಂದಿಗೆ ಮೂರೂವರೆ ವರ್ಷ ಬಿಜೆಪಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಜನಪರ ಸರ್ಕಾರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಸೋತವರಿಗೆ ಸಚಿವ ಸ್ಥಾನವಿಲ್ಲ: ಮಾಜಿ ಸಚಿವ ವಿಶ್ವನಾಥ್‌ ಮಂತ್ರಿ ಸ್ಥಾನ ಕೇಳುವುದು ಸಹಜ. ಆದರೆ ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಏನು ಹೇಳಿದೆಯೋ ಅದರಂತೆ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಈ ಸರ್ಕಾರ ರಚಿಸಲು ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ವಿಶ್ವನಾಥ್‌ ಪಟ್ಟು ಹಿಡಿದಿದ್ದಾರೆ. ಇವರನ್ನು ಸಿಎಂ ಸಮಾಧಾನ ಮಾಡಲಿದ್ದಾರೆ, ಶಾಸಕರಾಗದೇ ಚುನಾವಣೆಯಲ್ಲಿ ಸೋತವರಿಗೆ ಯಾವುದೇ ಕಾರಣಕ್ಕೆ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಪರೋಕ್ಷವಾಗಿ ಸ್ಪಷ್ಟಪಡಿಸಿದರು.

ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದಿದೆ, ಹೀಗಾಗಿ ಸೋತವರ ಬಗ್ಗೆ ಬಿಜೆಪಿಯ ರಾಜ್ಯ, ರಾಷ್ಟ್ರೀಯ ವರಿಷ್ಠರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಮಾಡಲಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದವರಿಗೆಲ್ಲಾ ಬಿಜೆಪಿಯಿಂದ ಒಳ್ಳೆಯದಾಗಲಿದೆ ಎಂದರು.

ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂಬ ವಿಚಾರಕ್ಕೆ ಅದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು, ಇದರಲ್ಲಿ ನನ್ನ ಪಾತ್ರವಿಲ್ಲ ಮಾಜಿ ಮಂತ್ರಿ ಆರ್‌.ಶಂಕರ್‌ ಅವರಿಗೂ ಮುಂದಿನ ದಿವಸದಲ್ಲಿ ಖಂಡಿತ ಒಳ್ಳೆಯದಾಗುತ್ತದೆ. ಆಡಳಿತ ಪಕ್ಷಕ್ಕಿಂತ ವಿರೋಧ ಪಕ್ಷದವರಿಗೆ ಮಂತ್ರಿ ಮಂಡಲದ ಮೇಲೆ ಹೆಚ್ಚು ಆಸಕ್ತಿ ಇರುವುದು ಏಕೆ ಎಂದು ಪ್ರಶ್ನಿಸಿದರು.

ಪಕ್ಷ ನಿಷ್ಠರಿಗೆ ಅಧಿಕಾರ: ನಮ್ಮ ಪಕ್ಷದಲ್ಲಿರುವ ಎಲ್ಲಾ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಗೌರವ ಸ್ಥಾನಮಾನ ದೊರಕಿದ್ದು, ಮುಂದಿನ ದಿವಸದ‌ಲ್ಲಿಯೂ ಪಕ್ಷಕ್ಕಾಗಿ ದುಡಿಯುವ ನಿಷ್ಠಾವಂತರಿಗೆ ಅಧಿಕಾರ ದೊರೆಯುತ್ತದೆ. ಮುಖ್ಯಮಂತ್ರಿಗಳು ಕಾನೂನು ಚೌಕಟ್ಟಿನಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.